'ಗಡ್ಕರಿ ಉಪ ಪ್ರಧಾನಿಯಾಗಲಿ, ಯೋಗಿ ತಮ್ಮ ಧಾರ್ಮಿಕ ಕೆಲಸ ನೋಡಿಕೊಳ್ಳಲಿ'
ಲಖನೌ, ಜನವರಿ 6: ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹಿನ್ನಡೆ ಕಂಡ ಬಿಜೆಪಿಯೊಳಗೆ ಅಮಿತ್ ಶಾ ಹಾಗೂ ಮೋದಿ ಪ್ರಭಾವ ಕಡಿಮೆ ಆಗಿದೆ ಎನಿಸುವಂಥ ಬೆಳವಣಿಗೆಗಳು ಆಗುತ್ತಿವೆ. ಬಿಜೆಪಿಯ ಹಿರಿಯ ನಾಯಕ ಸಂಘ್ ಪ್ರಿಯ ಗೌತಮ್ ಹೇಳಿದ ಮಾತುಗಳನ್ನು ಕೇಳಿದರೆ ಈ ವಿಚಾರ ಇನ್ನಷ್ಟು ದೃಢವಾಗುತ್ತದೆ.
ನಿತಿನ್ ಗಡ್ಕರಿಯನ್ನು ಉಪ ಪ್ರಧಾನಿ ಆಗಿ ಮಾಡಬೇಕು, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ರನ್ನು ಪಕ್ಷದ ರಾಷ್ಟ್ರಾಧ್ಯಕ್ಷರನ್ನಾಗಿಯೂ ಹಾಗೂ ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ ರನ್ನು ಉತ್ತರಪ್ರದೇಶದ ಉಸ್ತುವಾರಿಯಾಗಿ ನೇಮಿಸಬೇಕು ಎಂದು ಸಂಘ್ ಪ್ರಿಯ ಹೇಳಿದ್ದಾರೆ.
ದೇಶ ಕಂಡ ಶ್ರೇಷ್ಠ ನಾಯಕರಲ್ಲಿ ಮೋದಿ ಕೂಡ ಒಬ್ಬರು ಎಂಬುದರಲ್ಲಿ ಅನುಮಾನವಿಲ್ಲ. ಆದರೆ ಮುಂಬರುವ ಲೋಕಸಭೆ ಚುನಾವಣೆಗೆ ಮೋದಿ ಮಂತ್ರ ಕೆಲಸ ಮಾಡುವ ಸಾಧ್ಯತೆ ಇಲ್ಲ. ಖಾಸಗಿಯಾಗಿ ಮಾತನಾಡುವಾಗ ಬಿಜೆಪಿಯವರು ಒಪ್ಪುತ್ತಾರೆ. ಆದರೆ ಸಾರ್ವಜನಿಕವಾಗಿ ಹೇಳಿಕೊಳ್ಳುವಾಗ ಮೌನವಾಗುತ್ತಾರೆ ಎಂದಿದ್ದಾರೆ.

ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಧಾರ್ಮಿಕ ಕೆಲಸ-ಕಾರ್ಯಗಳಿಗೆ ವಾಪಸ್ ಕಳುಹಿಸಬೇಕು ಎಂದಿರುವ ಅವರು, ಕೇಂದ್ರ ಸರಕಾರದ ನೀತಿ ಬಗ್ಗೆ ದೊಡ್ಡ ಮಟ್ಟದಲ್ಲಿ ಸಿಟ್ಟಿದೆ. ಈಗಲೇ ಚುನಾವಣೆ ನಡೆದರೆ ಕಷ್ಟದ ಸನ್ನಿವೇಶ ಇದೆ ಎಂದು ಹೇಳಿದ್ದಾರೆ.
ಯೋಜನಾ ಆಯೋಗದ ಹೆಸರು ಬದಲಾವಣೆ, ಸಿಬಿಐ ತನಿಖೆ- ಆರ್ ಬಿಐ ಕಾರ್ಯ ನಿರ್ವಹಣೆಯಲ್ಲಿ ಹಸ್ತಕ್ಷೇಪ ಮತ್ತು ಉತ್ತರಾಖಂಡ್ ನಲ್ಲಿ ಚುನಾಯಿತ ಸರಕಾರವನ್ನು ಕೆಡವಲು ಯತ್ನಿಸಿದ್ದರ ಬಗ್ಗೆ ಕೂಡ ಮಾತನಾಡಿದ್ದಾರೆ. ಗೋವಾ, ಮಣಿಪುರದಲ್ಲಿ ಸರಕಾರ ರಚಿಸಲು ಮುಂದಾದ ನಿರ್ಧಾರ ಕೂಡ ಒಳ್ಳೆ ನಡೆಯಲ್ಲ ಎಂದಿದ್ದಾರೆ.
ಎಂಬತ್ತೆಂಟು ವರ್ಷದ ಸಂಘ್ ಪ್ರಿಯ ಗೌತಮ್ ಅವರು ಅಟಲ್ ಬಿಹಾರಿ ವಾಜಪೇಯಿ ಪ್ರಧಾನಿ ಆಗಿದ್ದ ಅವಧಿಯಲ್ಲಿ ರಾಜ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications