ಶ್ರೀಕೃಷ್ಣ ಜನ್ಮಸ್ಥಾನದಲ್ಲಿ ಮಸೀದಿಗೆ ವಿರೋಧ: ಅರ್ಜಿ ವಿಚಾರಣೆಗೆ ಒಪ್ಪಿಗೆ
ನವದೆಹಲಿ, ಅಕ್ಟೋಬರ್ 16: ಶ್ರೀಕೃಷ್ಣ ಜನ್ಮಭೂಮಿ ದೇವಸ್ಥಾನದ ಆವರಣದಲ್ಲಿರುವ 17ನೇ ಶತಮಾನದ ಮಸೀದಿಯನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ಮಥುರಾದ ನ್ಯಾಯಾಲಯವೊಂದು ವಿಚಾರಣೆಗೆ ಪರಿಗಣಿಸಿದೆ.
ಶಹಿ ಈದ್ಗಾ ಮಸೀದಿ ಟ್ರಸ್ಟ್, ಸುನ್ನಿ ವಕ್ಫ್ ಮಂಡಳಿ ಸೇರಿದಂತೆ ಎಲ್ಲ ಸಂಬಂಧಿತ ಕಕ್ಷಿದಾರರಿಗೂ ನೋಟಿಸ್ ನೀಡಿರುವ ನ್ಯಾಯಾಲಯವು, ನವೆಂಬರ್ 18ರಂದು ಹಾಜರಾಗುವಂತೆ ಸೂಚನೆ ನೀಡಿದೆ.
ಕಳೆದ ತಿಂಗಳು ಕೆಲವು ಜನರ ತಂಡವೊಂದು ಮಥುರಾದ ಹಿರಿಯ ವಿಭಾಗೀಯ ಸಿವಿಲ್ ನ್ಯಾಯಾಧೀಶರಿಗೆ ಅರ್ಜಿ ಸಲ್ಲಿಸಿತ್ತು. ಶ್ರೀಕೃಷ್ಣನ ಜನ್ಮಸ್ಥಳದಲ್ಲಿ, ಕಾತ್ರ ಕೇಶವ ದೇವ ದೇವಸ್ಥಾನದ 13.37 ಎಕರೆ ಪ್ರದೇಶದಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಆರೋಪಿಸಿದ್ದರು. ಈ ಅರ್ಜಿಯನ್ನು ಸೆ. 30ರಂದು ಹಿರಿಯ ವಿಭಾಗೀಯ ಸಿವಿಲ್ ನ್ಯಾಯಾಧೀಶರು ವಜಾಗೊಳಿಸಿದ್ದರು. ಈ ಆದೇಶವು ವಾಸ್ತವಕ್ಕೆ ವಿರುದ್ಧ ಹಾಗೂ ತಪ್ಪಾದ ಅಂಶಗಳನ್ನು ಒಳಗೊಂಡಿದೆ ಎಂದು ಅಕ್ಟೋಬರ್ 12ರಂದು ಜಿಲ್ಲಾ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಕೆಳ ನ್ಯಾಯಾಲಯದ ದಾಖಲೆಗನ್ನು ಪಡೆದುಕೊಂಡ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಸುಧಾನ ಠಾಕೂರ್, ಶುಕ್ರವಾರ ಈ ಅರ್ಜಿಯನ್ನು ಪರಿಗಣಿಸಲು ಒಪ್ಪಿದರು.
ಬಾಲ ಭಕ್ತ ಭಗವಾನ್ ಶ್ರೀಕೃಷ್ಣ ವಿರಾಜಮಾನ್ ಅವರ ಪರವಾಗಿ ರಂಜನಾ ಅಗ್ನಿಹೋತ್ರಿ ಮತ್ತು ಇತರರು 'ನಂತರದ ಸ್ನೇಹಿತರ' ಮೂಲಕ ಈ ಅರ್ಜಿ ಸಲ್ಲಿಸಲಾಗಿದೆ. ವ್ಯಕ್ತಿಯೊಬ್ಬರು ನೇರವಾಗಿ ಅರ್ಜಿಯೊಂದನ್ನು ನಿಭಾಯಿಸಲು ಸಾಧ್ಯವಾಗದ ಸಂದರ್ಭದಲ್ಲಿ ಅವರನ್ನು ಪ್ರತಿನಿಧಿಸುವವರನ್ನು ಕಾನೂನಿನ ಪರಿಭಾಷೆಯಲ್ಲಿ 'ನಂತರದ ಸ್ನೇಹಿತ' ಎಂದು ಉಲ್ಲೇಖಿಸಲಾಗುತ್ತದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications