ಸೋನಿಯಾರ ರಾಯ್ ಬರೇಲಿಗೆ ಅರುಣ್ ಜೇಟ್ಲಿ ಕೊನೆ 'ಉಡುಗೊರೆ'
ಲಖನೌ, ಆಗಸ್ಟ್ 26: ದಿವಂಗತ ಅರುಣ್ ಜೇಟ್ಲಿ ಅವರು ಆಸ್ಪತ್ರೆಗೆ ದಾಖಲಾಗುವ ಒಂದು ವಾರಕ್ಕೆ ಮುನ್ನ ಕಾಂಗ್ರೆಸ್ ನ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರತಿನಿಧಿಸುವ ಲೋಕಸಭಾ ಕ್ಷೇತ್ರ ಉತ್ತರಪ್ರದೇಶದ ರಾಯ್ ಬರೇಲಿಗೆ 'ಉಡುಗೊರೆ' ನೀಡಿದ್ದಾರೆ. ತಮ್ಮ ಸಂಸದ ನಿಧಿಯಿಂದ ಇನ್ನೂರು ಸೋಲಾರ್ ಹೈ ಮಾಸ್ಟ್ ದೀಪಗಳನ್ನು ಅಳವಡಿಸಲು ರಾಯ್ ಬರೇಲಿಗೆ ಜಿಲ್ಲಾಡಳಿತಕ್ಕೆ ಪ್ರಸ್ತಾವ ಕಳುಹಿಸಿದ್ದಾರೆ.
ಸಂಸದರ ನಿಧಿ ಅಡಿಯಲ್ಲಿ ಸಂಸದರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿ, ವಾರ್ಷಿಕವಾಗಿ ಐದು ಕೋಟಿ ತನಕ ತಮ್ಮ ಕ್ಷೇತ್ರದಲ್ಲಿ ಯೋಜನೆಗಳನ್ನು ಆರಂಭಿಸಬಹುದು. ಬಿಜೆಪಿ ನಾಯಕ ಹೀರೋ ಬಾಜಪೇಯಿ ಮಾತನಾಡಿ, ಆಗಸ್ಟ್ ಹದಿನೇಳರಂದು, ಅರುಣ್ ಜೇಟ್ಲಿ ಅವರು ನಿಧನರಾಗುವ ಮುಂಚೆಯೇ ರಾಯ್ ಬರೇಲಿ ಜಿಲ್ಲಾಡಳಿತಕ್ಕೆ ಶಿಫಾರಸನ್ನು ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

ಜುಲೈ ಮೂವತ್ತನೇ ತಾರೀಕು ಅರುಣ್ ಜೇಟ್ಲಿ ಅವರು ಪತ್ರ ಬರೆದಿದ್ದಾರೆ. ರಾಯ್ ಬರೇಲಿಯ ಡಿಸಿ ನೇಹಾ ಶರ್ಮಾ ಅವರು ಶಿಫಾರಸು ಪತ್ರ ತಲುಪಿರುವ ಬಗ್ಗೆ ಖಾತ್ರಿ ಪಡಿಸಿದ್ದಾರೆ. ಅಂದ ಹಾಗೆ, ಕಾಂಗ್ರೆಸ್ ನ ಭದ್ರಕೋಟೆಯಾಗಿರುವ ರಾಯ್ ಬರೇಲಿಯನ್ನು ಬಿಜೆಪಿಗೆ ತೆಕ್ಕೆಗೆ ತೆಗೆದುಕೊಳ್ಳಬೇಕು ಎಂಬ ಕಾರಣಕ್ಕೆ ಅರುಣ್ ಜೇಟ್ಲಿ ಇಂಥ ನಿರ್ಧಾರ ಮಾಡಿದ್ದಾಗಿ ಕಳೆದ ವರ್ಷ ಅಕ್ಟೋಬರ್ ನಲ್ಲಿ ಹೇಳಿದ್ದರು. ಅಂದ ಹಾಗೆ ಈ ಹಿಂದೆ ಕೂಡ ಅದೇ ರೀತಿ ಸಂಸದರ ನಿಧಿ ಬಿಡುಗಡೆ ಮಾಡಿದ್ದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications