ನಾನು ಸನ್ಯಾಸಿ, ಮತ ಹಾಕದಿದ್ದರೆ ಶಾಪ ಕೊಡ್ತೀನಿ: ಸಾಕ್ಷಿ ಮಹಾರಾಜ್ ಮತ್ತೆ ವಿವಾದ
ಲಕ್ನೋ, ಏಪ್ರಿಲ್ 12: ವಿವಾದಾತ್ಮಕ ಹೇಳಿಕೆಗಳಿಂದ ಸದಾ ಸುದ್ದಿಯಲ್ಲಿರುವ ಉತ್ತರ ಪ್ರದೇಶದ ಉನ್ನಾವೊದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಚುನಾವಣೆಯ ಸಂದರ್ಭದಲ್ಲಿ ಮತದಾರರಿಗೆ ಬೆದರಿಕೆ ಒಡ್ಡುವ ಮತ್ತೊಂದು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ.
ಚುನಾವಣಾ ಸಂದರ್ಭದಲ್ಲಿ ಮತಯಾಚನೆಗೆ ಅಭ್ಯರ್ಥಿಗಳು ಮುಂದಾದರೆ ಸಾಕ್ಷಿ ಮಹಾರಾಜ್ ಮತ ಹಾಕುವಂತೆ ವಿಶಿಷ್ಟ ರೀತಿಯಲ್ಲಿ ಹೇಳಿದ್ದಾರೆ.
ತಮಗೆ ಮತ ಹಾಕದೆ ಇದ್ದರೆ ತಾವು ಶಾಪ ನೀಡುವುದಾಗಿ ಸಾಕ್ಷಿ ಮಹಾರಾಜ್ ಮತದಾರರಿಗೆ ಎಚ್ಚರಿಕೆ ನೀಡಿದ್ದಾರೆ.

'ನಾನೊಬ್ಬ ಸನ್ಯಾಸಿ. ನಾನು ನಿಮ್ಮ ಮನೆ ಬಾಗಿಲಿಗೆ ಬೇಡಲು ಬಂದಿದ್ದೇನೆ. ನೀವು ಸನ್ಯಾಸಿಗೆ ಭಿಕ್ಷೆ ಕೊಡಲು ನಿರಾಕರಿಸಿದರೆ ನಿಮ್ಮ ಕುಟುಂಬದ ಸಂತೋಷವನ್ನು ಕಿತ್ತುಕೊಂಡು ಹೋಗುತ್ತೇನೆ. ಮತ್ತು ನಿಮಗೆ ಶಾಪ ಹಾಕುತ್ತೇನೆ' ಎಂದು ಸಾಕ್ಷಿ ಮಹಾರಾಜ್ ಹೇಳಿರುವುದಾಗಿ ಎಬಿಪಿ ಸುದ್ದಿವಾಹಿನಿ ವರದಿ ಮಾಡಿದೆ.
'ನಾನು ಒಬ್ಬ ಸನ್ಯಾಸಿ. ನೀವು ನಾನು ಗೆಲ್ಲುವಂತೆ ಮಾಡಿದರೆ ನಾನು ಗೆಲ್ಲುತ್ತೇನೆ. ಇಲ್ಲದಿದ್ದರೆ ನಾನು ದೇವಸ್ಥಾನದಲ್ಲಿ ಭಜನೆ, ಕೀರ್ತನೆ ಮಾಡಿಕೊಂಡಿರುತ್ತೇನೆ. ಆದರೆ, ಇಂದು ನಾನು ನಿಮ್ಮ ಮತಗಳನ್ನು ಕೇಳಲು ಬಂದಿದ್ದೇನೆ. ನಾನೊಬ್ಬ ಸನ್ಯಾಸಿ. ನಿಮ್ಮ ಮನೆ ಬಾಗಿಲಿನ ಬಳಿ ಬೇಡಲು ಬಂದಿದ್ದೇನೆ. ಸನ್ಯಾಸಿಯನ್ನು ನೀವು ನಿರಕಾರಿಸಿದರೆ ನಿಮಗೆ ಶಾಪ ನೀಡುತ್ತೇನೆ' ಎಂದಿದ್ದಾರೆ.
2019ರಲ್ಲಿ ಮೋದಿ ಸುನಾಮಿ ಇದ್ದು, ಇದರ ಬಳಿಕ ಮತ್ತೆ ಚುನಾವಣೆಗಳು ನಡೆಯುವ ಅಗತ್ಯವೇ ಇರುವುದಿಲ್ಲ ಎಂದು ಸಾಕ್ಷಿ ಮಹಾರಾಜ್ ಇತ್ತೀಚೆಗೆ ಹೇಳಿಕೆ ನೀಡಿದ್ದರು.
'ನಾನೊಬ್ಬ ತಪಸ್ವಿ. ನನ್ನ ಮನಸಿಗೆ ಏನು ಬರುತ್ತದೆಯೋ ಅದನ್ನು ಹೇಳುತ್ತೇನೆ. ಈ ಚುನಾವಣೆಯ ಬಳಿಕ 2024ರಲ್ಲಿ ಚುನಾವಣೆಯೇ ಇರುವುದಿಲ್ಲ. ಇದೊಂದೇ ಚುನಾವಣೆ ಇರುವುದು. ಇದು ದೇಶದ ಹೆಸರಿನಲ್ಲಿ ನಡೆಯುತ್ತಿರುವ ಹೋರಾಟ ಎಂದು ಅವರು ಹೇಳಿದ್ದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
2014ರಲ್ಲಿ ಮೋದಿ ಅಲೆ ಇತ್ತು. ಆದರೆ 2019ರಲ್ಲಿ ಮೋದಿ ಸುನಾಮಿ ಇದೆ. ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುವುದರಿಂದ ಜಗತ್ತಿನಲ್ಲಿ ಯಾವ ಶಕ್ತಿಯೂ ಅವರನ್ನು ತಡೆಗಟ್ಟಲಾರರು ಎಂದಿದ್ದರು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications