ಮೀರತ್: ಕೋತಿಗಳ ಕೈಯಲ್ಲಿ ಕೊರೊನಾ ವೈರಸ್ ಶಂಕಿತರ ಭವಿಷ್ಯ!
ಮೀರತ್, ಮೇ.30: ಕೋತಿಗಳು ಹಣ್ಣು-ಹಂಪಲುಗಳನ್ನು ಕಿತ್ತುಕೊಂಡು ಓಡುವುದು ಸರ್ವೇ ಸಾಮಾನ್ಯ. ಆದರೆ ಇದೀಗ ಟ್ರೆಂಡ್ ಚೇಂಜ್ ಆದಂತೆ ಕಾಣುತ್ತಿದೆ. ಕೊರೊನಾ ವೈರಸ್ ಸೋಂಕಿತರ ರಕ್ತ ಮತ್ತು ಗಂಟಲು ಮಾದರಿಯನ್ನು ಸಂಗ್ರಹಿಸಿಟ್ಟಿದ್ದ ಸ್ಯಾಂಪಲ್ ಕಿಟ್ ಗಳನ್ನು ಕೋತಿಗಳ ಟೀಮ್ ಒಂದು ಎತ್ತಿಕೊಂಡು ಓಡಿದೆ.
ಉತ್ತರ ಪ್ರದೇಶದ ಮೀರತ್ ನಲ್ಲಿರುವ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇಂಥದೊಂದು ವಿಚಿತ್ರ ಘಟನೆಯು ನಡೆದಿದೆ. ಕೊರೊನಾ ವೈರಸ್ ತಪಾಸಣೆಗೆ ಮಾದರಿ ಸಂಗ್ರಹಿಸಿಕೊಂಡು ತೆರಳುತ್ತಿದ್ದ ಟೆಕ್ನಿಷಿಯನ್ ಮೇಲೆ ಕೋತಿಗಳ ಟೀಮ್ ದಾಳಿ ನಡೆಸಿದೆ.
ಲ್ಯಾಬ್ ಟೆಕ್ನಿಷಿಯನ್ ಕೈಯಲ್ಲಿದ್ದ ಮೂರು ಕೊರೊನಾ ವೈರಸ್ ಸ್ಯಾಂಪಲ್ ಕಿಟ್ ಗಳನ್ನು ಕಿತ್ತುಕೊಂಡು ಕೋತಿಗಳು ಅಲ್ಲಿಂದ ಓಡಿ ಹೋಗಿವೆ. ಬಳಿಕ ವೈದ್ಯರು ಮತ್ತೊಮ್ಮೆ ಮೂವರು ಶಂಕಿತ ಕೊರೊನಾ ವೈರಸ್ ಸೋಂಕಿತರಿಂದ ರಕ್ತ ಮತ್ತು ಗಂಟಲು ದ್ರವ್ಯದ ಮಾದರಿಯನ್ನು ಸಂಗ್ರಹಿಸಿದರು.

ಕೋತಿಗಳಿಂದ ಸುತ್ತಮುತ್ತಲಿನ ಜನರಲ್ಲಿ ಆತಂಕ
ಕೊರೊನಾ ವೈರಸ್ ಸೋಂಕು ತಗಲಿರುವ ಶಂಕೆ ಹಿನ್ನೆಲೆಯಲ್ಲಿ ಸಂಗ್ರಹಿಸಿದ ಸ್ಯಾಂಪಲ್ ಗಳನ್ನು ಕೋತಿಗಳು ಕಿತ್ತುಕೊಂಡು ಹೋಗಿರುವುದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕ ಹೆಚ್ಚಾಗಿದೆ. ಒಂದು ವೇಳೆ ಸಂಗ್ರಹಿತ ಮಾದರಿಯಲ್ಲಿ ಕೊರೊನಾ ವೈರಸ್ ಸೋಂಕು ತಗಲಿದ್ದರೆ, ಸುತ್ತಮುತ್ತಲಿದ ಪ್ರದೇಶಗಳಲ್ಲಿನ ಜನರಿಗೂ ಮಹಾಮಾರಿ ಅಂಟಿಕೊಳ್ಳುವ ಅಪಾಯವಿದೆ.
ಕೋತಿಗಳ ಕಿತಾಪತಿ ಫುಲ್ ವೈರಲ್
ನೊವೆಲ್ ಕೊರೊನಾ ವೈರಸ್ ಶಂಕಿತರ ಸ್ಯಾಂಪಲ್ ಸಂಗ್ರಹಿಸಿ ತೆಗೆದುಕೊಂಡು ಹೋಗುತ್ತಿದ್ದ ವೇಳೆಯಲ್ಲಿ ಕಿಟ್ ನ್ನು ಕೋತಿಗಳ ತಂಡವು ಕಿತ್ತುಕೊಂಡು ಓಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ಮೀರತ್ ಡಿಸಿಗೆ ಆರೋಗ್ಯಾಧಿಕಾರಿಗಳ ದೂರು
ಮೀರತ್ ನಲ್ಲಿ ಕೋತಿಗಳು ನಡೆಸಿರುವ ಕಿತಾಪತಿಯ ಕುರಿತು ಮೆಡಿಕಲ್ ಕಾಲೇಜು ಆಸ್ಪತ್ರೆಯ ಚೀಫ್ ಸೂಪರಿಟೆಂಡೆಂಟ್ ಡಾ.ಧೀರಜ್ ಬಲ್ಯಾನ್ ಆತಂಕ ವ್ಯಕ್ತಪಡಿಸಿದ್ದಾರೆ. ಈ ಘಟನೆ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಅನಿಲ್ ಧಿಂಗ್ರಾರಿಗೆ ಮನವಿ ಮಾಡಿಕೊಂಡಿದ್ದಾರೆ.

ಪ್ಲೀಸ್ ಕೋತಿಗಳ ಕಾಟದಿಂದ ನೀಡಿ ಮುಕ್ತಿ!
ಮೀರತ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ಸುತ್ತಮುತ್ತಲಿನಲ್ಲಿ ಕೋತಿಗಳ ಹಾವಳಿಯು ಇಂದು ನಿನ್ನೆಯದ್ದಲ್ಲ. ಈ ಮಂಗಗಳ ಕಾಟದಿಂದ ಸಾರ್ವಜನಿಕರು ಮತ್ತು ಆಸ್ಪತ್ರೆಯ ಸಿಬ್ಬಂದಿ ಸಹ ಆತಂಕದಲ್ಲೇ ಓಡಾಡುವಂತಾ ಪರಿಸ್ಥಿತಿ ನಿರ್ಮಾಣವಾಗಿ ಬಿಟ್ಟಿದೆ. ಹೀಗಾಗಿ ಆದಷ್ಟು ಬೇಗ ಕೋತಿಗಳನ್ನು ಸೆರೆ ಹಿಡಿಯಬೇಕು ಎಂದು ಅರಣ್ಯ ಇಲಾಖೆಯವರಿಗೂ ದೂರು ನೀಡಲಾಗಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications