ಹೃದಯಸ್ಪರ್ಶಿ ಸಂಗತಿ; 14 ವರ್ಷದ ಬಾಲಕನನ್ನು ದತ್ತು ಪಡೆದ ಪೊಲೀಸ್ ಠಾಣೆ
ಮೀರತ್, ಫೆಬ್ರುವರಿ 16: ಎರಡು ವರ್ಷದ ಹಿಂದೆ ರಸ್ತೆ ಅಪಘಾತವೊಂದರಲ್ಲಿ ಅಪ್ಪ ತೀರಿಹೋಗಿದ್ದರು. ಅಮ್ಮನಿಗೆ ಮಾನಸಿಕ ಕಾಯಿಲೆ, ಆಸ್ಪತ್ರೆಯಲ್ಲೇ ಅವರ ವಾಸ. ಈ ನಡುವೆ ದಿಕ್ಕಾಪಾಲಾಗಿದ್ದ 14 ವರ್ಷದ ಅನ್ಮೋಲ್ ಎಂಬ ಬಾಲಕ. ಆದರೆ ಗೊತ್ತು ಗುರಿ ಇಲ್ಲದೇ ಅಲೆಯುತ್ತಿದ್ದ ಈ ಬಾಲಕನಿಗೆ ಪೊಲೀಸರೇ ದಾರಿ ದೀಪವಾಗಿದ್ದಾರೆ. ಆತನಿಗೆ ಉಜ್ವಲ ಭವಿಷ್ಯ ಕಟ್ಟಿಕೊಡಲು ಮುಂದಾಗಿದ್ದಾರೆ.
ಇಂಥ ಹೃದಯಸ್ಪರ್ಶಿ ಸಂಗತಿ ಬೆಳಕಿಗೆ ಬಂದಿರುವುದು ಉತ್ತರ ಪ್ರದೇಶದ ಮೀರತ್ ಎಂಬಲ್ಲಿ. ಅಪ್ಪ ಅಮ್ಮನಿಲ್ಲದೇ ಕೊರಗುತ್ತಿದ್ದ ಈ ಹುಡುನನ್ನು ರಕ್ಷಣೆ ಮಾಡಿದ್ದಲ್ಲದೇ ಮೀರತ್ ಪೊಲೀಸರೇ ಆತನನ್ನು ದತ್ತು ತೆಗೆದುಕೊಂಡಿದ್ದಾರೆ.
ಬಾಲಕನ ಕಷ್ಟ ಕಂಡ ಕನ್ಕೆರ್ಕೆರಾ ಪೊಲೀಸ್ ಠಾಣೆ ಠಾಣಾಧಿಕಾರಿ ಸಾಗರ್ ಈ ಹುಡುಗನನ್ನು ದತ್ತು ತೆಗೆದುಕೊಳ್ಳಲು ನಿರ್ಧರಿಸಿದ್ದರು. ಇದಕ್ಕೆ ಇಡೀ ಠಾಣೆ ಸಿಬ್ಬಂದಿಯೂ ಕೈಜೋಡಿಸಿದರು. ಇದೀಗ ಅನ್ಮೋಲ್ ಪೊಲೀಸ್ ಸಿಬ್ಬಂದಿ ಆರೈಕೆಯಲ್ಲಿ ಬೆಳೆಯುತ್ತಿದ್ದಾನೆ.

"ಅನ್ಮೋಲ್ ನಿಗೆ ಓದಿ ಜೀವನದಲ್ಲಿ ಏನಾದರೂ ಸಾಧಿಸುವ ಹಂಬಲವಿದೆ. ನಾವು ಕೆಲವು ಶಾಲೆಗಳೊಂದಿಗೆ ಮಾತನಾಡಿದ್ದೇವೆ. ಶೀಘ್ರವೇ ಆತ ಶಾಲೆಗೆ ಹೋಗುತ್ತಾನೆ. ಆತನನ್ನು ನಾವು ನೋಡಿಕೊಳ್ಳುತ್ತೇವೆ. ಅವರ ಭವಿಷ್ಯ ಚೆನ್ನಾಗಿರಬೇಕು" ಎಂದು ಠಾಣಾಧಿಕಾರಿ ಸಾಗರ್ ಬೆಂಬಲ ನೀಡುತ್ತಾರೆ. "ಮೂರು ತಿಂಗಳ ಹಿಂದೆ ಒಂದು ದೂರು ನೀಡಲು ಇವನ ತಾಯಿ ಬಂದಿದ್ದರು. ಅದೇ ಮೊದಲ ಬಾರಿ ಅವರನ್ನು ನೋಡಿದ್ದು. ಅವರ ಆರೋಗ್ಯ ಸರಿಯಿರಲಿಲ್ಲ. ಅವರನ್ನು ಜಿಲ್ಲಾಸ್ಪತ್ರೆಗೆ ಸೇರಿಸಿದೆವು. ಈ ಹುಡುಗ ಆನಂತರ ಒಂಟಿಯಾದ. ಆದ್ದರಿಂದ ಇವನನ್ನು ನಾವೆಲ್ಲಾ ಸೇರಿ ಸಾಕಲು ನಿರ್ಧರಿಸಿದೆವು" ಎಂದು ಹೇಳುತ್ತಾರೆ ಮತ್ತೊಬ್ಬ ಸಿಬ್ಬಂದಿ.
ಈಚೆಗೆ ಅನ್ಮೋಲ್ ತನ್ನ ಹುಟ್ಟು ಹಬ್ಬವನ್ನು ಪೊಲೀಸ್ ಠಾಣೆಯಲ್ಲಿ ಆಚರಿಸಿಕೊಂಡಿದ್ದಾನೆ. ಸಿಬ್ಬಂದಿ ಜೊತೆ ಅನ್ಮೋಲ್ ಕೇಕ್ ಕತ್ತರಿಸಿ ಸಂಭ್ರಮಿಸಿದ ವಿಡಿಯೋ ವೈರಲ್ ಆಗಿದ್ದು, ಆನಂತರ ಈ ಸಂಗತಿ ಬೆಳಕಿಗೆ ಬಂದಿದೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications