ಎಪಿಜೆ ಅಬ್ದುಲ್ ಕಲಾಂ ಒಬ್ಬ 'ಜಿಹಾದಿ': ಗಾಜಿಯಾಬಾದ್ ಅರ್ಚಕ ಆರೋಪ
ಗಾಜಿಯಾಬಾದ್, ಮಾರ್ಚ್ 25: ದೇವಸ್ಥಾನ ಪ್ರವೇಶಿಸಿದ್ದಕ್ಕೆ ಮುಸ್ಲಿಂ ಬಾಲಕನನ್ನು ಥಳಿಸಿದ ಪ್ರಕರಣ ಇತ್ತೀಚೆಗೆ ದೇಶಾದ್ಯಂತ ಸುದ್ದಿಯಾಗಿತ್ತು. ಈಗ ಅದೇ ದೇವಸ್ಥಾನದ ಅರ್ಚಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಧರ್ಮವನ್ನು ಗುರಿಯನ್ನಾಗಿರಿಸಿ ಹೇಳಿಕೆ ನೀಡಿರುವ ದಾಸ್ನಾ ದೇವಿ ದೇವಾಲಯದ ಅರ್ಚಕ, ಕಲಾಂ ಅವರನ್ನು 'ಜಿಹಾದಿ' ಎಂದು ಕರೆದಿದ್ದಾರೆ.
ಅಲಿಗಡದಲ್ಲಿ ಮಾತನಾಡಿದ ದಾಸ್ನಾ ದೇವಿ ದೇವಸ್ಥಾನದ ಯತಿ ನರಸಿಂಗಾನಂದ ಸರಸ್ವತಿ, 'ದೇಶದಲ್ಲಿ ಪ್ರಮುಖ ಹುದ್ದೆಯ ಅಧಿಕಾರದಲ್ಲಿರುವ ಯಾವುದೇ ಮುಸ್ಲಿಂ, ಭಾರತದ ಪರವಾಗಿರಲು ಸಾಧ್ಯವೇ ಇಲ್ಲ. ಕಲಾಂ ಒಬ್ಬ ಜಿಹಾದಿ' ಎಂದು ಹೇಳಿದ್ದಾರೆ.
'ದಿವಂಗತ ಎಪಿಜೆ ಕಲಾಂ ಅವರು ಡಿಆರ್ಡಿಒ ಮುಖ್ಯಸ್ಥರಾಗಿದ್ದಾಗ ಅಟಂ ಬಾಂಬ್ನ ಫಾರ್ಮುಲಾವನ್ನು ಪಾಕಿಸ್ತಾನಕ್ಕೆ ನೀಡಿದ್ದರು. ಕಲಾಂ ಅವರು ರಾಷ್ಟ್ರಪತಿ ಭವನದಲ್ಲಿ ಒಂದು ಘಟಕವನ್ನು ತೆರೆದಿದ್ದರು. ಅಲ್ಲಿಯಾವುದೇ ಮುಸ್ಲಿಮರು ತಮ್ಮ ಅಹವಾಲು ಸಲ್ಲಿಸಬಹುದಾಗಿತ್ತು' ಎಂದು ಅವರು ಆರೋಪಿಸಿದ್ದಾರೆ.

ನೀರು ಕುಡಿಯುವ ಸಲುವಾಗಿ ದೇವಸ್ಥಾನದ ಒಳಗೆ ಪ್ರವೇಶಿಸಿದ್ದ ಮುಸ್ಲಿಂ ಬಾಲಕನನ್ನು ವ್ಯಕ್ತಿಯೊಬ್ಬ ಥಳಿಸುವ ವಿಡಿಯೋ ವೈರಲ್ ಆಗಿತ್ತು. ಈ ಸಂಬಂಧ ಶ್ರಿಂಗಿ ನಂದ ಯಾದವ್ ಎಂಬಾತನನ್ನು ಬಂಧಿಸಲಾಗಿತ್ತು. ಆದರೆ ದೇವಸ್ಥಾನದ ಹೊರಗೆ ನೀರಿನ ಬೋರ್ವೆಲ್ ಇದ್ದರೂ, ಆ ಬಾಲಕ ಒಳಗೆ ಹೋಗಿದ್ದ. ಆತ ಕಳ್ಳತನ ಮಾಡಲು ಒಳಗೆ ಪ್ರವೇಶಿಸಿದ್ದ ಎಂದು ಅನೇಕರು ಶ್ರಿಂಗಿ ಯಾದವ್ನನ್ನು ಸಮರ್ಥಿಸಿಕೊಂಡಿದ್ದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications