ಅಜಂ ಖಾನ್ 'ಮೊಗ್ಯಾಂಬೋ' ಎಂದ ಕೇಂದ್ರ ಸಚಿವರಿಗೆ ತೊಂದರೆ
ನವದೆಹಲಿ, ಏಪ್ರಿಲ್ 17: ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ರನ್ನು ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು 'ಮೊಗ್ಯಾಂಬೋ' ಎಂದು ಕರೆದಿದ್ದಾರೆ. ಅಬ್ಬಾಸ್ ನಖ್ವಿ ಅವರ ಹೇಳಿಕೆಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ದೂರು ನೀಡಲಾಗಿದೆ.
ರಾಮ್ ಪುರದ ಚುನಾವಣಾ ಪ್ರಚಾರ ಸಭೆಯಲ್ಲಿ ನಖ್ವಿ ಅವರು ಈ ರೀತಿ ಹೇಳಿಕೆ ನೀಡಿದ್ದರು. ಬಾಲಿವುಡ್ ನ ಜನಪ್ರಿಯ ವಿಲನ್ ಪಾತ್ರವಾದ 'ಮೊಗ್ಯಾಂಬೋ' ಗೆ ಅಜಂ ಖಾನ್ ರನ್ನು ಹೋಲಿಸಿದ್ದರು. ನಟಿ ಕಮ್ ರಾಜಕಾರಣಿ, ಬಿಜೆಪಿಯ ಸ್ಪರ್ಧಿ ಜಯಪ್ರದಾ ಅವರ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ 'ಖಾಕಿ ಒಳಚಡ್ಡಿ' ಎಂಬ ಪದ ಬಳಸಿ ಕೀಳುಮಟ್ಟದ ಹೇಳಿಕೆ ನೀಡಿದ್ದ ಅಜಂ ಖಾನ್ ವಿರುದ್ಧ ನಖ್ವಿ ಅವರು ಈ ರೀತಿ ಪದ ಪ್ರಯೋಗ ಮಾಡಿದ್ದಾರೆ.
ರಾಮಪುರದ ಎಸ್ಪಿ ಅರುಣ್ ಕುಮಾರ್ ಸಿಂಗ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ ಮುಖಂಡ ಮುಖ್ತಾರ್ ಅಬ್ಬಾಸ್ ನಖ್ವಿ ಅವರ ಹೇಳಿಕೆ ಆಧಾರದ ಮೇಲೆ ಮ್ಯಾಜಿಸ್ಟ್ರೇಟ್ ಅವರಿಂದ ದೂರು ಸ್ವೀಕರಿಸಲಾಗಿದೆ. ಎನ್ ಸಿಆರ್ ದಾಖಲಿಸಲಾಗಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದಿದ್ದಾರೆ. ಮ್ಯಾಜಿಸ್ಟ್ರೇಟ್ ಎಂಕೆ ಗುಪ್ತಾ ಅವರು ಪ್ರಕರಣ ದಾಖಲಿಸಿದ್ದರು.

ರಾಮ್ ಪುರ ಕ್ಷೇತ್ರದ ಷಹಾಬಾದ್ ರಾಮ್ ಲೀಲಾ ಮೈದಾನದಲ್ಲಿ ಸೋಮವಾರದಂದು ಭಾಷಣ ಮಾಡುವಾಗ ನಖ್ವಿ ಅವರು ಬಳಸಿದ ಪದ ಬಳಕೆ ಆಕ್ಷೇಪಾರ್ಹವಾಗಿದ್ದು, ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ದೂರು ಬಂದಿದೆ. ಈ ಕುರಿತಂತೆ ಎಫ್ಐಆರ್ ಕೂಡಾ ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications