ಶ್ರೀಕೃಷ್ಣನ ಗೋವರ್ಧನ ಗಿರಿ ಕಲ್ಲು ಆನ್ಲೈನ್ನಲ್ಲಿ ಮಾರಾಟ!
ಮಥುರಾ, ಫೆಬ್ರವರಿ 8: ಶ್ರೀಕೃಷ್ಣಪರಮಾತ್ಮನ ಲೀಲೆಗಳಲ್ಲಿ ಪ್ರಮುಖ ಸ್ಥಾನ ಪಡೆದಿರುವ ಗೋವರ್ಧನ ಗಿರಿಯ ಕಲ್ಲುಗಳನ್ನು ಆನ್ ಲೈನ್ ನಲ್ಲಿ ಮಾರಾಟಕ್ಕೆ ಯತ್ನಿಸಿದ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಇ ಕಾಮರ್ಸ್ ತಾಣ ಇಂಡಿಯಾಮಾರ್ಟ್ ಸಿಇಒ ಸೇರಿದಂತೆ ಮೂವರ ವಿರುದ್ಧ ಮಧುರಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಎಫ್ಐಆರ್ ಹಾಕಲಾಗಿದೆ.
ಹಿಂದುಗಳ ಪಾಲಿನ ಪವಿತ್ರ ಯಾತ್ರಾಸ್ಥಳ ಮಥುರಾದಲ್ಲಿರುವ ಗೋವರ್ಧನ ಗಿರಿಯಿಂದ ಆಯ್ದ ಶಿಲೆಗಳನ್ನು ಆನ್ ಲೈನ್ ನಲ್ಲಿ ಮಾರಾಟಕ್ಕಿಡಲಾಗಿತ್ತು. ಈ ಬಗ್ಗೆ ವಿಷಯ ತಿಳಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇ ಕಾಮರ್ಸ್ ಸಂಸ್ಥೆ ಸಿಇಒ ಹಾಗೂ ಪೂರೈಕೆದಾರರ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರು ಆಗ್ರಹಿಸಿ, ದೂರು ನೀಡಿದ್ದಾರೆ. ಧಾರ್ಮಿಕ ಭಾವನೆಗೆ ಧಕ್ಕೆ ಹಾಗೂ ಮಾಹಿತಿ ಹಕ್ಕು ಕಾಯ್ದೆ ಉಲ್ಲಂಘನೆ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಗ್ರಾಮೀಣ ವಿಭಾಗದ ಎಸ್ಪಿ ಶಿರೀಶ್ ಚಂದ್ರ ಹೇಳಿದ್ದಾರೆ.
ಇಂಡಿಯಾಮಾರ್ಟ್ ಸಿಇಒ ದಿನೇಶ್ ಅಗರವಾಲ್, ಸಹ ಸ್ಥಾಪಕ ಬ್ರಜೇಶ್ ಅಗರವಾಲ್ ಹಾಗೂ ಮಥುರಾ ಮೂಲದ ಪೂರೈಕೆದಾರ ಅಂಕುರ್ ಅಗರವಾಲ್ ಎಂಬುವರ ಮೇಲೆ ಐಪಿಸಿ ಸೆಕ್ಷನ್ 265, ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66ರ ಅನ್ವಯ ಪ್ರಕರಣ ದಾಖಲಾಗಿದ್ದು, ಎಫ್ಐಆರ್ ಹಾಕಲಾಗಿದೆ. ಮಥುರಾದ ಸಾಮಾಜಿಕ ಕಾರ್ಯಕರ್ತ ಕೇಶವ್ ಮುಖಿಯಾ ಎಂಬುವರು ಗೋವರ್ಧನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇನ್ನು ಅನೇಕ ಸ್ಥಳೀಯರು ದೂರು ನೀಡಿದ್ದಾರೆ ಎಂದು ಎಸ್ಪಿ ಶಿರೀಶ್ ಹೇಳಿದರು.

ಗೋವರ್ಧನ ಗಿರಿ ಶಿಲೆ ಬೆಲೆ ಎಷ್ಟು?
ಇದು ನೈಸರ್ಗಿಕ ಶಿಲೆ ಎಂಬ ಅಡಿಬರಹದೊಂದಿಗೆ ಶಿಲೆಯ ಚೂರೊಂದಕ್ಕೆ 5,175 ರು ಬೆಲೆ ಕಟ್ಟಲಾಗಿದೆ. ಆನ್ ಲೈನ್ ನಲ್ಲಿ ಈ ಬಗ್ಗೆ ಹೆಚ್ಚಿನ ಪ್ರಸಾರವಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಎಸ್ಪಿ ಶಿರೀಶ್ ತಿಳಿಸಿದರು.
''ಶ್ರೀಕೃಷ್ಣ ನೆಲೆಸಿರುವ ಗೋವರ್ಧನ ಗಿರಿಯನ್ನು ಮಾರುವುದೆಂದರೆ ಕೃಷ್ಣನನ್ನು ಮಾರಾಟಕ್ಕೆ ಇಟ್ಟಿದ್ದಂತೆ, ಗೋವರ್ಧನವನ್ನು ಮಾರಲು ಯತ್ನಿಸಿದವರನ್ನು ಕೃಷ್ಣನೇ ನೋಡಿಕೊಳ್ಳುತ್ತಾನೆ'' ಎಂದು ಮಥುರಾದ ಸಂತ ಸಿಯಾರಾಮ್ ಬಾಬಾ ಪ್ರತಿಕ್ರಿಯಿಸಿದ್ದಾರೆ. ಉತ್ತರಪ್ರದೇಶ ಬ್ರಾಹ್ಮಣ ಮಹಾಸಭಾದ ಸದಸ್ಯರು ಮಥುರಾ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಘಟನೆ ಬಗ್ಗೆ ಚರ್ಚಿಸಿ, ಕಠಿಣ ಕ್ರಮ ಕೈಗೊಳ್ಳುವಂತೆ ಕೋರಲು ಮುಂದಾಗಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications