ಲಖಿಂಪುರ ಪ್ರಕರಣ: ರಾಜ್ಯ ಸರ್ಕಾರವನ್ನು ತರಾಟೆ ತೆಗೆದುಕೊಂಡ ಸುಪ್ರೀಂ

ನವದೆಹಲಿ ನವೆಂಬರ್ 8: ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರು ಕಳೆದ ತಿಂಗಳು ಲಖಿಂಪುರ ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ವಾಹನ ಚಲಾಯಿಸಿದ ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಸರ್ಕಾರವನ್ನು ತರಾಟೆ ತೆಗೆದುಕೊಂಡಿದೆ. ಪ್ರಕರಣದ ನಿರ್ವಹಣೆಯ ಬಗ್ಗೆ ಇತ್ತೀಚಿನ ವಾರಗಳಲ್ಲಿ ಮೂರನೇ ಬಾರಿಗೆ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಆದರೆ ಇದಕ್ಕೆ ಬೇಕಾದ ಸೂಕ್ತ ದಾಖಲಾತಿಗಳನ್ನು ಒದಗಿಸಲು ಕೋರ್ಟ್ ಕಾಲಾವಕಾಶ ನೀಡಿದರೂ ಸರ್ಕಾರ ವಿಫಲವಾದ ಕಾರಣಕ್ಕೆ ನ್ಯಾಯಾಧೀಶರು ಗರಂ ಆದರು.

ಪ್ರಕರಣದಲ್ಲಿ "ನಾವು ರಾಜಕೀಯ ಮೇಲ್ಪದರಗಳನ್ನು ಸೇರಿಸಲು ಬಯಸುವುದಿಲ್ಲ. ನಿವೃತ್ತ (ಹೈಕೋರ್ಟ್) ನ್ಯಾಯಾಧೀಶರು (ಪ್ರಕರಣ) ಮೇಲ್ವಿಚಾರಣೆ ಮಾಡಲಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು ತನಿಖೆಯಲ್ಲಿ ಕಳಪೆ ಪ್ರಗತಿಯ ಬಗ್ಗೆ ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಜೊತೆಗೆ ನಾವು ನಿರೀಕ್ಷಿಸಿದ ರೀತಿಯಲ್ಲಿ ತನಿಖೆ ನಡೆಯುತ್ತಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.

"ಕೆಲವು ಸಾಕ್ಷಿಗಳನ್ನು ಪರೀಕ್ಷಿಸಲಾಗಿದೆ ಎಂದು ಹೇಳುವುದನ್ನು ಬಿಟ್ಟರೆ ಸ್ಥಿತಿ ವರದಿಯಲ್ಲಿ ಏನೂ ಆಗಿಲ್ಲ. ನಾವು 10 ದಿನಗಳನ್ನು ನೀಡಿದ್ದೇವೆ. ಲ್ಯಾಬ್ ವರದಿಗಳು ಸಹ ಬಂದಿಲ್ಲ. ಇದು ನಾವು ನಿರೀಕ್ಷಿಸಿದ ರೀತಿಯಲ್ಲಿ ನಡೆಯುತ್ತಿಲ್ಲ" ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು. ಎಷ್ಟು ಮಂದಿಯನ್ನು ಬಂಧಿಸಲಾಗಿದೆ ಮತ್ತು ಯಾವ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಸ್ಥಿತಿ ವರದಿಯಲ್ಲಿ ಪಟ್ಟಿ ಮಾಡುವಂತೆ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕೇಳಿತ್ತು. ಪ್ರಕರಣದಲ್ಲಿ ಅತಿಕ್ರಮಿಸುವ ಎರಡು ಎಫ್‌ಐಆರ್‌ಗಳು ಆರೋಪಿ ಆಶಿಶ್ ಮಿಶ್ರಾ ಅವರನ್ನು ರಕ್ಷಿಸುವ ಗುರಿಯನ್ನು ಮಾತ್ರ ಹೊಂದಿದ್ದು, ತನಿಖೆಗಳನ್ನು ಪ್ರತ್ಯೇಕವಾಗಿ ಇರಿಸಲಾಗಿಲ್ಲ ಎಂದು ನ್ಯಾಯಾಧೀಶರು ಹೇಳಿದರು.

Lakhimpur case : Supreme Barrage against State Government

ಅಕ್ಟೋಬರ್ 3 ರಂದು ಲಖಿಂಪುರ ಖೇರಿಯಲ್ಲಿ ಒಟ್ಟು ಎಂಟು ಜನರು ಕೊಲ್ಲಲ್ಪಟ್ಟರು. ರೈತರ ಹತ್ಯೆಯ ನಂತರ ಭುಗಿಲೆದ್ದ ಹಿಂಸಾಚಾರದಲ್ಲಿ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಹಿಂಸಾಚಾರದಲ್ಲಿ ಸಾವನ್ನಪ್ಪಿದ ಬಿಜೆಪಿ ಕಾರ್ಯಕರ್ತರ ಕುಟುಂಬಗಳ ದೂರಿನ ಮೇರೆಗೆ ಸುಪ್ರೀಂ ಕೋರ್ಟ್, ಪತ್ರಕರ್ತ ಸೇರಿದಂತೆ ಇನ್ನೂ ನಾಲ್ವರ ಹತ್ಯೆಯ ಬಗ್ಗೆ ಪ್ರತ್ಯೇಕ ವರದಿಯನ್ನು ಯುಪಿ ಸರ್ಕಾರಕ್ಕೆ ಕೇಳಿದೆ. ಆದರೆ ನಿರೀಕ್ಷೆಯಂತೆ ಸರ್ಕಾರ ಸಾಕ್ಷ್ಯಾಧಾರಗಳನ್ನು ಒದಗಿಸದ ಹಿನ್ನೆಲೆಯಲ್ಲಿ ಕೋರ್ಟ್ ಸರ್ಕಾರವನ್ನು ತರಾಟೆ ತೆಗೆದುಕೊಂಡಿದೆ.

ಪ್ರಕರಣದಲ್ಲಿ ಉತ್ತರ ಪ್ರದೇಶ ಸರ್ಕಾರದ ಪ್ರಗತಿಯ ಬಗ್ಗೆ ಸುಪ್ರೀಂ ಕೋರ್ಟ್ ಅತೃಪ್ತಿ ವ್ಯಕ್ತಪಡಿಸಿದೆ. ಈ ಹಿಂದೆ ಕೋರ್ಟ್ ಆದೇಶದ ಮೂರು ದಿನಗಳ ನಂತರ ಅಕ್ಟೋಬರ್ 11 ರಂದು ಆಶಿಶ್ ಮಿಶ್ರಾ ಅವರನ್ನು ಬಂಧಿಸಲಾಯಿತು. ಪ್ರಕರಣದಲ್ಲಿ ಎರಡು ಎಫ್‌ಐಆರ್‌ಗಳು ಒಬ್ಬ ನಿರ್ದಿಷ್ಟ ಆರೋಪಿಗೆ ಪ್ರಯೋಜನಗಳನ್ನು ನೀಡಲಾಗುತ್ತಿದೆ ಎಂದು ಪ್ರಾಥಮಿಕವಾಗಿ ತೋರುತ್ತಿದೆ ಎಂದು ಹೇಳಲು ನಾವು ವಿಷಾದಿಸುತ್ತೇವೆ ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದರು.

ಎರಡು ಎಫ್‌ಐಆರ್‌ಗಳನ್ನು ಪ್ರತ್ಯೇಕವಾಗಿ ತನಿಖೆ ನಡೆಸಬೇಕು. ಒಂದು ಸೆಟ್ ಕೊಲೆ ರೈತರದ್ದು, ನಂತರ ಪತ್ರಕರ್ತರು ಮತ್ತು ರಾಜಕೀಯ ಕಾರ್ಯಕರ್ತರಿದ್ದಾರೆ. ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಲಾಗಿದೆ, ಅದು ಪ್ರಮುಖ ಆರೋಪಿಗಳ ಪರವಾಗಿದೆ. ಎರಡು ಎಫ್‌ಐಆರ್‌ಗಳಿವೆ ಮತ್ತು ಒಂದು ಎಫ್‌ಐಆರ್‌ನಲ್ಲಿ ಸಂಗ್ರಹಿಸಿದ ಸಾಕ್ಷ್ಯವನ್ನು ಇನ್ನೊಂದರಲ್ಲಿ ಬಳಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.

Recommended Video

      Afghanistan ತಂಡಕ್ಕೆ ಸಹಾಯ ಹಸ್ತ ಚಾಚಿದ Ashwin | Oneindia Kannada

      ಅಕ್ಟೋಬರ್ 3 ರಂದು ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ನಾಲ್ವರು ರೈತರ ಮೇಲೆ ಆಶಿಶ್ ಮಿಶ್ರಾ ವಾಹನ ಚಲಾಯಿಸಿದರು ಎಂಬ ಆರೋಪವಿದೆ. ಶಾಂತಿಯುತ ರೈತರ ಹೋರಾಟದ ವೇಳೆ ಕಾರು ಚಲಾಯಿಸಿದ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ ಆಶಿಶ್ ಮಿಶ್ರಾ ಅವರನ್ನು ಪ್ರಕರಣದಿಂದ ಹೊರತರಲು ಹಲವಾರು ಸಾಕ್ಷಿಗಳನ್ನು ಹುಟ್ಟುಹಾಕಲಾಗುತ್ತಿದೆ ಎನ್ನುವ ಆರೋಪವಿದೆ. ಇದಕ್ಕೆ ಪುಷ್ಠಿ ನೀಡುವಂತೆ ವಿಚಾರಣೆ ವೇಳೆ ಸರ್ಕಾರ ನಡೆದುಕೊಳ್ಳುತ್ತಿದೆ ಎಂದು ರೈತರು ಆರೋಪಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+