ಸಂಜೀತ್ ಯಾದವ್ ಅಪಹರಣ,ಕೊಲೆ ಕೇಸ್: ನಾಲ್ವರು ಪೊಲೀಸರ ಅಮಾನತು
ಕಾನ್ಪುರ, ಜುಲೈ 24: ಪೊಲೀಸರ ಎದುರೇ ಒತ್ತೆಹಣವನ್ನು ದುಷ್ಕರ್ಮಿಗಳು ಹೊತ್ತೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಸೇರಿ 4 ಮಂದಿ ಪೊಲೀಸ್ ಅಧಿಕಾರಿಗಳನ್ನು ಅಮಾನತುಮಾಡಲಾಗಿದೆ.
ಉತ್ತರ ಪ್ರದೇಶದ ಕಾನ್ಪುರದಲ್ಲಿ 28 ವರ್ಷದ ಸಂಜೀತ್ ಯಾದವ್ ಎಂಬುವವರನ್ನು ಅಪಹರಿಸಲಾಗಿತ್ತು. ಬಳಿಕ 30 ಲಕ್ಷ ಹಣಕ್ಕೆ ಅಪಹರಣಕಾರರು ಬೇಡಿಕೆ ಇಟ್ಟಿದ್ದರು.
ಪೋಷಕರು ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದರು. ಕುಟುಂಬ ಹೇಗೋ 30 ಲಕ್ಷ ರೂ ಹೊಂದಿಸಿ ಅವರು ಹೇಳಿದ ಜಾಗಕ್ಕೆ ಹಣವನ್ನು ತೆಗೆದುಕೊಂಡು ಹೋಗಿದ್ದರು.

ಪೊಲೀಸರು ಕೂಡ ಅವರ ಜೊತೆಯೇ ಇದ್ದರು. ಪೊಲೀಸರ ಕಣ್ಣೆದುರೇ ಆರೋಪಿಗಳು ದುಡ್ಡನ್ನು ತೆಗೆದುಕೊಂಡು ಪರಾರಿಯಾಗಿದ್ದರು. ಈ ಕುರಿತು ಸಂಜೀತ್ ಪೋಷಕರು ಪೊಲೀಸರು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ವ್ಯಕ್ತಿಯನ್ನು ಹತ್ಯೆ ಮಾಡಲಾಗಿದ್ದು, ಇದುವರೆಗೂ ಮೃತದೇಹ ದೊರೆತಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ವ್ಯಕ್ತಿಯನ್ನು ಹತ್ಯೆ ಮಾಡಿ ಬಳಿಕ ಹಣಕ್ಕೆ ಬೇಡಿಕೆ ಇಟ್ಟಿದ್ದರೇ? ಆರೋಪಿಗಳು ಎಂಬುದರ ಕುರಿತು ತನಿಖೆ ನಡೆಯುತ್ತಿದೆ.
ಐಪಿಎಸ್ ಅಧಿಕಾರಿ ಅಪರ್ಣಾ ಗುಪ್ತಾ ಸೇರಿ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಆದರೆ ಅಪಹರಣಕಾರರಿಗೆ ಯಾವುದೇ ಹಣ ನೀಡಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಆದರೆ ಅಪಹೃತನ ಕುಟುಂಬದವರ ಈ ಆರೋಪವನ್ನು ತಳ್ಳಿಹಾಕಿರುವ ಪೊಲೀಸರು, ಅದರಲ್ಲಿ ಸತ್ಯ ಇಲ್ಲ. ನಾವು ಕೂಡ ಅಪಹೃತನ ಪತ್ತೆಗಾಗಿ ಶ್ರಮಿಸುತ್ತಿದ್ದೇವೆ. ಆದರೂ ಪ್ರಕರಣದ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.
ಪೊಲೀಸ್ ಸಿಬ್ಬಂದಿ ಹೇಳಿದ್ದಕ್ಕೆ ಕಷ್ಟಪಟ್ಟು 30 ಲಕ್ಷ ರೂ. ಹಣ ಹೊಂದಿಸಿ, ರೈಲು ಹಳಿ ಮೇಲೆ ಹಾಕಿದ್ದೆವು. ಅದನ್ನು ಕೊಂಡೊಯ್ಯಲು ಬಂದರೂ ಪೊಲೀಸರು ದುಷ್ಕರ್ಮಿಗಳನ್ನು ಹಿಡಿಯಲು ಮುಂದಾಗಲಿಲ್ಲ ಎಂದು ದೂರಿದ್ದಾರೆ.
ಖಾಸಗಿ ಪ್ರಯೋಗಾಲಯ ಒಂದರಲ್ಲಿ ಟೆಕ್ನಿಷಿಯನ್ ಆಗಿ ಸಂಜೀತ್ ಯಾದವ್ ಕೆಲಸ ಮಾಡುತ್ತಿದ್ದರು. ಅದು ಲಕ್ನೋನಿಂದ 90 ಕಿಮೀ ದೂರದಲ್ಲಿತ್ತು.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications