ನಾಯಿಗೆ ಹೆದರಿ ಅಡಗಿ ಕುಳಿತ ವ್ಯಕ್ತಿ: ಕಳ್ಳ ಎಂದು ಗ್ರಾಮಸ್ಥರು ಮಾಡಿದ್ದೇನು?
ಲಕ್ನೋ, ಜುಲೈ 20: ಪ್ರತ್ಯಕ್ಷವಾಗಿ ಕಂಡರೂ ಪ್ರಮಾಣಿಸಿ ನೋಡಬೇಕೆಂಬ ಗಾದೆ ಮಾತಿದೆ ಆದರೆ ಅದನ್ನು ಎಷ್ಟು ಜನರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದಾರೆ ಎನ್ನುವುದು ಕೂಡ ಮುಖ್ಯವಾಗುತ್ತದೆ.
ವ್ಯಕ್ತಿಯೊಬ್ಬ ಅತ್ತೆಯ ಮನೆಗೆ ಹೊರಟಿದ್ದ ಮಧ್ಯೆ ಹಲವು ನಾಯಿಗಳು ಅಟ್ಟಿಸಿಕೊಂಡು ಬಂದ ಕಾರಣ ಆತನ ನಾಯಿಗಳಿಗೆ ಹೆದರಿ ಒಂದು ಕಡೆ ಅಡಗಿ ಕುಳಿತಿದ್ದ.
ಇದನ್ನು ಕಂಡ ಗ್ರಾಮಸ್ಥರು ಆತ ಕಳ್ಳನೆಂದು ಭಾವಿಸಿ ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಲಕ್ನೋನಲ್ಲಿ ನಡೆದಿದೆ.
ಉತ್ತರ ಪ್ರದೇಶದ ಬಾರಾಬಂಕಿ ಬಳಿಯ ರಾಘೋಪುರ್ ಎಂಬ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ನಡೆದಿದ್ದು, ತಿಂದೋಲಾ ಗ್ರಾಮದ ನಿವಾಸಿ ಸುಜಿತ್ ಕುಮಾರ್ ಎಂಬಾತ ಇಲ್ಲಿನ ಟಾಯಿ ಕಲಾ ಗ್ರಾಮದಲ್ಲಿರುವ ತನ್ನ ಅತ್ತೆ ಮನೆಗೆ ತೆರಳುತ್ತಿದ್ದ.

ವೃತ್ತಿಯಲ್ಲಿ ಪೇಂಟರ್ ಆಗಿರುವ ಸುಜಿತ್ ಕುಮಾರ್ ಶುಕ್ರವಾರ ರಾತ್ರಿ ಹೋಗುತ್ತಿದ್ದಾಗ ನಾಯಿಗಳು ಬೆನ್ನಟ್ಟಿವೆ. ಅದರಿಂದ ಭಯಗೊಂಡ ಸುಜಿತ್ ಕುಮಾರ್, ನಾಯಿಗಳಿಂದ ತಪ್ಪಿಸಿಕೊಳ್ಳಲು ಪಕ್ಕದಲ್ಲೇ ಇದ್ದ ಮನೆಯೊಳಗೆ ನುಗ್ಗಿ ಅವಿತುಕೊಂಡಿದ್ದಾನೆ. ಈ ವೇಳೆ ಮನೆಯವರು ಈತನನ್ನು ಕಂಡು ಕಳ್ಳ ಕಳ್ಳ ಎಂದು ಕೂಗಿದ್ದಾರೆ.
ಕೂಡಲೇ ಅಕ್ಕಪಕ್ಕದ ಮನೆಯವರು ಸೇರಿಕೊಂಡು ಸುಜಿತ್ ಕುಮಾರ್ ರನ್ನು ಹಿಡಿದು ಕಟ್ಟಿಹಾಕಿ ಮನಸೋ ಇಚ್ಛೆ ಥಳಿಸಿದ್ದಾರೆ. ಬಳಿಕ ಗ್ರಾಮಸ್ಥರು ಆತನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಾರೆ.
ಪ್ರಕರಣ ಸಂಬಂಧ ಪೊಲೀಸರು ಉಮೇಶ್ ಯಾದವ್ ಮತ್ತು ಶ್ರವಣ್ ಯಾದವ್ ಅವರನ್ನು ಬಂಧಿಸಿದ್ದು, ಉಳಿದವರಿಗಾಗಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಸುಜಿತ್ ಕುಮಾರ್ ರನ್ನು ಗುರುತಿಸಿದ ಸ್ಥಳೀಯರೊಬ್ಬರು ಈ ವಿಚಾರವನ್ನು ಗ್ರಾಮಸ್ಥರಿಗೆ ಹೇಳಿ ಅವರನ್ನು ರಕ್ಷಿಸಿದ್ದಾರೆ.
ಬಳಿಕ ತೀವ್ರವಾಗಿ ಗಾಯಗೊಂಡಿದ್ದ ಸುಜಿತ್ ಕುಮಾರ್ ರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದೀಗ ಸುಜಿತ್ ಕುಮಾರ್ ಪತ್ನಿ ಪೂನಂ ಗ್ರಾಮಸ್ಥರ ವಿರುದ್ಧ ದೂರು ನೀಡಿದ್ದು, ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications