ರಾಹುಲ್, ಸಿಂಗ್ಗೆ ಅವಮಾನ: ಒಬಾಮ ವಿರುದ್ಧ ಎಫ್ಐಆರ್ ದಾಖಲಿಸಲು ಒತ್ತಾಯ
ಲಕ್ನೋ, ನವೆಂಬರ್ 19: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಬಗ್ಗೆ ಉಲ್ಲೇಖವಿರುವ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರ ಇತ್ತೀಚನ ಪುಸ್ತಕ 'ದಿ ಪ್ರಾಮಿಸ್ಡ್ ಲ್ಯಾಂಡ್' ಕೃತಿ ವಿರುದ್ಧ ಉತ್ತರ ಪ್ರದೇಶದ ಪ್ರತಾಪಗಡದಲ್ಲಿ ವಕೀಲರೊಬ್ಬರು ಸಿವಿಲ್ ಮೊಕದ್ದಮೆ ಹೂಡಿದ್ದಾರೆ.
ತನ್ನ ನಾಯಕರನ್ನು ಅವಮಾನಿಸಿರುವ ಮತ್ತು ಅವರ ಅಭಿಮಾನಿಗಳ ಭಾವನೆಗಳಿಗೆ ನೋವನ್ನುಂಟುಮಾಡಿರುವ ಪುಸ್ತಕದ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಅವರು ಒತ್ತಾಯಿಸಿದ್ದಾರೆ. ಅಖಿಲ ಭಾರತ ಗ್ರಾಮೀಣ ವಕೀಲರ ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷ ಜ್ಞಾನ ಪ್ರಕಾಶ್ ಶುಕ್ಲಾ ಅವರು ಲಗ್ಜಂಜ್ ಸಿವಿಲ್ ನ್ಯಾಯಾಲಯದಲ್ಲಿ ಸಿವಿಲ್ ಮೊಕದ್ದಮೆ ಹೂಡಿದ್ದಾರೆ. ಈ ಪ್ರಕರಣವನ್ನು ಡಿಸೆಂಬರ್ 1ರಂದು ವಿಚಾರಣೆಗೆ ಒಳಪಡಿಸಲು ನಿಗದಿಗೊಳಿಸಲಾಗಿದೆ.
ಮನಮೋಹನ್ ಸಿಂಗ್ ಮತ್ತು ರಾಹುಲ್ ಗಾಂಧಿ ಕುರಿತು ಒಬಾಮ ಹೇಳಿರುವ ಮಾತುಗಳು ಅಪಮಾನಕಾರಿಯಾಗಿವೆ ಮತ್ತು ಇವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ. ಈ ನಾಯಕರಿಗೆ ಲಕ್ಷಾಂತರ ಬೆಂಬಲಿಗರಿದ್ದಾರೆ. ಒಬಾಮ ಪುಸ್ತಕದಲ್ಲಿರುವ ಅಂಶಗಳು ಅವರಿಗೆ ಗಾಸಿಯುಂಟುಮಾಡಿದೆ. ಇದರಿಂದ ನೋವಿಗೊಳಗಾದ ನಾಯಕರ ಬೆಂಬಲಿಗರು ಪುಸ್ತಕದ ವಿರುದ್ಧ ಪ್ರತಿಭಟನೆಗಾಗಿ ರಸ್ತೆಗೆ ಇಳಿಯಬಹುದು. ಇದು ಕ್ಷೋಭೆಗೆ ಎಡೆಮಾಡಿಕೊಡಬಹುದು. ಹೀಗಾಗಿ ಒಬಾಮ ವಿರುದ್ಧ ಎಫ್ಐಆರ್ ದಾಖಲಿಸಿ ಎಂದು ಅವರು ಒತ್ತಾಯಿಸಿದ್ದಾರೆ.

ಒಬಾಮ ವಿರುದ್ಧ ಎಫ್ಐಆರ್ ದಾಖಲು ಮಾಡದೆ ಹೋದರೆ ತಾವು ಅಮೆರಿಕ ರಾಯಭಾರ ಕಚೇರಿ ಎದುರು ನಿರಶನ ನಡೆಸುವುದಾಗಿ ಅವರು ಹೇಳಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications