ಯುಪಿ ಚುನಾವಣೆಯತ್ತ ಮಾಯಾವತಿ ಚಿತ್ತ: ಬಿಎಸ್ಪಿಯಿಂದ ಬ್ರಾಹ್ಮಣ ಸಮ್ಮೇಳನ
ಲಕ್ನೋ, ಜು.23: ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷವು ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟು ಉತ್ತರಪ್ರದೇಶದಲ್ಲಿ ಸಮುದಾಯವನ್ನು ಗುರಿಯಾಗಿಟ್ಟುಕೊಂಡಿದೆ. ಬಹುಜನ ಸಮಾಜ ಪಕ್ಷವು ಬ್ರಾಹ್ಮಣ ಸಮ್ಮೇಳನ ಕಾರ್ಯಕ್ರಮವನ್ನು ಅಯೋಧ್ಯೆಯಲ್ಲಿ ನಡೆಸಲು ಶುಕ್ರವಾರ ಸಜ್ಜಾಗಿದೆ.
ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಈ ಕಾರ್ಯಕ್ರಮವನ್ನು ಘೋಷಿಸಿದ್ದಾರೆ. 2022 ರಲ್ಲಿ ನಡೆಯಲಿರುವ ರಾಜ್ಯ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಬದಲಿಗೆ ಯುಪಿಯಲ್ಲಿರುವ ಬ್ರಾಹ್ಮಣರು ತಮ್ಮ ಪಕ್ಷಕ್ಕೆ ಮತ ಚಲಾಯಿಸುತ್ತಾರೆ ಎಂದು ಭರವಸೆ ಹೊಂದಿರುವುದಾಗಿ ಮಾಯಾವತಿ ಹೇಳಿದ್ದಾರೆ.
ಕಳೆದ ಭಾನುವಾರ ಲಖನೌದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಯಾವತಿ ಮಾತನಾಡಿ, ಜುಲೈ 23 ರಂದು ಅಯೋಧ್ಯೆಯಲ್ಲಿ ಬಿಎಸ್ಪಿ ಬ್ರಾಹ್ಮಣ ಸಮ್ಮೇಳನ ನಡೆಸಲಿದೆ. "ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬ್ರಾಹ್ಮಣರು ಬಿಜೆಪಿಗೆ ಮತ ಚಲಾಯಿಸುವುದಿಲ್ಲ ಎಂದು ನಾನು ತುಂಬಾ ಭರವಸೆ ಹೊಂದಿದ್ದೇನೆ," ಎಂದು ತಿಳಿಸಿದ್ದಾರೆ.

ನಿರೀಕ್ಷಿತ ಬಿಎಸ್ಪಿ ಆಡಳಿತದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವರ ಹಿತಾಸಕ್ತಿಗಳು ಸುರಕ್ಷಿತವಾಗಿರುತ್ತವೆ ಎಂದು ಭರವಸೆ ನೀಡುವ ಅಭಿಯಾನವನ್ನು ಪ್ರಾರಂಭಿಸಲಾಗುವುದು ಎಂದು ಮಾಯಾವತಿ ಹೇಳಿದ್ದಾರೆ.
ನಗರದ ರಾಮ್ ಲಲ್ಲಾ ತಾತ್ಕಾಲಿಕ ದೇವಾಲಯದಲ್ಲಿ ಬಿಎಸ್ಪಿ ಪ್ರಧಾನ ಕಾರ್ಯದರ್ಶಿ ಸತೀಶ್ ಚಂದ್ರ ಮಿಶ್ರಾ ಪ್ರಾರ್ಥನೆ ಸಲ್ಲಿಸಿದ ನಂತರ ಶುಕ್ರವಾರ ಬ್ರಾಹ್ಮಣ ಸಮ್ಮೇಳನ ಕಾರ್ಯಕ್ರಮಗಳ ಸರಣಿಯನ್ನು ಅಯೋಧ್ಯೆಯಲ್ಲಿ ಪ್ರಾರಂಭಿಸಲಾಗುವುದು ಎಂದು ಸುದ್ದಿ ಸಂಸ್ಥೆ ಪಿಟಿಐ ವಾರದ ಆರಂಭದಲ್ಲಿ ವರದಿ ಮಾಡಿದೆ.
"ಮೊದಲನೆಯದಾಗಿ, ಹನುಮಂಗಾರ್ಹಿ (ಅಯೋಧ್ಯೆಯಲ್ಲಿ) ನಲ್ಲಿ ನಾವು ಹನುಮ ಭಗವಾನ್ ದರ್ಶನ ಪಡೆಯುತ್ತೇವೆ. ಇದರ ನಂತರ ರಾಮ ಲಲ್ಲಾ ದರ್ಶನ ನಡೆಯಲಿದೆ, ನಂತರ ಅಭಿಯಾನವು ಪ್ರಾರಂಭವಾಗುತ್ತದೆ," ಎಂದು ತಿಳಿಸಿದೆ. ಇನ್ನು ಸಮ್ಮೇಳನದಲ್ಲಿ ಮಾತನಾಡಿದ ಸತೀಶ್ ಚಂದ್ರ ಮಿಶ್ರಾ, ನಾವು ಅಧಿಕಾರಕ್ಕೆ ಬಂದರೆ ರಾಮ ಮಂದಿರ ಕಟ್ಟುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಕಳೆದ ಯುಪಿ ವಿಧಾನಸಭಾ ಚುನಾವಣೆಯಲ್ಲಿ "ಮೇಲ್ಜಾತಿಗಳು" ಬಿಜೆಪಿಗೆ ಮತ ಚಲಾಯಿಸಿ ಈಗ ಪಶ್ಚಾತ್ತಾಪ ಪಡುತ್ತಿವೆ ಎಂದು ಮಾಯಾವತಿ ಹಲವಾರು ಸಂದರ್ಭಗಳಲ್ಲಿ ಹೇಳಿದ್ದಾರೆ. ಈಗ ಬಹುಜನ ಸಮಾಜ ಪಕ್ಷದ ಮೇಲೆ ಬ್ರಾಹ್ಮಣರು ನಂಬಿಕೆ ಇಟ್ಟಿದ್ದಾರೆ ಎಂದು ಕೂಡಾ ಹೇಳಿದ್ದಾರೆ.
ಇನ್ನೊಂದೆಡೆ ಬ್ರಾಹ್ಮಣ ಸಮ್ಮೇಳನ ಆಯೋಜಿಸಿರುವ ಬಿಎಸ್ಪಿ ಅವಕಾಶವಾದಿ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಅಭಿವೃದ್ಧಿಯಲ್ಲಿ ನಂಬಿಕೆ ಇರುವುದರಿಂದ ಬ್ರಾಹ್ಮಣ ಸಮುದಾಯ ಬಿಎಸ್ಪಿ ಬಲೆಗೆ ಬೀಳಲ್ಲ ಎಂದು ಉತ್ತರ ಪ್ರದೇಶದ ಬಿಜೆಪಿ ಶಾಸಕ ರವಿ ಕಿಶನ್ ಸೋಮವಾರ ಹೇಳಿದ್ದಾರೆ. "ಒಬ್ಬ ಬ್ರಾಹ್ಮಣ ಜ್ಞಾನಕ್ಕೆ ಹೆಸರುವಾಸಿಯಾಗಿದ್ದಾನೆ ಮತ್ತು ದುರಾಶೆಗಾಗಿ ಅಲ್ಲ. ಬ್ರಾಹ್ಮಣ ಸಮುದಾಯವನ್ನು ಕೆಟ್ಟ ದಾರಿಗೆ ಎಳೆಯದಂತೆ ಮಾಯಾವತಿ ಜಿ ಮತ್ತು ಅಖಿಲೇಶ್ ಜಿಯನ್ನು ನಾನು ಒತ್ತಾಯಿಸುತ್ತೇನೆ," ಎಂದಿದ್ದಾರೆ.
ಇನ್ನು ಜಾತಿಯ ಆಧಾರದ ಮೇಲೆ ರಾಜಕೀಯ ಪಕ್ಷಗಳು rally ಮತ್ತು ಕಾರ್ಯಕ್ರಮಗಳನ್ನು ನಡೆಸುವುದನ್ನು ಹೈಕೋರ್ಟ್ ನಿಷೇಧಿಸಿದ ನಂತರ ಬ್ರಾಹ್ಮಣ ಸಮ್ಮೇಳನವನ್ನು ಪ್ರಬುದ್ಧ ವರ್ಗದ ಗೌರವಾರ್ಥ ಸೆಮಿನಾರ್ ಎಂದು ಮರುನಾಮಕರಣ ಮಾಡಲಾಗಿದೆ.
(ಒನ್ಇಂಡಿಯಾ ಸುದ್ದಿ)
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications