ಅಯೋಧ್ಯಾ ಮೇಲ್ಮನವಿಗೆ ಮುಸ್ಲಿಂ ಸೆಲೆಬ್ರಿಟಿಗಳ ವಿರೋಧ
ಲಕ್ನೋ, ನವೆಂಬರ್ 26: ಅಯೋಧ್ಯಾ ರಾಮಜನ್ಮಭೂಮಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವ ಕೆಲ ಅರ್ಜಿದಾರರ ವಿರುದ್ಧ ಮುಸ್ಲಿಂ ಖ್ಯಾತನಾಮರು ತಗಾದೆ ತೆಗೆದಿದ್ದಾರೆ.
ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹಾಗೂ ಇತರೆ ಸಂಘಟನೆಗಳ ನಿರ್ಧಾರಗಳು ಮುಸ್ಲಿಂ ವಿರೋಧಿ ಎಂದು ಶಬಾನಾ ಆಜ್ಮಿ, ನಾಸರುದ್ದಿನ್ ಷಾ, ಅಂಜುಂ ರಾಜಬಾಲಿ, ಜಾವೇದ್ ಆನಂದ್ ಸೇರಿ ನೂರಕ್ಕೂ ಅಧಿಕ ಸೆಲೆಬ್ರಿಟಿಗಳು ಆಗ್ರಹಿಸಿದ್ದಾರೆ.
''ಕೆಲ ಭಾರತೀಯ ಮುಸ್ಲಿಂ ಸಮುದಾಯ ಸಂವಿಧಾನ ತಜ್ಞರು ಜಾತ್ಯತೀತ ಸಂಘಟನೆಗಳ ಮೇಲ್ಮನವಿ ಸಲ್ಲಿಸುವ ನಿರ್ಧಾರಕ್ಕೆ ನಮ್ಮ ಅಸಂತೋಷವಿದೆ, ದೇಶದ ಸರ್ವೋಚ್ಛ ನ್ಯಾಯಾಲಯದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ.

ನ್ಯಾಯಾಲಯದ ಆದೇಶವು ಸರಿ ಇಲ್ಲ ಎಂದು ನಮಗೂ ಅನಿಸುತ್ತದೆ ಆದರೆ ಅಯೋಧ್ಯಾ ವಿವಾದವನ್ನು ಮುಂದುವರೆಸುವುದರಿಂದ ನಮಗೇ ನಷ್ಟವಾಗುತ್ತದೆ ಇದರಿಂದ ಭಾರತೀಯ ಮುಸ್ಲಿಮರಿಗೆ ಯಾವುದೇ ನೆರವಾಗುವುದಿಲ್ಲ'' ಎಂದು ಎಚ್ಚರಿಸಿದ್ದಾರೆ.
ಅಯೋಧ್ಯಾ ತೀರ್ಪು ಸಮರ್ಪಕವಾಗಿಲ್ಲ, ಮುಸ್ಲಿಂ ಶರ್ಯತ್ ನಂಬಿಕೆಗೆ ವಿರುದ್ಧವಾಗಿದೆ ಎಂದು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಜಮೈತ್-ಉಲ್-ಎ- ಹಿಂದ್ ಹಾಗೂ ಇತರೆ ಕೆಲ ಮುಸ್ಲಿಂ ಮುಖಂಡರು ಸುಪ್ರೀಂಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವುದಾಗಿ ನವೆಂಬರ್ 17ರಂದು ಘೋಷಿಸಿದ್ದರು.
ಈ ನಿರ್ಧಾರಕ್ಕೆ ಮುಸ್ಲಿಂ ಸಮುದಾಯದಿಂದಲೇ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದು ರಾಜಕೀಯ ಚರ್ಚೆಗೂ ಕಾರಣವಾಗಿದೆ.ಪ್ರಕರಣ ಪ್ರಮುಖ ಅರ್ಜಿದಾರ ಸುನ್ನಿ ವಕ್ಫ್ ಬೋರ್ಡ್ ಹಾಗೂ ಇಕ್ಬಾಲ್ ಅನ್ಸಾರಿ ಕೂಡ ಮೇಲ್ಮನವಿ ಸಲ್ಲಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದರು.
ನೂರಾರು ವರ್ಷಗಳಿಂದ ನಡೆದುಬಂದ ವಿವಾದಕ್ಕೆ ಸುಪ್ರೀಂಕೋರ್ಟ್ ತೆರೆ ಎಳೆದಿದೆ, ಈ ವಿಚಾರವನ್ನು ಇಲ್ಲಿಗೆ ಬಿಡುವುದು ಒಳಿತು ಎಂದು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಗೆ ಹಾಗೂ ಇತರ ಮುಖಂಡರಿಗೆ ಮನವಿ ಮಾಡಿದ್ದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications