ಧರಿಸಿದ್ದ ದಿರಿಸು ತೆಗೆದು ವಿಮಾನದಲ್ಲಿ ಬೆತ್ತಲೆಯಾದ ಪ್ರಯಾಣಿಕ
ಲಖನೌ, ಡಿಸೆಂಬರ್ 30: ದುಬೈನಿಂದ ಲಖನೌಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ವಿಲಕ್ಷಣ ಘಟನೆ ವರದಿಯಾಗಿದೆ. ವಿಮಾನದಲ್ಲಿ ಬರುವಾಗ ಧರಿಸಿದ್ದ ಬಟ್ಟೆ ಬಿಚ್ಚಿ, ಬೆತ್ತಲೆಯಾಗಿ ನಡೆದಾಡಿದ್ದಾನೆ. IX 194 ವಿಮಾನದಲ್ಲಿ ಹೀಗಾಗಿದ್ದು, ಅದರಲ್ಲಿ 150 ಮಂದಿ ಪ್ರಯಾಣ ಮಾಡುತ್ತಿದ್ದರು.
ಕೆಲ ಕ್ಷಣಗಳಲ್ಲೇ ವಿಮಾನದೊಳಗಿನ ಸಿಬ್ಬಂದಿ ಹೊದಿಕೆಯಿಂದ ಆತನನ್ನು ಮುಚ್ಚಿದ್ದಾರೆ. ಆ ನಂತರ ಲಖನೌ ಚೌಧರಿ ಚರಣ್ ಸಿಂಗ್ ವಿಮಾನ ನಿಲ್ದಾಣಕ್ಕೆ ಬಂದು ವಿಮಾನ ಇಳಿದಿದೆ. ಆ ಪ್ರಯಾಣಿಕನನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಒಪ್ಪಿಸಲಾಗಿದೆ. "ವಿಮಾನದ ಕ್ಯಾಪ್ಟನ್ ನಿರ್ದೇಶನದ ಮೇರೆಗೆ ವಿಮಾನ ಯಾನ ಭದ್ರತಾ ಸಿಬ್ಬಂದಿಗೆ ಒಪ್ಪಿಸಿದ್ದು, ತನಿಖೆ ನಡೆಯುತ್ತಿದೆ" ಎಂದು ಮಾಧ್ಯಮಗಳಿಗೆ ತಿಳಿಸಲಾಗಿದೆ.

ಆ ಪ್ರಯಾಣಿಕ ಹೀಗೆ ವಿಮಾನ ಯಾನದ ಮಧ್ಯದಲ್ಲಿ ಬೆತ್ತಲಾಗಿದ್ದಕ್ಕೆ ಹಾಗೂ ನಡೆದಾಡಿದ್ದು ಏಕೆ ಎಂಬುದು ನಂತರ ತಿಳಿದುಬಂದಿದೆ. ಆದರೆ ಅಂತರರಾಷ್ಟ್ರೀಯ ವಿಮಾನದಲ್ಲಿ ಇಂಥ ಘಟನೆ ನಡೆದಿರುವ ಬಗ್ಗೆ ಉಳಿದ ಪ್ರಯಾಣಿಕರು ಆತಂಕಕ್ಕೆ ಈಡಾಗಿದ್ದರು.
ದುಬೈನಲ್ಲಿ ಆತ ಕೆಲಸ ಮಾಡುತ್ತಿದ್ದ ಸ್ಥಳದಲ್ಲಿದ್ದ ಪಾಕಿಸ್ತಾನ ಮೂಲದ ಸಹೋದ್ಯೋಗಿಗಳು ಹೊಡೆಯುತ್ತಿದ್ದರು, ಹಿಂಸೆ ನೀಡುತ್ತಿದ್ದರು. ಇದರಿಂದ ಬೇಸತ್ತು, ಕೆಲಸಕ್ಕೆ ರಾಜೀನಾಮೆ ನೀಡಿ, ವಾಪಸಾಗುತ್ತಿದ್ದ ಈ ವ್ಯಕ್ತಿ ಹತಾಶೆಯಿಂದ ಹೀಗೆ ಮಾಡಿದ್ದಾಗಿ ಹೇಳಿಕೊಂಡಿದ್ದಾನೆ. ನಾನು ಈ ರೀತಿ ಮಾಡಬಾರದಿತ್ತು ಎಂದು ಕ್ಷಮೆ ಕೇಳಿದ್ದಾನೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications