ಅಯೋಧ್ಯಾ ರಾಮ ಮಂದಿರ ಮೇಲೆ ಪಾಕ್ ಐಎಸ್ಐ ಕಣ್ಣು!
ನವದೆಹಲಿ, ಜುಲೈ 29: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಗಾಗಿ ಸಕಲ ಸಿದ್ಧತೆ ಭರದಿಂದ ಸಾಗಿದೆ. ಈ ನಡುವೆ ರಾಮ ಮಂದಿರದ ಮೇಲೆ ಪಾಕಿಸ್ತಾನದ ಇಂಟರ್ ಸರ್ವೀಸ್ ಇಂಟಲಿಜೆನ್ಸ್(ಐಎಸ್ಐ) ಕಣ್ಣು ಬಿದ್ದಿದೆ ಎಂದು ರಿಸರ್ಚ್ ಹಾಗೂ ಇಂಟಲಿಜೆನ್ಸ್ ವಿಂಗ್(R&AW) ಮಾಹಿತಿ ನೀಡಿದೆ. ಆಗಸ್ಟ್ 5ರಂದು ಮಂದಿರ ಶಂಕುಸ್ಥಾಪನೆಯಾಗಲಿದ್ದು, ಆಗಸ್ಟ್ 15ರಂದು ಅಯೋಧ್ಯೆ ಮೇಲೆ ದಾಳಿಗೆ ಉಗ್ರರು ಸಂಚು ರೂಪಿಸಿದ್ದು, ಇದಕ್ಕೆ ಐಎಸ್ಐ ನೆರವು ನೀಡುತ್ತಿದೆ ಎಂಬ ಸುದ್ದಿ ಬಂದಿದೆ.
Recommended Video
ಐಎಸ್ಐ ಬೆಂಬಲಿತ ಲಷ್ಕರ್ ಇ ತೋಯ್ಬಾ ಹಾಗೂ ಜೈಶ್ ಎ ಮೊಹಮ್ಮದ್ ಉಗ್ರರು, ಅಯೋಧ್ಯೆ ಸೇರಿದಂತೆ ಭಾರತದ ಧಾರ್ಮಿಕ ಕೇಂದ್ರಗಳ ಮೇಲೆ ದಾಳಿ ನಡೆಸಲು ಸಜ್ಜಾಗುತ್ತಿದ್ದಾರೆ. ಮೂರರಿಂದ ಐದು ಉಗ್ರ ಸಂಘಟನೆಗಳು ಈ ದುಷ್ಕೃತ್ಯ ಎಸಗಲು ಸಂಚು ರೂಪಿಸಿವೆ ಎಂದು ರಾ ವರದಿ ಮಾಡಿದೆ.
ಭಾರತದಲ್ಲಿ ಆಂತರಿಕ ಕಿತ್ತಾಟದಿಂದ ಧಾರ್ಮಿಕ ಕೇಂದ್ರಗಳಿಗೆ ಹಾನಿಯುಂಟಾಗುವಂಥ ಸಂಚು ರೂಪಿಸಲಾಗಿದೆ. ವಿವಿಐಪಿಗಳನ್ನು ಗುರಿಯನ್ನಾಗಿಸಿಕೊಂಡು ದಾಳಿ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಎಚ್ಚರಿಕೆ ಸಂದೇಶ ಬಂದಿದೆ. ಹೀಗಾಗಿ, ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿನ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಆಗಸ್ಟ್ 5ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಅಧಿಕಾರ ನೀಡಿದ್ದ ಆರ್ಟಿಕಲ್ 370 ರದ್ದುಗೊಳಿಸಿದ ದಿನವಾಗಿದೆ. ಅಂದೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ನೆರವೇರಿಸಲಿದ್ದಾರೆ. ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವ ಸಂಭ್ರಮಕ್ಕೂ ದೇಶ ಸಿದ್ಧವಾಗುತ್ತಿದೆ. ಈ ನಿಟ್ಟಿನಲ್ಲಿ ಈ ಪ್ರಮುಖ ದಿನಾಂಕಗಳಂದು ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಎಚ್ಚರಿಕೆ ವಹಿಸಿ, ಪ್ರಮುಖ ತಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications