ಟಿಕೆಟ್ ರಾಜಕೀಯ: ಪ್ರಿಯಾಂಕಾ ಗಾಂಧಿ ವಿರುದ್ಧ ಪ್ರಿಯಾಂಕಾ ಗರಂ
ಲಕ್ನೋ, ಜನವರಿ 16: ಉತ್ತರಪ್ರದೇಶ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ನೀಡಬೇಕು ಎಂಬ ಭಾರಿ ಒತ್ತಡದಲ್ಲಿ ದೇಶದ ಅತ್ಯಂತ ಪುರಾತನ ಪಕ್ಷ ಹಲವು ತಂತ್ರಗಳನ್ನು ಅನುಸರಿಸುತ್ತಿದೆ. ಸಮಾಜದ ವಿವಿಧ ವರ್ಗಗಳ ಪ್ರತಿನಿಧಿಗಳಿಗೆ ಟಿಕೆಟ್ ಹಂಚಿಕೆ ಮೂಲಕ ಪ್ರಿಯಾಂಕಾ ಗಾಂಧಿ ಗಮನ ಸೆಳೆದಿದ್ದರು. ಆದರೆ, ಈಗ ಟಿಕೆಟ್ ರಾಜಕೀಯವೇ ಕಾಂಗ್ರೆಸ್ ಪಕ್ಷಕ್ಕೆ ಮುಳುವಾಗುತ್ತಿದೆ. ಪ್ರಿಯಾಂಕಾ ವಿರುದ್ಧ ಪ್ರಿಯಾಂಕಾ ಮೌರ್ಯ ಗರಂ ಆಗಿದ್ದಾರೆ.
ಪ್ರಿಯಾಂಕಾ ಗಾಂಧಿ ಕಾರ್ಯದರ್ಶಿಗೆ ಲಂಚ ನೀಡಲು ಸಾಧ್ಯವಿಲ್ಲ ಎಂದು ಟಿಕೆಟ್ ನಿರಾಕರಿಸಲಾಗಿದೆ ಎಂದು ಯುಪಿ ಕಾಂಗ್ರೆಸ್ ಪ್ರಚಾರದ ಪೋಸ್ಟರ್ ಹುಡುಗಿ ಕಾಂಗ್ರೆಸ್ ಕಾರ್ಯಕರ್ತೆ ಪ್ರಿಯಾಂಕಾ ಮೌರ್ಯ ಆರೋಪಿಸಿದ್ದಾರೆ.
'ಲಡ್ಕಿ ಹೂ, ಲಡ್ ಸಕ್ತಿ ಹೂ' ಅಭಿಯಾನದ ಪೋಸ್ಟರ್ ಗರ್ಲ್, ಲಂಚ ನೀಡಲು ನಿರಾಕರಿಸಿದ ಕಾರಣ ವಿಧಾನಸಭಾ ಚುನಾವಣೆಗೆ ಟಿಕೆಟ್ ನಿರಾಕರಿಸಲಾಗಿದೆ ಎಂದು ಆರೋಪಿಸಿದ್ದಾರೆ. ಇದಲ್ಲದೆ, ತಾನು ಒಬಿಸಿ ಹುಡುಗಿ ಎಂಬ ಕಾರಣಕ್ಕೆ ಟಿಕೆಟ್ ಸಿಗಲಿಲ್ಲ ಮತ್ತು ಪ್ರಿಯಾಂಕಾ ಗಾಂಧಿ ಅವರ ಕಾರ್ಯದರ್ಶಿ ಸಂದೀಪ್ ಸಿಂಗ್ ಅವರಿಗೆ ಲಂಚ ನೀಡಲು ಸಾಧ್ಯವಿಲ್ಲ ಎಂದು ಮೌರ್ಯ ಟ್ವೀಟ್ ಮಾಡಿದ್ದಾರೆ.

ತನಗೆ ಟಿಕೆಟ್ ನೀಡುವ ಬದಲು ತಿಂಗಳ ಹಿಂದಷ್ಟೇ ಪಕ್ಷಕ್ಕೆ ಸೇರ್ಪಡೆಯಾದ ವ್ಯಕ್ತಿಗೆ ಟಿಕೆಟ್ ನೀಡಲಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತೆ ಆರೋಪಿಸಿದ್ದಾರೆ.
ಅಪರಿಚಿತ ವ್ಯಕ್ತಿಯಿಂದ ತನಗೆ ಕರೆ ಬಂದಿತ್ತು, ಅದರಲ್ಲಿ ಕರೆ ಮಾಡಿದವರು ಟಿಕೆಟ್ಗೆ ಪ್ರತಿಯಾಗಿ ಹಣ ಕೇಳಿದರು, ನಿರಾಕರಿಸಿದ್ದಕ್ಕೆ ಟಿಕೆಟ್ ಸಿಕ್ಕಿಲ್ಲ ಎಂದು ಆರೋಪಿಸಿದ್ದಾರೆ.
ಈ ಪ್ರದೇಶದಲ್ಲಿ ನಾನು ಕಷ್ಟಪಟ್ಟು ಕೆಲಸ ಮಾಡಿದ ನಂತರವೂ ನನಗೆ ಯುಪಿ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ನನಗೆ ಬೇಸರವಾಗಿದೆ. 'ಲಡ್ಕಿ ಹೂ, ಲಡ್ ಸಕ್ತಿ ಹೂ'ಎಂಬ ಪ್ರಚಾರಕ್ಕೆ ನನ್ನ ಮುಖವನ್ನೇ ಬಳಸಿಕೊಂಡರು. ನನಗೆ ಲ್ಯಾಂಡ್ಲೈನ್ ಕರೆ ಬಂದಿತು ಮತ್ತು ಕರೆ ಮಾಡಿದವರು ನನ್ನ ಟಿಕೆಟ್ಗೆ ಹಣಕ್ಕಾಗಿ ಬೇಡಿಕೆಯಿಟ್ಟರು, ಆದರೆ ನಾನು ನಿರಾಕರಿಸಿದೆ. ನನಗೆ ಕೊಟ್ಟ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿದೆ, ಆದರೆ ನಾಮನಿರ್ದೇಶನಗಳನ್ನು ಮೊದಲೇ ನಿರ್ಧರಿಸಿ ಒಂದು ತಿಂಗಳ ಹಿಂದಷ್ಟೇ ಸೇರಿರುವ ವ್ಯಕ್ತಿಗೆ ನೀಡಲಾಯಿತು. ಇಂಥದ್ದೆಲ್ಲ ಇಲ್ಲಿ ನಡೆಯುತ್ತಿದೆ ಎಂಬುದನ್ನು ನಾನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಈ ಮೂಲಕ ತಿಳಿಸಲು ಬಯಸುತ್ತೇನೆ ಎಂದಿದ್ದಾರೆ.
#लड़की_हूँ_लड़_सकती_हूँ पर टिकट नहीं पा सकी क्युकी ओबीसी थी और घुस नही दे सकी। @priyankagandhi जी के संदीप सिंह को। कल सबूत के साथ वीडियो है चैनल पर दिखेगा pic.twitter.com/MqaC8XU2nP
— Dr. Priyanka Maurya (@dpriyankamaurya) January 13, 2022
ಇದಾದ ನಂತರ, ಪ್ರಿಯಾಂಕಾ ಗಾಂಧಿಯವರ ಕಾರ್ಯದರ್ಶಿ ಸಂದೀಪ್ ಸಿಂಗ್ ಲಂಚಕ್ಕೆ ಬೇಡಿಕೆಯಿಟ್ಟರು ಎಂದು ಮೌರ್ಯ ಆರೋಪಿಸಿದ್ದಾರೆ. ಪ್ರಿಯಾಂಕಾ ಮೌರ್ಯ ಅವರು ಲಕ್ನೋದ ಸರೋಜಿನಿ ನಗರದಿಂದ ಯುಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದರು ಆದರೆ ರುದ್ರ ದಮನ್ ಸಿಂಗ್ ಅವರಿಗೆ ಸ್ಥಾನವನ್ನು ನೀಡಲಾಯಿತು.
ಟಿಕೆಟ್ ಹಂಚಿಕೆಯಲ್ಲಿ ನಡೆಯುತ್ತಿರುವ ಅಕ್ರಮಗಳ ವಿಷಯವನ್ನು ಯಾರೂ ಪ್ರಸ್ತಾಪಿಸಲು ಬಯಸುವುದಿಲ್ಲ ಎಂದು ಹೇಳಿದ ಅವರು ಕಾಂಗ್ರೆಸ್ನಲ್ಲಿನ ಜಾತೀಯತೆಯಿಂದಾಗಿ ಶಾಸಕ ನರೇಶ್ ಸೈನಿ ಪಕ್ಷವನ್ನು ತೊರೆಯಬೇಕಾಯಿತು ಎಂದು ಹೇಳಿದ್ದಾರೆ.
ಫೆಬ್ರವರಿ 10 ರಂದು ಪ್ರಾರಂಭವಾಗಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ 125 ಅಭ್ಯರ್ಥಿಗಳ ಪಕ್ಷದ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಬಿಡುಗಡೆ ಮಾಡಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಕಾರ್ಯಕರ್ತ ಮತ್ತು ಉತ್ತರ ಪ್ರದೇಶದ ಪಕ್ಷದ ವಕ್ತಾರ ಸದಾಫ್ ಜಾಫರ್, ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ತಾಯಿ ಆಶಾ ಸಿಂಗ್, ಆಶಾ ಕಾರ್ಯಕರ್ತೆ ಪೂನಂ ಪಾಂಡೆ ಮತ್ತು ಸಲ್ಮಾನ್ ಖುರ್ಷಿದ್ ಅವರ ಪತ್ನಿ ಲೂಯಿಸ್ ಸೇರಿದಂತೆ ಅನೇಕ ಮೊದಲ ಬಾರಿಗೆ ಟಿಕೆಟ್ ನೀಡಿದೆ.
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯು ಫೆಬ್ರವರಿ 10 ರಿಂದ ಮಾರ್ಚ್ 7 ರವರೆಗೆ ಏಳು ಹಂತಗಳಲ್ಲಿ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ಮತ್ತು 7 ರಂದು ಮತದಾನ ನಡೆಯಲಿದೆ.
ಚುನಾವಣೆ ಸಮೀಪಿಸುತ್ತಿರುವ ಉತ್ತರ ಪ್ರದೇಶದಲ್ಲಿ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ವಿರೋಧ ಪಕ್ಷದ ಬೂಟಾಟಿಕೆಯನ್ನು ಈ ಘಟನೆ ಬಯಲು ಮಾಡಿದೆ ಎಂದು ಕೇಸರಿ ಪಕ್ಷ ಹೇಳಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications