ಲಖಿಂಪುರ ಖೇರಿ ಸಹೋದರಿಯರ ಸಾವು: ಮರಣೋತ್ತರ ಪರೀಕ್ಷೆ ವರದಿಯಲ್ಲಿ ಅತ್ಯಾಚಾರ ದೃಢ
ಲಖೀಂಪುರ ಸೆಪ್ಟೆಂಬರ್ 15: ಉತ್ತರ ಪ್ರದೇಶದ ಲಖೀಂಪುರ ಖೇರಿ ಜಿಲ್ಲೆಯಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಇಬ್ಬರು ದಲಿತ ಅಪ್ರಾಪ್ತ ಸಹೋದರಿಯರ ಮರಣೋತ್ತರ ಪರೀಕ್ಷೆಯ ವರದಿಯು ಅವರನ್ನು ಅತ್ಯಾಚಾರ ಮತ್ತು ಕತ್ತು ಹಿಸುಕಿ ಕೊಲೆ ಮಾಡಿರುವುದನ್ನು ದೃಢಪಡಿಸಿದೆ.
ಇಬ್ಬರು ಅಪ್ರಾಪ್ತರನ್ನು ಅತ್ಯಾಚಾರದ ನಂತರ ಹತ್ಯೆ ಮಾಡಲಾಗಿದೆ ಎಂದು ವರದಿ ದೃಢಪಡಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಸುಮನ್ ಫೋನ್ ಮೂಲಕ ಎಎನ್ಐಗೆ ತಿಳಿಸಿದರು. ಬಾಲಕಿಯರ ಮರಣೋತ್ತರ ಪರೀಕ್ಷೆಯ ವರದಿಯು, "ಕತ್ತು ಹಿಸುಕಿದ ಪರಿಣಾಮವಾಗಿ ಉಸಿರುಕಟ್ಟುವಿಕೆಯಿಂದಾಗಿ ಸಾವನ್ನಪ್ಪಿದ್ದಾರೆ" ಎಂದು ಹೇಳಿದೆ. ಬುಧವಾರ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಇಬ್ಬರು ಬಾಲಕಿಯರು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು.
'ತಪ್ಪಿತಸ್ಥರನ್ನು ಗಲ್ಲಿಗೇರಿಸಬೇಕು' ಎಂದು ಮೃತನ ತಂದೆ ತನ್ನ ಹೆಣ್ಣುಮಕ್ಕಳಿಗೆ ನ್ಯಾಯಕ್ಕಾಗಿ ಒತ್ತಾಯಿಸಿದ ಸುದ್ದಿ ಬೆಳಕಿಗೆ ಬಂದ ನಂತರ ಪ್ರತಿಭಟನೆಗಳು ನಡೆದವು. 1 ಕೋಟಿ ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು.

"ನನ್ನ ಹೆಣ್ಣು ಮಕ್ಕಳನ್ನು ಮನೆಯಿಂದ ಅಪಹರಿಸಲಾಗಿದೆ ಮತ್ತು ನಂತರ ಅವರನ್ನು ಅತ್ಯಾಚಾರ ಮತ್ತು ಕೊಲೆ ಮಾಡಲಾಗಿದೆ. ನಾನು ನ್ಯಾಯಕ್ಕಾಗಿ ಒತ್ತಾಯಿಸುತ್ತೇನೆ ಮತ್ತು ಅಪರಾಧಿಗಳನ್ನು ಗಲ್ಲಿಗೇರಿಸಬೇಕು" ಎಂದು ಸಂತ್ರಸ್ತರ ತಂದೆ ಹೇಳಿದರು. ಅಲ್ಲದೆ ಪೊಲೀಸರ ಕ್ರಮವನ್ನು ಪ್ರಶ್ನಿಸಿ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.
"ಸೆ.14 ರಂದು ಇಬ್ಬರು ಸಹೋದರಿಯರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂಬ ಮಾಹಿತಿ ನಮಗೆ ಸಿಕ್ಕಿತು. 24 ಗಂಟೆಯೊಳಗೆ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸ್ ವಿಚಾರಣೆ ವೇಳೆ ಒಬ್ಬ ಆರೋಪಿ ಗಾಯಗೊಂಡಿದ್ದಾನೆ. ಮರಣೋತ್ತರ ಪರೀಕ್ಷೆ ನಡೆಸಿ ಶವಗಳನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ" ಎಂದು ಹೆಚ್ಚುವರಿ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಹೇಳಿದ್ದಾರೆ.
ಈ ಪ್ರಕರಣದಲ್ಲಿ ಆರು ಮಂದಿಯನ್ನು ಬಂಧಿಸಲಾಗಿದ್ದು, ಅವರನ್ನು ಚೋಟು, ಜುನೈದ್, ಸೊಹೈಲ್, ಹಫೀಜುಲ್, ಕರೀಮುದ್ದೀನ್ ಮತ್ತು ಆರಿಫ್ ಎಂದು ಗುರುತಿಸಲಾಗಿದೆ ಎಂದು ಲಖೀಂಪುರ ಖೇರಿಯ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಸುಮನ್ ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302, 376 ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಎಸ್ಪಿ ಪ್ರಕಾರ, ಆರೋಪಿ ಜುನೈದ್ನನ್ನು ಎನ್ಕೌಂಟರ್ನಲ್ಲಿ ಬಂಧಿಸಲಾಯಿತು. ಅಲ್ಲಿ ಅವನ ಕಾಲಿಗೆ ಗುಂಡು ಹಾರಿಸಲಾಯಿತು. ಆರೋಪಿಗಳು ಮೃತ ಬಾಲಕಿಯರ ಸ್ನೇಹಿತರು ಎಂದು ಎಸ್ಪಿ ಬಹಿರಂಗಪಡಿಸಿದ್ದಾರೆ.
"ಹೆಣ್ಣುಮಕ್ಕಳನ್ನು ನಿನ್ನೆ ಜಮೀನಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳು ಅವರನ್ನು ಮದುವೆಯಾಗಬೇಕೆಂದು ಹುಡುಗಿಯರು ಬಯಸಿದ ನಂತರ, ಸೊಹೈಲ್, ಹಫೀಜುಲ್ ಮತ್ತು ಜುನೈದ್ ಅವರನ್ನು ಕತ್ತು ಹಿಸುಕಿ ಕೊಂದರು. ನಂತರ ಅವರು ಕರೀಮುದ್ದೀನ್ ಮತ್ತು ಆರಿಫ್ ಅವರನ್ನು ಕರೆದು ಯಾವುದೇ ಪುರಾವೆ ಇಲ್ಲದಂತೆ ಹುಡುಗಿಯರನ್ನು ನೇಣು ಹಾಕಿದರು" ಎಂದು ಎಸ್ಪಿ ಸಂಜೀವ್ ಸುಮನ್ ಹೇಳಿದ್ದಾರೆ.
ಸುಮನ್ ಪ್ರಕಾರ, ಚೋಟು ಹೊರತುಪಡಿಸಿ ಎಲ್ಲಾ ಆರೋಪಿಗಳು ಲಖಿಂಪುರ ಖೇರಿಯ ಲಾಲ್ಪುರ ಗ್ರಾಮದವರು. ಬಾಲಕಿಯರ ನೆರೆಮನೆಯವನಾಗಿದ್ದ ಚೋಟು ಎಂಬಾತ ಇಬ್ಬರು ಬಾಲಕಿಯರನ್ನು ಈ ಹುಡುಗರಿಗೆ ಪರಿಚಯಿಸಿದ್ದು, ಆತನನ್ನೂ ಬಂಧಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಯುಪಿಯ ಲಖಿಂಪುರ ಖೇರಿಯಲ್ಲಿ ಇಬ್ಬರು ದಲಿತ ಬಾಲಕಿಯರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಉತ್ತರ ಪ್ರದೇಶದ ಉಪಮುಖ್ಯಮಂತ್ರಿಗಳು ಭರವಸೆ ನೀಡಿದರು ಮತ್ತು 'ವಿಷಯವನ್ನು ರಾಜಕೀಯಗೊಳಿಸುವ ಬದಲು ಕುಟುಂಬಕ್ಕೆ ಸಾಂತ್ವನ ನೀಡುವಂತೆ' ಪ್ರತಿಪಕ್ಷಗಳನ್ನು ಒತ್ತಾಯಿಸಿದರು. ಸಂತ್ರಸ್ತರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಸ್ಥಳೀಯ ಗ್ರಾಮಸ್ಥರು ಹಾಗೂ ಬಾಲಕಿಯರ ಕುಟುಂಬಸ್ಥರು ಪ್ರತಿಭಟನೆ ನಡೆಸಿ ರಸ್ತೆ ತಡೆ ನಡೆಸಿದರು.












Click it and Unblock the Notifications