ರಾಜ್ನಾಥ್ಸಿಂಗ್ ಗೆ ಶಾಟ್ಗನ್ ಪತ್ನಿಯ ಸವಾಲು
ಲಕ್ನೋ,ಮೇ 6: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪ್ರತಿನಿಧಿಸುತ್ತಿದ್ದ ಲಕ್ನೋ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ತುರುಸಿನ ಸ್ಪರ್ಧೆ ಎದುರಾಗಿದೆ. ಕೇಂದ್ರ ಸಚಿವ ರಾಜನಾಥ್ ಸಿಂಗ್ಗೆ ನಟಿ ಹಾಗೂ ಶತ್ರುಘ್ನ ಸಿನ್ಹಾ ಪತ್ನಿ ಪೂನಂ ಸ್ಪರ್ಧೆ ನೀಡುತ್ತಿದ್ದಾರೆ. ಎಸ್ಪಿ-ಬಿಎಸ್ಪಿ-ಆರ್ಎಲ್ಡಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಪೂನಂ ಸಿನ್ಹಾ ಸ್ಪರ್ಧಿಸುತ್ತಿದ್ದಾರೆ. ಸಮಾಜವಾದಿ ಪಕ್ಷದಿಂದ ಪೂನಂಗೆ ಟಿಕೆಟ್ ದೊರೆತಿದೆ.
ಸತತವಾಗಿ ವಾಜಪೇಯಿ ಗೆದ್ದುಕೊಂಡು ಬಂದಿರುವ ಈ ಕ್ಷೇತ್ರವು ಬಿಜೆಪಿ ಭದ್ರಕೋಟೆ ಎನಿಸಿದೆ. ಷಿಯಾ ಮುಸ್ಲಿಂ ಹಾಗೂ ಮೇಲ್ವರ್ಗಗಳ ಮತಗಳ ಮೂಲಕ ಕಳೆದ ಬಾರಿ ರಾಜನಾಥ್ ಸಿಂಗ್ ಕೂಡ ಸುಲಭವಾಗಿ ಗೆದ್ದಿದ್ದರು. ಆದರೆ ಈ ಬಾರಿ ಕಾಂಗ್ರೆಸ್ ಬ್ರಾಹ್ಮಣ ಅಭ್ಯರ್ಥಿಯನ್ನು ಹಾಕಿರವುದು ಬಿಜೆಪಿಗೆ ತಲೆನೋವಾಗಿದೆ.
ಇನ್ನೊಂದೆಡೆ ಬಿಹಾರದ ಪಟನಾ ಸಾಹಿಬ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶತ್ರುಘ್ನ ಸಿನ್ಹಾ ಪತ್ನಿಗೆ ಸಮಾಜವಾದಿ ಪಕ್ಷ ಟಿಕೆಟ್ ನೀಡಿರುವುದು ರಾಜಕೀಯ ತಂತ್ರಗಾರಿಕೆ ಎನ್ನಲಾಗುತ್ತಿದೆ.

ರಾಹುಲ್ ಗಾಂಧಿ ಹಾಗೂ ಅಖಿಲೇಶ್ ನಂಟು ಬಳಸಿಕೊಂಡು ಸಿನ್ಹಾ ಕುಟುಂಬ ಈ ರಾಜಕೀಯ ಮಾಡುತ್ತಿದೆ. ಆದರೆ ಬಿಹಾರದಲ್ಲಿ ಕಾಂಗ್ರೆಸ್, ಲಕ್ನೋದಲ್ಲಿ ಎಸ್ಪಿ ಪರವಾಗಿ ಮತಯಾಚನೆ ಮಾಡುತ್ತಿರುವುದು ಸ್ಥಳೀಯ ಕಾಂಗ್ರಸ್ಸಿಗರ ಕೆಂಗಣ್ಣಿಗೂ ಗುರಿಯಾಗಿದೆ. ನಾನು ಪತ್ನಿ ಧರ್ಮ ಪಾಲಿಸುತ್ತಿದ್ದೇನೆ ಎಂದು ಶಾಟ್ ಗನ್ ಎಂದು ಖ್ಯಾತರಾಘಿರುವ ಶತ್ರುಘ್ನ ಸಿನ್ಹಾ ಸ್ಪಷ್ಟನೆ ನೀಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications