ಸಚಿವ ಅಜಯ್ ಮಿಶ್ರಾ ರಾಜೀನಾಮೆಗೆ ಪ್ರಿಯಾಂಕಾ ಗಾಂಧಿ ವಾದ್ರಾ ಪಟ್ಟು

ಲಕ್ನೋ, ಅಕ್ಟೋಬರ್ 07: ಲಖಿಂಪುರ್ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಚಿವ ಅಜಯ್ ಮಿಶ್ರಾ ರಾಜೀನಾಮೆಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಪಟ್ಟು ಹಿಡಿದಿದ್ದಾರೆ.

ಸುದ್ದಿಗಾರರೊಂದಿಗೆ ಪ್ರಿಯಾಂಕಾ ಗಾಂಧಿ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ನ್ಯಾಯ ಪಡೆದುಕೊಳ್ಳುವುದು ಎಲ್ಲರ ಹಕ್ಕಾಗಿದೆ. ಆದರೆ, ಘಟನೆ ಸಂಬಂಧ ಇನ್ನೂ ನ್ಯಾಯ ದೊರೆತಿಲ್ಲ. ಪ್ರತಿಯೊಬ್ಬ ಪ್ರತ್ಯಕ್ಷದರ್ಶಿ ಕೂಡ ಅಜಯ್ ಮಿಶ್ರಾ ಅವರ ಮಗನನ್ನು ನೋಡಿದ್ದಾರೆ, ಗುರುತಿಸಿದ್ದಾರೆ ಅವರ ಪಾತ್ರವಿದೆ ಎಂದು ಹೇಳುತ್ತಿದ್ದಾರೆ. ಪಕ್ಷಪಾತವಿಲ್ಲದ ತನಿಖೆಗಾಗಿ ಕೇಂದ್ರ ಸಚಿವರು ರಾಜೀನಾಮೆ ನೀಡಬೇಕಿದೆ ಎಂದು ಆಗ್ರಹಿಸಿದ್ದಾರೆ.

ನಾನು ಭೇಟಿಯಾದ ಎಲ್ಲಾ ಸಂತ್ರಸ್ತರ ಕುಟುಂಬಗಳೂ ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ. ವಿರೋಧ ಪಕ್ಷದ ನಾಯಕರ ತಡೆಯಲು ಸರ್ಕಾರ ಪೊಲೀಸರನ್ನು ಬಳಕೆ ಮಾಡಿಕೊಂಡಿದೆ. ಆದರೆ, ಆರೋಪಿಗಳನ್ನು ಬಂಧಿಸಲು ಬಳಸಿಲ್ಲ ಎಂದು ಕಿಡಿಕಾರಿದ್ದಾರೆ.

Lakhimpur Kheri : Priyanka Gandhi Vadra Reiterates Demand For Resignation Of MoS Teni

ಗುರುವಾರ ಬೆಳ​ಗ್ಗೆಯೇ ರಾಹುಲ್‌ ಗಾಂಧಿ ಅವ​ರು ಪಂಜಾಬ್‌ ಮುಖ್ಯ​ಮಂತ್ರಿ ಚರ​ಣ್‌​ಜಿತ್‌ ಸಿಂಗ್‌ ಚನ್ನಿ ಹಾಗೂ ಉತ್ತ​ರಾ​ಖಂಡ ಮುಖ್ಯ​ಮಂತ್ರಿ ಭೂಪೇಶ್‌ ಬಾಘೇಲ್‌ ಅವರ ಜತೆ ಲಕ್ನೋಗೆ ಆಗ​ಮಿ​ಸಿ​ದರು.

'ಸ್ವಂತ ಕಾರಿನಲ್ಲಿ ಹೋಗಲು 20 ದಿನ​ವಾ​ದರೂ ಸರಿ, ಎಷ್ಟು ದಿನವಾದರೂ ಸರಿ.. ವಿಮಾನ ನಿಲ್ದಾಣದಲ್ಲಿಯೇ ಕಾಯುವೆ' ಎಂದು ಸವಾಲು ಹಾಕಿ​ದರು. ಕೊನೆಗೆ ಸ್ವಂತ ವಾಹ​ನ​ದಲ್ಲಿ ಲಖೀಂಪು​ರಕ್ಕೆ ಭೇಟಿ ನೀಡಲು ರಾಹು​ಲ್‌ಗೆ ಪೊಲೀ​ಸರು ಅನು​ಮ​ತಿ​ಸಿ​ದ​ರು.

ಈ ನಡುವೆ, ಸೀತಾ​ಪು​ರ​ದಲ್ಲಿ ಬಂಧ​ನ​ದ​ಲ್ಲಿದ್ದ ರಾಹುಲ್‌ ಗಾಂಧಿ ಸೋದರಿ ಪ್ರಿಯಾಂಕಾ ಅವ​ರನ್ನು ಪೊಲೀ​ಸರು ಬಂಧ​ಮು​ಕ್ತ​ಗೊ​ಳಿ​ಸಲಾಗಿತ್ತು. ಮಾರ್ಗ​ಮಧ್ಯೆ ರಾಹುಲ್‌ ಅವರು ಪ್ರಿಯಾಂಕಾ ಅವ​ರನ್ನೂ ತಮ್ಮ ಜತೆಗೆ ಲಖೀಂಪು​ರಕ್ಕೆ ಕರೆದೊ​ಯ್ದ​ರು. ​ಬ​ಳಿಕ ಪ್ರಿಯಾಂಕಾ ಹಾಗೂ ರಾಹುಲ್‌ ಅವರು ರಾತ್ರಿ ವೇಳೆ ಕೆಲವು ಸಂತ್ರಸ್ತ ಕುಟುಂಬ​ಗ​ಳನ್ನು ಭೇಟಿ ಮಾಡಿ​ದ​ರು.

ಉತ್ತರ ಪ್ರದೇ​ಶದ ಲಖಿಂಪುರ ಖೇರಿ​ಯಲ್ಲಿ ಇತ್ತೀ​ಚೆಗೆ ರೈತರ ಮೇಲೆ ನಡೆದ ಹಿಂಸಾ​ಚಾರ ಪ್ರಕ​ರ​ಣದ ಸಂತ್ರಸ್ತ ಕುಟುಂಬ​ಗ​ಳನ್ನು ಬುಧವಾರ ರಾತ್ರಿ ಕಾಂಗ್ರೆಸ್‌ ನಾಯ​ಕ​ರಾದ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಭೇಟಿ​ಯಾಗಿ ಸಂತೈ​ಸಿ​ದರು.

ಪಾಲಿಯಾ ಗ್ರಾಮದ ಲವ್‌​ಪ್ರೀತ್‌ ಸಿಂಗ್‌ ಎಂಬ ಮೃತ ರೈತನ ಮನೆಗೆ ಆಗ​ಮಿ​ಸಿದ ಉಭಯ ನಾಯ​ಕರು ಸಂತಾಪ ಸೂಚಿ​ಸಿ​ದರು ಹಾಗೂ ಉಭಯ ನಾಯ​ಕರು ಕುಟುಂಬ​ಸ್ಥ​ರನ್ನು ಬಿಗಿ​ದಪ್ಪಿ ಸಾಂತ್ವನ ಹೇಳಿ​ದ​ರು ಹಾಗೂ ಕುಟುಂಬಕ್ಕೆ ನ್ಯಾಯ ದೊರ​ಕಿ​ಸಿ​ಕೊ​ಡುವ ಭರ​ವಸೆ ನೀಡಿ​ದ​ರು.

ಈ ವೇಳೆ ಛತ್ತೀ​ಸ್‌​ಗಢ ಮುಖ್ಯ​ಮಂತ್ರಿ ಭೂಪೇಶ್‌ ಬಾಘೇಲ್‌, ಪಂಜಾಬ್‌ ಮುಖ್ಯ​ಮಂತ್ರಿ ಚರ​ಣ್‌​ಜಿತ್‌ ಸಿಂಗ್‌ ಚನ್ನಿ, ಕಾಂಗ್ರೆಸ್‌ ನೇತಾರ ದೀಪೇಂದರ್‌ ಹೂಡಾ ಹಾಜ​ರಿ​ದ್ದ​ರು.
ಮೊದಲು ಇವರ ಭೇಟಿ​ಗೆ ಉತ್ತರ ಪ್ರದೇಶ ಸರ್ಕಾರ ಅನು​ಮತಿ ನಿರಾ​ಕ​ರಿ​ಸಿ​ತ್ತಾ​ದರೂ ನಂತರ ಒತ್ತ​ಡಕ್ಕೆ ಮಣಿದು ಅನು​ಮತಿ ನೀಡಿತು. ಆದರೆ ಲಕ್ನೋ ಏರ್‌​ಪೋ​ರ್ಟ್‌​ನಲ್ಲಿ ಸರ್ಕಾರ ವಿಧಿ​ಸಿದ ಷರತ್ತು ವಿವಾ​ದಕ್ಕೆ ಕಾರ​ಣ​ವಾ​ಯಿ​ತು.

ವಿಮಾ​ನ ನಿಲ್ದಾ​ಣ​ದ​ಲ್ಲಿದ್ದ ಪೊಲೀ​ಸರು ರಾಹುಲ್‌ ಅವ​ರಿಗೆ 'ಪೊ​ಲೀಸ್‌ ವಾಹ​ನ​ದಲ್ಲಿ ಲಖೀಂಪು​ರಕ್ಕೆ ಭೇಟಿ ಕೊಡ​ಬೇಕು. ಖಾಸಗಿ ವಾಹನ ಬಳ​ಸ​ಬೇ​ಡಿ' ಎಂದ​ರು. ಇದರಿಂದ ಕೋಪಗೊಂಡ ರಾಹು​ಲ್‌, 'ನನ್ನ ಪ್ರಯಾಣವನ್ನು ನಿರ್ಧರಿಸಲು ನೀವು ಯಾರು? ನಾನು ನನ್ನ ಕಾರಿನಲ್ಲಿಯೇ ಹೋಗಲು ಬಯಸುತ್ತೇನೆ' ಎಂದು ಹೇಳಿ ಧರಣಿ ಕುಳಿ​ತ​ರು.ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣ ಸಂಬಂಧ ವಾಸ್ತವಸ್ಥಿತಿ ವರದಿ ಸಲ್ಲಿಸುವಂತೆ ಉತ್ತರಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಗುರುವಾರ ಸೂಚನೆ ನೀಡಿದೆ.

ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದ ಪ್ರಕರಣವನ್ನು ಸುಪ್ರೀಂಕೋರ್ಟ್​ ನಿನ್ನೆ ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿತ್ತು. ಇದರಂತೆ ಇಂದು ಮುಖ್ಯನ್ಯಾಯಮೂರ್ತಿ ಎನ್​.ವಿ.ರಮಣ ನೇತೃತ್ವದ ನ್ಯಾ.ಸೂರ್ಯಕಾಂತ್ ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ ಪ್ರಕರಣವನ್ನು ವಿಚಾರಣೆ ನಡೆಸಿತ್ತು.

ಲಖಿಂಪುರ ಖೇರಿಯಲ್ಲಿ ಹಿಂಸಾಚಾರ ನಡೆದ ಪ್ರಕರಣದ ಬಗ್ಗೆ ಸುಮೊಟೊ ದಾಖಲಿಸಿಕೊಳ್ಳಬೇಕು ಎಂದು ಇಬ್ಬರು ವಕೀಲರು ಸಿಜೆಐ ಎನ್​. ವಿ.ರಮಣ ಅವರಿಗೆ ಪತ್ರ ಬರೆದಿದ್ದರು. ಅದರಲ್ಲಿ ಒಬ್ಬರಾದ ಶಿವಕುಮಾರ್​ ತ್ರಿಪಾಠಿ ಅವರಿಗೆ ವಾದ ಮಂಡಿಸಲು ಸುಪ್ರೀಂಕೋರ್ಟ್​ ಇಂದು ಅವಕಾಶ ಮಾಡಿಕೊಟ್ಟಿತ್ತು.

ತಮ್ಮ ವಾದವನ್ನು ನ್ಯಾಯಾಲಯದ ಎದುರು ಮಂಡಿಸಿದ ತ್ರಿಪಾಠಿ, ಲಖಿಂಪುರ ಖೇರಿಯ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಉತ್ತರಪ್ರದೇಶ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿಲ್ಲ. ಪ್ರಜಾಪ್ರಭುತ್ವದ ಹಕ್ಕು ರಕ್ಷಣೆ ಮಾಡಲಿಲ್ಲ. ಆರೋಪಿಗಳ ವಿರುದ್ಧ ಕೂಡಲೇ ಎಫ್​ಐಆರ್​ ದಾಖಲು ಮಾಡಬೇಕು ಎಂದು ಹೇಳಿದ್ದರು.

ಅದಕ್ಕೆ ಪ್ರತಿಯಾಗಿ ಸುಪ್ರೀಂಕೋರ್ಟ್​ ಪೀಠ, ಈಗಾಗಲೇ ಎಫ್​ಐಆರ್​ ದಾಖಲಾಗಿದ್ದು ನಮ್ಮ ಗಮನಕ್ಕೆ ಬಂದಿದೆ ಎಂದು ಹೇಳಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+