ಕಮಲೇಶ್ ತಿವಾರಿ ಕೊಲೆ ಪ್ರಮುಖ ಆರೋಪಿ 2 ತಿಂಗಳ ಹಿಂದಷ್ಟೇ ದುಬೈನಿಂದ ಬಂದಿದ್ದ
ಲಖನೌ, ಅಕ್ಟೋಬರ್ 20: ಲಖನೌದಲ್ಲಿ ನಡೆದ ಹಿಂದೂ ಸಂಘಟನೆ ನಾಯಕ ಕಮಲೇಶ್ ತಿವಾರಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬ ಎರಡು ತಿಂಗಳ ಹಿಂದಿನ ತನಕ ದುಬೈ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಗುಜರಾತ್ ನ ಸೂರತ್ ಗೆ ಕುಟುಂಬದ ಮದುವೆಗೆ ವಾಪಸಾಗಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇಪ್ಪತ್ಮೂರು ವರ್ಷದ ರಶೀದ್ ಪಠಾಣ್ ಸೂರತ್ ನಲ್ಲಿರುವ ಲಿಂಬಾಯತ್ ನ ಜಿಲ್ಲಾನಿ ಮಂಜಿಲ್ ನವನು. ಆತನ ನೆರೆಮನೆಯಾತ ಇಪ್ಪತ್ತೊಂದು ವರ್ಷದ ಫೈಜಾನ್ ಮತ್ತು ಇಪ್ಪತ್ನಾಲ್ಕು ವರ್ಷದ ಮೌಲಾನಾ ಸಲೀಂ ಶೇಖ್ ಅನ್ನು ಶನಿವಾರ ಬಂಧಿಸಿ, ಅಹ್ಮದಾಬಾದ್ ಗೆ ಕರೆತರಲಾಗಿದೆ.
ಉತ್ತರಪ್ರದೇಶದ ಡಿಜಿಪಿ ಒ. ಪಿ. ಸಿಂಗ್ ಮಾತನಾಡಿ, ನಾಲ್ಕು ವರ್ಷದ ಹಿಂದೆ ಕಮಲೇಶ್ ತಿವಾರಿ ಮಾಡಿದ್ದ ಮುಸ್ಲಿಮರ ವಿರುದ್ಧ ಭಾಷಣದ ವಿಡಿಯೋವನ್ನು ತೋರಿಸಿ, ಇತರ ನಾಲ್ವರನ್ನು ಶೇಖ್ ಪ್ರಚೋದಿಸಿದ್ದ. ಕೊಲೆಯ ಯೋಜನೆಯನ್ನು ರಶೀದ್ ರೂಪಿಸಿದ್ದ್. ಸೂರತ್ ನ ಮಳಿಗೆಯಿಂದ ಫೈಜಾನ್ ಸಿಹಿ ತಂದಿದ್ದ ಎಂದು ಮಾಹಿತಿ ನೀಡಿದ್ದಾರೆ.

ರಶೀದ್ ಹಿಂತಿರುಗಿದ ಮೇಲೆ ಸೂರತ್ ನಲ್ಲಿ ಕೊಲೆಯ ಯೋಜನೆಯನ್ನು ರೂಪಿಸಲಾಗಿದೆ. ಶೇಖ್ ಅಷ್ಪಾಖ್ ಹುಸೇನ್ ಮತ್ತು ರಶೀದ್ ಸೋದರ ಪಠಾಣ್ ಮೊಯಿನುದ್ದೀನ್ ಅಹ್ಮದ್ ಸೇರಿ ಹಿಂದೂ ಸಮಾಜ ಪಕ್ಷದ ಸ್ಥಾಪಕನನ್ನು ಲಖನೌದ ಖುರ್ಷಿದ್ ಬಾಗ್ ಪ್ರದೇಶದಲ್ಲಿ ಶುಕ್ರವಾರ ಹತ್ಯೆ ಮಾಡಿದ್ದರು. ಅವರನ್ನು ಬಂಧಿಸಲಾಗಿದೆ.
ಏಳು ಮಂದಿಯನ್ನು ಶುಕ್ರವಾರ ಮಧ್ಯರಾತ್ರಿ ಸೂರತ್ ನಲ್ಲಿ ಬಂಧಿಸಲಾಗಿದೆ. ವಿಚಾರಣೆ ಹಾಗೂ ತನಿಖೆ ನಂತರ ಮೂವರನ್ನು ಬಂಧಿಸಲಾಗಿದೆ. ಆ ನಂತರ ಶನಿವಾರ ಅಹ್ಮದಾಬಾದ್ ಗೆ ಕರೆತರಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೊಲೆಯಾದ ಸ್ಥಳದಲ್ಲಿ ಸೂರತ್ ನ ಮಳಿಗೆಯೊಂದರ ಸಿಹಿ ಪತ್ತೆಯಾಗಿತ್ತು. ಕಾವಿ ಕುರ್ತಾ ಧರಿಸಿದ್ದ ಇಬ್ಬರು ಕೊಲೆಗಾರರು ತಿವಾರಿ ಮನೆಯ ಹೊರಗೆ ಸಿಹಿಯಿದ್ದ ಬಾಕ್ಸ್ ತಂದಿದ್ದ ದೃಶ್ಯಾವಳಿಗಳು ಸಿಸಿಟಿವಿ ಫೂಟೇಜ್ ನಲ್ಲಿ ಸೆರೆಯಾಗಿತ್ತು.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications