ಕೊಯ್ಲು ಮಾಡಿದ್ದಾಯ್ತು, ಈಗ ಟ್ರ್ಯಾಕ್ಟರ್ ಓಡಿಸಿದ ಹೇಮಾ ಮಾಲಿನಿ
ಮಥುರಾ, ಏಪ್ರಿಲ್ 5: ಇತ್ತೀಚೆಗಷ್ಟೇ ಗೋವರ್ಧನ ಪ್ರದೇಶದ ಗೋಧಿ ಹೊಲಕ್ಕೆ ತೆರಳಿ ಬೆಳೆಗಳನ್ನು ಕಟಾವು ಮಾಡಿದ್ದಲ್ಲದೆ ತೆನೆಯನ್ನು ಹೊತ್ತಿದ್ದ ಮಥುರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದೆ ಹೇಮಾ ಮಾಲಿನಿ ಶುಕ್ರವಾರ ಹೊಲವೊಂದರಲ್ಲಿ ಟ್ರ್ಯಾಕ್ಟರ್ ಓಡಿಸುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.
ಗೋವರ್ಧನ ಪ್ರದೇಶದಲ್ಲಿ ಅವರು ಹೊಲಕ್ಕೆ ತೆರಳಿ ಕೆಲ ಹೊತ್ತು ಟ್ರ್ಯಾಕ್ಟರ್ ಓಡಿಸಿದರು. ಮಹಿಳೆಯರ ಜತೆಗೂಡಿ ಕಟಾವು ಮಾಡಿದ್ದ ಅವರು ವಿರೋಧಿಗಳ ಟೀಕೆಗೆ ಗುರಿಯಾಗಿದ್ದರು.

ಅದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, 'ನಾನೊಬ್ಬ ನಟಿ, ಸೆಲೆಬ್ರಿಟಿ. ಇದನ್ನು ನಾನು ಮುಂಬೈನಲ್ಲಿ ನೋಡಲು ಸಾಧ್ಯವಿಲ್ಲ. ನಾನು ಹಳ್ಳಿಗಳಿಗೆ ಹೋದಾಗ ಅಲ್ಲಿನ ಪರಿಸರವನ್ನು ಇಷ್ಟಪಡುತ್ತೇನೆ. ಒಂದು ವೇಳೆ ನಾನು ನಟಿಸಿದ್ದರೂ ಅದು ತಮಾಷೆಯಷ್ಟೇ. ಅದರಲ್ಲಿ ತಪ್ಪೇನಿದೆ? ಮುಂಬೈನಲ್ಲಿ ಈ ಚಿತ್ರ ನೋಡಿದ ಎಲ್ಲರೂ ಖುಷಿ ಪಡುತ್ತಿದ್ದಾರೆ. ಧರ್ಮೇಂದ್ರ (ಪತಿ) ತುಂಬಾ ಸಂತೋಷಪಟ್ಟುಕೊಂಡರು. ಬಹಳ ಸುಂದರವಾಗಿದೆ ಎಂದರು' ಎಂಬುದಾಗಿ ಪ್ರತಿಕ್ರಿಯೆ ನೀಡಿದ್ದಾರೆ.
BJP MP and Mathura candidate Hema Malini drives a tractor in Govardhan pic.twitter.com/ZPmiRLB1qA
— ANI UP (@ANINewsUP) 5 April 2019
'ನನ್ನ ಕ್ಷೇತ್ರದಲ್ಲಿ ಕೆಲಸ ಮಾಡಲು ಹೆಮ್ಮೆಯಾಗುತ್ತದೆ. ರಸ್ತೆಗಳಿಗಾಗಿ ಕೋಟ್ಯಂತರ ರೂಪಾಯಿ ವಿನಿಯೋಗಿಸಿದ್ದೇನೆ. ಎಲ್ಲರನ್ನೂ ತೃಪ್ತಿಪಡಿಸಲು ಸಾಧ್ಯವಿಲ್ಲ. ಕೆಲವು ಕಡೆ ಕಾಂಗ್ರೆಸ್ ನಿರ್ಲಕ್ಷಿಸಿದೆ. ಕಷ್ಟದಲ್ಲಿರುವ ಜನರನ್ನು ಕಂಡಾಗ ನನ್ನ ಕಣ್ಣುಗಳಲ್ಲಿ ನೀರು ಸುರಿಯುತ್ತದೆ' ಎಂದಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications