ಉತ್ತರ ಪ್ರದೇಶದಲ್ಲಿ ಊರಿಗೆ ಮರಳಿದ ವಲಸೆ ಕಾರ್ಮಿಕ ಆತ್ಮಹತ್ಯೆ
ಲಕ್ನೋ, ಜೂನ್ 12: ಕೊರೊನಾ ಲಾಕ್ಡೌನ್ನಲ್ಲಿ ಸಿಲುಕಿ ಹೇಗೋ ಮನೆಗೆ ಮರಳಿದ್ದ ವಲಸೆ ಕಾರ್ಮಿಕ ಮರಕ್ಕೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Recommended Video
ಉತ್ತರಾಖಂಡದ ಹರಿದ್ವಾರದ ಕಂಪನಿಯೊಂದರಲ್ಲಿ ಅಂಜನಿ ಕುಮಾರ್ ಸಿಂಗ್ ಕಾರ್ಯ ನಿರ್ವಹಿಸುತ್ತಿದ್ದರು. ಹದಿನೈದು ದಿನಗಳ ಹಿಂದಷ್ಟೇ ಮಠ ಯೋಗೇಂದ್ರ ಗಿರಿ ಗ್ರಾಮದ ತನ್ನ ಮನೆಗೆ ಹಿಂದಿರುಗಿದ್ದರು. ದೇಹವನ್ನು ಶವ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕೊರೊನಾ ಸಂಕಷ್ಟ: ಉಡುಪಿಯಲ್ಲಿ ಎರಡು ದಿನದಲ್ಲಿ ಮೂವರ ಆತ್ಮಹತ್ಯೆ
ಆರ್ಥಿಕವಾಗಿ ದುರ್ಬಲರಾಗಿದ್ದರು, ಕೆಲಸವಿಲ್ಲದ ಕಾರಣ ಮಾನಸಿಕವಾಗಿ ಕುಗ್ಗಿಹೋಗಿದ್ದರು, ಹೀಗಾಗಿ ಈ ನಿರ್ಧಾರ ಮಾಡಿರಬಹುದು ಎಂದು ಕುಟುಂಬದವರು ತಿಳಿಸಿದ್ದಾರೆ.
ದೇಶದಲ್ಲಿರುವ ಲಕ್ಷಾಂತರ ಮಂದಿ ವಲಸೆ ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದೆ. ಊರಿಗೆ ಮರಳಲು ಕಾರ್ಮಿಕರು ಕಷ್ಟಪಡುತ್ತಿದ್ದಾರೆ.
ಕೇಂದ್ರ ಸರ್ಕಾರವು ಶ್ರಮಿಕ್ ವಿಶೇಷ ರೈಲಿನ ಮೂಲಕ ಕಾರ್ಮಿಕರನ್ನು ಊರಿಗೆ ತೆರಳಲು ಅವಕಾಶ ಮಾಡಿಕೊಡುತ್ತಿದೆ ಆದರೆ, ಊರಲ್ಲಿ ಕೆಲಸವಿಲ್ಲದೆ ಆಹಾರ ಸಾಮಗ್ರಿಗಳನ್ನು ಕೊಳ್ಳಳು ಹಣವಿಲ್ಲದೆ ಸಂಕಷ್ಟದಲ್ಲಿದ್ದಾರೆ.