ರಾಮ ಸಮಾಜವಾದಿ ಪಕ್ಷಕ್ಕೆ ಸೇರಿದವ, ನಾವೆಲ್ಲ ರಾಮಭಕ್ತರು: ಅಖಿಲೇಶ್ ಯಾದವ್
ಅಯೋಧ್ಯಾ, ಡಿಸೆಂಬರ್ 15: ಶ್ರೀರಾಮ ಸಮಾಜವಾದಿ ಪಕ್ಷಕ್ಕೆ ಸೇರಿದವನಾಗಿದ್ದು, ತಮ್ಮ ಪಕ್ಷದ ಸದಸ್ಯರು ರಾಮಭಕ್ತರು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೋಮವಾರ ಹೇಳಿದ್ದಾರೆ. ಶ್ರೀರಾಮನನ್ನು ಪೂಜಿಸಲು ತಾವು ಕುಟುಂಬದ ಸದಸ್ಯರ ಜತೆಗೆ ಅಯೋಧ್ಯಾಕ್ಕೆ ಶೀಘ್ರದಲ್ಲಿಯೇ ತೆರಳುವುದಾಗಿ ತಿಳಿಸಿದ್ದಾರೆ.
ಲಕ್ನೋದಿಂದ ಅಜಂಗಡಕ್ಕೆ ತೆರಳುವ ಮಾರ್ಗಮಧ್ಯೆ ಅಯೋಧ್ಯಾಕ್ಕೆ ತೆರಳಿದ್ದ ಅಖಿಲೇಶ್ ಯಾದವ್, ರಾಮ ತಮಗೆ ಸೇರಿದವನು ಎಂದಿದ್ದಾರೆ. 'ರಾಮ ಸಮಾಜವಾಗಿ ಪಕ್ಷಕ್ಜೆ ಸೇರಿದವನು. ನಾವು ರಾಮ ಭಕ್ತರು ಮತ್ತು ಕೃಷ್ಣನ ಭಕ್ತರು' ಎಂದು ಹೇಳಿದ್ದಾರೆ.
ತಾವು ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅಯೋಧ್ಯಾದ ವಲಯ ರಸ್ತೆಯಾದ ಪಾರಿಜಾತ ಮಾರ್ಗದಲ್ಲಿ ಪಾರಿಜಾತ ಗಿಡಗಳನ್ನು ನೆಡಲಾಗಿತ್ತು. ಸರಯೂ ನದಿ ತೀರದಲ್ಲಿ ದೀಪಗಳನ್ನು ಅಳವಡಿಸಲಾಗಿತ್ತು. ಜತೆಗೆ ಶ್ರೀರಾಮನ ಆರಾಧನೆಗೆ ಭಜನಾ ಸ್ಥಳದಲ್ಲಿ ಧ್ವನಿ ವ್ಯವಸ್ಥೆ ಕೂಡ ತಮ್ಮ ಸರ್ಕಾರ ಮಾಡಿತ್ತು ಎಂದಿದ್ದಾರೆ.

'ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವು ರಾಜ್ಯದ ಸಣ್ಣಪುಟ್ಟ ಪಕ್ಷಗಳ ಜತೆಗೆ ಮೈತ್ರಿ ಮಾಡಿಕೊಳ್ಳಲಿದೆ. ದೊಡ್ಡ ಪಕ್ಷಗಳೊಂದಿಗಿನ ಮೈತ್ರಿ ನಮಗೆ ಒಳ್ಳೆಯ ಅನುಭವ ನೀಡಿಲ್ಲ' ಎಂದು ತಿಳಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ತಮ್ಮ ಪಕ್ಷವು 403 ಸೀಟುಗಳ ಪೈಕಿ ಕನಿಷ್ಠ 351 ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದಲ್ಲಿ 2022ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
ಕೃಷಿ ಕಾಯ್ದೆಗಳು ರೈತರಿಗೆ ಡೆತ್ ವಾರಂಟ್ಗಳಾಗಿವೆ. ಕನಿಷ್ಠ ಬೆಂಬಲ ಬೆಲೆ ಸಿಗುವ ಬಗ್ಗೆ ಮತ್ತು ರೈತರ ಆದಾಯ ದ್ವಿಗುಣಗೊಳಿಸುವ ವಿಚಾರವಾಗಿ ಸರ್ಕಾರವು ಅವರಿಗೆ ಶಾಸನಬದ್ಧ ಖಾತರಿ ನೀಡಬೇಕು ಎಂದು ಆಗ್ರಹಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications