ಮೀರತ್: ಕೋತಿಗಳ ಕೈಯಲ್ಲಿ ಕೊರೊನಾ ವೈರಸ್ ಶಂಕಿತರ ಭವಿಷ್ಯ!
ಮೀರತ್, ಮೇ.30: ಕೋತಿಗಳು ಹಣ್ಣು-ಹಂಪಲುಗಳನ್ನು ಕಿತ್ತುಕೊಂಡು ಓಡುವುದು ಸರ್ವೇ ಸಾಮಾನ್ಯ. ಆದರೆ ಇದೀಗ ಟ್ರೆಂಡ್ ಚೇಂಜ್ ಆದಂತೆ ಕಾಣುತ್ತಿದೆ. ಕೊರೊನಾ ವೈರಸ್ ಸೋಂಕಿತರ ರಕ್ತ ಮತ್ತು ಗಂಟಲು ಮಾದರಿಯನ್ನು ಸಂಗ್ರಹಿಸಿಟ್ಟಿದ್ದ ಸ್ಯಾಂಪಲ್ ಕಿಟ್ ಗಳನ್ನು ಕೋತಿಗಳ ಟೀಮ್ ಒಂದು ಎತ್ತಿಕೊಂಡು ಓಡಿದೆ.
ಉತ್ತರ ಪ್ರದೇಶದ ಮೀರತ್ ನಲ್ಲಿರುವ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇಂಥದೊಂದು ವಿಚಿತ್ರ ಘಟನೆಯು ನಡೆದಿದೆ. ಕೊರೊನಾ ವೈರಸ್ ತಪಾಸಣೆಗೆ ಮಾದರಿ ಸಂಗ್ರಹಿಸಿಕೊಂಡು ತೆರಳುತ್ತಿದ್ದ ಟೆಕ್ನಿಷಿಯನ್ ಮೇಲೆ ಕೋತಿಗಳ ಟೀಮ್ ದಾಳಿ ನಡೆಸಿದೆ.
ಲ್ಯಾಬ್ ಟೆಕ್ನಿಷಿಯನ್ ಕೈಯಲ್ಲಿದ್ದ ಮೂರು ಕೊರೊನಾ ವೈರಸ್ ಸ್ಯಾಂಪಲ್ ಕಿಟ್ ಗಳನ್ನು ಕಿತ್ತುಕೊಂಡು ಕೋತಿಗಳು ಅಲ್ಲಿಂದ ಓಡಿ ಹೋಗಿವೆ. ಬಳಿಕ ವೈದ್ಯರು ಮತ್ತೊಮ್ಮೆ ಮೂವರು ಶಂಕಿತ ಕೊರೊನಾ ವೈರಸ್ ಸೋಂಕಿತರಿಂದ ರಕ್ತ ಮತ್ತು ಗಂಟಲು ದ್ರವ್ಯದ ಮಾದರಿಯನ್ನು ಸಂಗ್ರಹಿಸಿದರು.

ಕೋತಿಗಳಿಂದ ಸುತ್ತಮುತ್ತಲಿನ ಜನರಲ್ಲಿ ಆತಂಕ
ಕೊರೊನಾ ವೈರಸ್ ಸೋಂಕು ತಗಲಿರುವ ಶಂಕೆ ಹಿನ್ನೆಲೆಯಲ್ಲಿ ಸಂಗ್ರಹಿಸಿದ ಸ್ಯಾಂಪಲ್ ಗಳನ್ನು ಕೋತಿಗಳು ಕಿತ್ತುಕೊಂಡು ಹೋಗಿರುವುದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕ ಹೆಚ್ಚಾಗಿದೆ. ಒಂದು ವೇಳೆ ಸಂಗ್ರಹಿತ ಮಾದರಿಯಲ್ಲಿ ಕೊರೊನಾ ವೈರಸ್ ಸೋಂಕು ತಗಲಿದ್ದರೆ, ಸುತ್ತಮುತ್ತಲಿದ ಪ್ರದೇಶಗಳಲ್ಲಿನ ಜನರಿಗೂ ಮಹಾಮಾರಿ ಅಂಟಿಕೊಳ್ಳುವ ಅಪಾಯವಿದೆ.
ಕೋತಿಗಳ ಕಿತಾಪತಿ ಫುಲ್ ವೈರಲ್
ನೊವೆಲ್ ಕೊರೊನಾ ವೈರಸ್ ಶಂಕಿತರ ಸ್ಯಾಂಪಲ್ ಸಂಗ್ರಹಿಸಿ ತೆಗೆದುಕೊಂಡು ಹೋಗುತ್ತಿದ್ದ ವೇಳೆಯಲ್ಲಿ ಕಿಟ್ ನ್ನು ಕೋತಿಗಳ ತಂಡವು ಕಿತ್ತುಕೊಂಡು ಓಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ಮೀರತ್ ಡಿಸಿಗೆ ಆರೋಗ್ಯಾಧಿಕಾರಿಗಳ ದೂರು
ಮೀರತ್ ನಲ್ಲಿ ಕೋತಿಗಳು ನಡೆಸಿರುವ ಕಿತಾಪತಿಯ ಕುರಿತು ಮೆಡಿಕಲ್ ಕಾಲೇಜು ಆಸ್ಪತ್ರೆಯ ಚೀಫ್ ಸೂಪರಿಟೆಂಡೆಂಟ್ ಡಾ.ಧೀರಜ್ ಬಲ್ಯಾನ್ ಆತಂಕ ವ್ಯಕ್ತಪಡಿಸಿದ್ದಾರೆ. ಈ ಘಟನೆ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಅನಿಲ್ ಧಿಂಗ್ರಾರಿಗೆ ಮನವಿ ಮಾಡಿಕೊಂಡಿದ್ದಾರೆ.

ಪ್ಲೀಸ್ ಕೋತಿಗಳ ಕಾಟದಿಂದ ನೀಡಿ ಮುಕ್ತಿ!
ಮೀರತ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ಸುತ್ತಮುತ್ತಲಿನಲ್ಲಿ ಕೋತಿಗಳ ಹಾವಳಿಯು ಇಂದು ನಿನ್ನೆಯದ್ದಲ್ಲ. ಈ ಮಂಗಗಳ ಕಾಟದಿಂದ ಸಾರ್ವಜನಿಕರು ಮತ್ತು ಆಸ್ಪತ್ರೆಯ ಸಿಬ್ಬಂದಿ ಸಹ ಆತಂಕದಲ್ಲೇ ಓಡಾಡುವಂತಾ ಪರಿಸ್ಥಿತಿ ನಿರ್ಮಾಣವಾಗಿ ಬಿಟ್ಟಿದೆ. ಹೀಗಾಗಿ ಆದಷ್ಟು ಬೇಗ ಕೋತಿಗಳನ್ನು ಸೆರೆ ಹಿಡಿಯಬೇಕು ಎಂದು ಅರಣ್ಯ ಇಲಾಖೆಯವರಿಗೂ ದೂರು ನೀಡಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications