ಉಗ್ರದಾಳಿ ಸಾಧ್ಯತೆ, ಗುಪ್ತಚರ ಮಾಹಿತಿ ನಂತರ ಅಯೋಧ್ಯೆಯಲ್ಲಿ ಕಟ್ಟೆಚ್ಚರ
ಅಯೋಧ್ಯೆ, ಜೂನ್ 15: ಉತ್ತರ ಪ್ರದೇಶದ ಪವಿತ್ರ ನಗರ ಅಯೋಧ್ಯೆಯಲ್ಲಿ ಉಗ್ರ ದಾಳಿ ನಡೆಯುವ ಸಂಭವವಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದು, ನಗರದಾದ್ಯಂತ ಕಟ್ತೆಚ್ಚರ ವಹಿಸಲಾಗಿದೆ.
ನೆರೆಯ ನೇಪಾಳದಿಂದ ಉಗ್ರರು ಉತ್ತರ ಪ್ರದೇಶದೊಳಕ್ಕೆ ನುಗ್ಗುವ ಸಾಧ್ಯತೆ ಇದ್ದು, ಉಗ್ರ ದಾಳಿಯ ಸಂಚು ರೂಪಿಸಿದ್ದಾರೆ ಎನ್ನಲಾಗಿದೆ.
ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ಅಯೋಧ್ಯೆ ಮತ್ತು ಉತ್ತರ ಪ್ರದೇಶದ ಇತರ ನಗರಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಸಿಸಿಟಿವಿ ಕ್ಯಾಮರಾ ಮತ್ತು ಹೆಚ್ಚಿನ ರಕ್ಷಣಾ ಪಡೆಯನ್ನು ನಿಯೋಜಿಸಲಾಗಿದ್ದು, ಸಂಶಯಾಸ್ಪದ ನಡೆಗಳು ಕಂಡು ಬಂದಲ್ಲಿ ಕೂಡಲೇ ವಿಚಾರಣೆ ನಡೆಸುವಂತೆ ಸೂಚಿಸಲಾಗಿದೆ.

ನೆರೆ ರಾಜ್ಯದಿಂದ ಉತ್ತರ ಪ್ರದೇಶಕ್ಕೆ ಬರುವ ಮತ್ತು ಉತ್ತರ ಪ್ರದೇಶದ ಇತರ ನಗರಗಳಿಂದ ಅಯೋಧ್ಯೆಗೆ ಬರುವ ಬಸ್ಸು, ರೈಲುಗಳನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಲಾಗುತ್ತಿದೆ. ಅನುಮಾನಾಸ್ಪದ ಖಾಸಗಿ ವಾಹನಗಳನ್ನೂ ತಪಾಸಣೆಗೊಳಪಡಿಸಲಾಗುತ್ತಿದೆ.
2005 ರ ಜುಲೈ 5 ರಂದು ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ನಡೆದ ಉಗ್ರ ದಾಳಿಯ ತೀರ್ಪು ಜೂನ್ 18 ರಂದು ಹೊರಬೀಳಲಿದ್ದು, ಜೂನ್ 16 ರಂದು ಶಿವಸೇನೆ ಮುಖಂಡ ಉದ್ಧವ್ ಠಾಕ್ರೆ ಅವರೊಂದಿಗೆ ಆ ಪಕ್ಷದ 18 ಸಂಸದರು ಅಯೋಧ್ಯೆಗೆ ತೆರಳಲಿದ್ದಾರೆ. ಈ ಎಲ್ಲಾ ಮಹತ್ವದ ಘಟನೆಗಳ ಹಿನ್ನೆಲೆಯಲ್ಲಿ ಉಗ್ರದಾಳಿಯ ಕುರಿತೂ ಮಾಹಿತಿ ಲಭ್ಯವಾಗಿದ್ದು, ಕಟ್ತೆಚ್ಚರ ವಹಿಸಲಾಗಿದೆ.
2005 ರಲ್ಲಿ ಐವರು ಉಗ್ರರು ರಾಮಜನ್ಮಭೂಮಿಯ ಮೇಲೆ ದಾಳಿ ನಡೆಸಿದ್ದರು. ಆದರೆ ಐವರನ್ನೂ ಅಲ್ಲಿಯೇ ಹೊಡೆದುರುಳಿಸಲಾಗಿತ್ತು. ಈ ಘಟನೆಯಲ್ಲಿ ಓರ್ವ ನಾಗರಿಕ ಮೃತನಾದರೆ, ಮೂವರು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications