Get Updates
Get notified of breaking news, exclusive insights, and must-see stories!

ಟಿಕೆಟ್ ರಾಜಕೀಯ: ಪ್ರಿಯಾಂಕಾ ಗಾಂಧಿ ವಿರುದ್ಧ ಪ್ರಿಯಾಂಕಾ ಗರಂ

ಲಕ್ನೋ, ಜನವರಿ 16: ಉತ್ತರಪ್ರದೇಶ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ನೀಡಬೇಕು ಎಂಬ ಭಾರಿ ಒತ್ತಡದಲ್ಲಿ ದೇಶದ ಅತ್ಯಂತ ಪುರಾತನ ಪಕ್ಷ ಹಲವು ತಂತ್ರಗಳನ್ನು ಅನುಸರಿಸುತ್ತಿದೆ. ಸಮಾಜದ ವಿವಿಧ ವರ್ಗಗಳ ಪ್ರತಿನಿಧಿಗಳಿಗೆ ಟಿಕೆಟ್ ಹಂಚಿಕೆ ಮೂಲಕ ಪ್ರಿಯಾಂಕಾ ಗಾಂಧಿ ಗಮನ ಸೆಳೆದಿದ್ದರು. ಆದರೆ, ಈಗ ಟಿಕೆಟ್ ರಾಜಕೀಯವೇ ಕಾಂಗ್ರೆಸ್ ಪಕ್ಷಕ್ಕೆ ಮುಳುವಾಗುತ್ತಿದೆ. ಪ್ರಿಯಾಂಕಾ ವಿರುದ್ಧ ಪ್ರಿಯಾಂಕಾ ಮೌರ್ಯ ಗರಂ ಆಗಿದ್ದಾರೆ.

ಪ್ರಿಯಾಂಕಾ ಗಾಂಧಿ ಕಾರ್ಯದರ್ಶಿಗೆ ಲಂಚ ನೀಡಲು ಸಾಧ್ಯವಿಲ್ಲ ಎಂದು ಟಿಕೆಟ್ ನಿರಾಕರಿಸಲಾಗಿದೆ ಎಂದು ಯುಪಿ ಕಾಂಗ್ರೆಸ್ ಪ್ರಚಾರದ ಪೋಸ್ಟರ್ ಹುಡುಗಿ ಕಾಂಗ್ರೆಸ್ ಕಾರ್ಯಕರ್ತೆ ಪ್ರಿಯಾಂಕಾ ಮೌರ್ಯ ಆರೋಪಿಸಿದ್ದಾರೆ.

'ಲಡ್ಕಿ ಹೂ, ಲಡ್ ಸಕ್ತಿ ಹೂ' ಅಭಿಯಾನದ ಪೋಸ್ಟರ್ ಗರ್ಲ್, ಲಂಚ ನೀಡಲು ನಿರಾಕರಿಸಿದ ಕಾರಣ ವಿಧಾನಸಭಾ ಚುನಾವಣೆಗೆ ಟಿಕೆಟ್ ನಿರಾಕರಿಸಲಾಗಿದೆ ಎಂದು ಆರೋಪಿಸಿದ್ದಾರೆ. ಇದಲ್ಲದೆ, ತಾನು ಒಬಿಸಿ ಹುಡುಗಿ ಎಂಬ ಕಾರಣಕ್ಕೆ ಟಿಕೆಟ್ ಸಿಗಲಿಲ್ಲ ಮತ್ತು ಪ್ರಿಯಾಂಕಾ ಗಾಂಧಿ ಅವರ ಕಾರ್ಯದರ್ಶಿ ಸಂದೀಪ್ ಸಿಂಗ್ ಅವರಿಗೆ ಲಂಚ ನೀಡಲು ಸಾಧ್ಯವಿಲ್ಲ ಎಂದು ಮೌರ್ಯ ಟ್ವೀಟ್ ಮಾಡಿದ್ದಾರೆ.

Know why UP Congress Campaign Poster Girl Priyanka Mourya denied Ticket

ತನಗೆ ಟಿಕೆಟ್ ನೀಡುವ ಬದಲು ತಿಂಗಳ ಹಿಂದಷ್ಟೇ ಪಕ್ಷಕ್ಕೆ ಸೇರ್ಪಡೆಯಾದ ವ್ಯಕ್ತಿಗೆ ಟಿಕೆಟ್ ನೀಡಲಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತೆ ಆರೋಪಿಸಿದ್ದಾರೆ.
ಅಪರಿಚಿತ ವ್ಯಕ್ತಿಯಿಂದ ತನಗೆ ಕರೆ ಬಂದಿತ್ತು, ಅದರಲ್ಲಿ ಕರೆ ಮಾಡಿದವರು ಟಿಕೆಟ್‌ಗೆ ಪ್ರತಿಯಾಗಿ ಹಣ ಕೇಳಿದರು, ನಿರಾಕರಿಸಿದ್ದಕ್ಕೆ ಟಿಕೆಟ್ ಸಿಕ್ಕಿಲ್ಲ ಎಂದು ಆರೋಪಿಸಿದ್ದಾರೆ.

ಈ ಪ್ರದೇಶದಲ್ಲಿ ನಾನು ಕಷ್ಟಪಟ್ಟು ಕೆಲಸ ಮಾಡಿದ ನಂತರವೂ ನನಗೆ ಯುಪಿ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ನನಗೆ ಬೇಸರವಾಗಿದೆ. 'ಲಡ್ಕಿ ಹೂ, ಲಡ್ ಸಕ್ತಿ ಹೂ'ಎಂಬ ಪ್ರಚಾರಕ್ಕೆ ನನ್ನ ಮುಖವನ್ನೇ ಬಳಸಿಕೊಂಡರು. ನನಗೆ ಲ್ಯಾಂಡ್‌ಲೈನ್ ಕರೆ ಬಂದಿತು ಮತ್ತು ಕರೆ ಮಾಡಿದವರು ನನ್ನ ಟಿಕೆಟ್‌ಗೆ ಹಣಕ್ಕಾಗಿ ಬೇಡಿಕೆಯಿಟ್ಟರು, ಆದರೆ ನಾನು ನಿರಾಕರಿಸಿದೆ. ನನಗೆ ಕೊಟ್ಟ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿದೆ, ಆದರೆ ನಾಮನಿರ್ದೇಶನಗಳನ್ನು ಮೊದಲೇ ನಿರ್ಧರಿಸಿ ಒಂದು ತಿಂಗಳ ಹಿಂದಷ್ಟೇ ಸೇರಿರುವ ವ್ಯಕ್ತಿಗೆ ನೀಡಲಾಯಿತು. ಇಂಥದ್ದೆಲ್ಲ ಇಲ್ಲಿ ನಡೆಯುತ್ತಿದೆ ಎಂಬುದನ್ನು ನಾನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಈ ಮೂಲಕ ತಿಳಿಸಲು ಬಯಸುತ್ತೇನೆ ಎಂದಿದ್ದಾರೆ.

ಇದಾದ ನಂತರ, ಪ್ರಿಯಾಂಕಾ ಗಾಂಧಿಯವರ ಕಾರ್ಯದರ್ಶಿ ಸಂದೀಪ್ ಸಿಂಗ್ ಲಂಚಕ್ಕೆ ಬೇಡಿಕೆಯಿಟ್ಟರು ಎಂದು ಮೌರ್ಯ ಆರೋಪಿಸಿದ್ದಾರೆ. ಪ್ರಿಯಾಂಕಾ ಮೌರ್ಯ ಅವರು ಲಕ್ನೋದ ಸರೋಜಿನಿ ನಗರದಿಂದ ಯುಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದರು ಆದರೆ ರುದ್ರ ದಮನ್ ಸಿಂಗ್ ಅವರಿಗೆ ಸ್ಥಾನವನ್ನು ನೀಡಲಾಯಿತು.

ಟಿಕೆಟ್ ಹಂಚಿಕೆಯಲ್ಲಿ ನಡೆಯುತ್ತಿರುವ ಅಕ್ರಮಗಳ ವಿಷಯವನ್ನು ಯಾರೂ ಪ್ರಸ್ತಾಪಿಸಲು ಬಯಸುವುದಿಲ್ಲ ಎಂದು ಹೇಳಿದ ಅವರು ಕಾಂಗ್ರೆಸ್‌ನಲ್ಲಿನ ಜಾತೀಯತೆಯಿಂದಾಗಿ ಶಾಸಕ ನರೇಶ್ ಸೈನಿ ಪಕ್ಷವನ್ನು ತೊರೆಯಬೇಕಾಯಿತು ಎಂದು ಹೇಳಿದ್ದಾರೆ.

ಫೆಬ್ರವರಿ 10 ರಂದು ಪ್ರಾರಂಭವಾಗಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ 125 ಅಭ್ಯರ್ಥಿಗಳ ಪಕ್ಷದ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಬಿಡುಗಡೆ ಮಾಡಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಕಾರ್ಯಕರ್ತ ಮತ್ತು ಉತ್ತರ ಪ್ರದೇಶದ ಪಕ್ಷದ ವಕ್ತಾರ ಸದಾಫ್ ಜಾಫರ್, ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ತಾಯಿ ಆಶಾ ಸಿಂಗ್, ಆಶಾ ಕಾರ್ಯಕರ್ತೆ ಪೂನಂ ಪಾಂಡೆ ಮತ್ತು ಸಲ್ಮಾನ್ ಖುರ್ಷಿದ್ ಅವರ ಪತ್ನಿ ಲೂಯಿಸ್ ಸೇರಿದಂತೆ ಅನೇಕ ಮೊದಲ ಬಾರಿಗೆ ಟಿಕೆಟ್ ನೀಡಿದೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯು ಫೆಬ್ರವರಿ 10 ರಿಂದ ಮಾರ್ಚ್ 7 ರವರೆಗೆ ಏಳು ಹಂತಗಳಲ್ಲಿ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ಮತ್ತು 7 ರಂದು ಮತದಾನ ನಡೆಯಲಿದೆ.

ಚುನಾವಣೆ ಸಮೀಪಿಸುತ್ತಿರುವ ಉತ್ತರ ಪ್ರದೇಶದಲ್ಲಿ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ವಿರೋಧ ಪಕ್ಷದ ಬೂಟಾಟಿಕೆಯನ್ನು ಈ ಘಟನೆ ಬಯಲು ಮಾಡಿದೆ ಎಂದು ಕೇಸರಿ ಪಕ್ಷ ಹೇಳಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+