Get Updates
Get notified of breaking news, exclusive insights, and must-see stories!

ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಮುಲಾಯಂ ಸಿಂಗ್ ಯಾದವ್ ಸೊಸೆ ಅಪರ್ಣಾ

ಲಕ್ನೋ, ಜನವರಿ 18: ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಅವರು ಜನವರಿ 19ರಂದು ಬುಧವಾರ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ.

ಕಳೆದ ವಾರ ಹಲವು ಪ್ರಮುಖ ನಾಯಕರನ್ನು ಕಳೆದುಕೊಂಡಿರುವ ಬಿಜೆಪಿ ಇದೀಗ ಸಮಾಜವಾದಿ ಪಕ್ಷದ ನಾಯಕರು ಸೆಳೆಯಲು ಮುಂದಾಗಿದೆ.

ಅಪರ್ಣಾ ಯಾದವ್ ಅವರು ಮುಲಾಯಂ ಸಿಂಗ್ ಅವರ ಕಿರಿಯ ಪುತ್ರ ಪ್ರತೀಕ್ ಯಾದವ್ ಅವರ ಪತ್ನಿ, ಕೆಲ ದಿನಗಳಿಂದ ಬಿಜೆಪಿ ಹಾಗೂ ಅಪರ್ಣಾ ಯಾದವ್ ನಡುವೆ ಮಾತುಕತೆ ನಡೆಯುತ್ತಿದ್ದು, ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇರುವಂತೆಯೇ ಎರಡೂ ಕಡೆಯವರು ಒಪ್ಪಂದಕ್ಕೆ ಬಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

Mulayam Singhs Daughter-in-law Aparna Yadav To Join BJP On Jan 19

ಅಪರ್ಣಾ ಯಾದವ್ ಅವರು, 2017ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಲಕ್ನೋ ಕ್ಯಾಂಟ್ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಅವರು ಬಿಜೆಪಿ ಅಭ್ಯರ್ಥಿ ರೀಟಾ ಬಹುಗುಣ ಜೋಶಿ ವಿರುದ್ಧ 33,796 ಮತಗಳಿಂದ ಸೋಲು ಅನುಭವಿಸಿದ್ದರು.

ಸಮಾಜವಾದಿ ಪಕ್ಷದಿಂದ ಈಗಾಗಲೇ ಹಲವಾರು ಮಂದಿ ಪಕ್ಷಾಂತರ ಮಾಡಿದ್ದು, ಈ ಮಧ್ಯೆ ಅಪರ್ಣಾ ಯಾದವ್ ಬಿಜೆಪಿಗೆ ಸೇರಿದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಮೇಲೆ ದುಷ್ಪರಿಣಾಮ ಬೀರಲಿದೆ.

ಇತ್ತೀಚೆಗೆ, ಯೋಗಿ ಸಂಪುಟದಲ್ಲಿ ಸಚಿವರಾಗಿದ್ದ ಬಿಜೆಪಿಯ ಸ್ವಾಮಿ ಪ್ರಸಾದ್ ಮೌರ್ಯ ಮತ್ತು ಧರಂ ಸಿಂಗ್ ಸೈನಿ ಅವರು ಇತರ ಶಾಸಕರೊಂದಿಗೆ ತಮ್ಮ ಬೆಂಬಲಿಗರೊಂದಿಗೆ ಸಮಾಜವಾದಿ ಪಕ್ಷ ಸೇರ್ಪಡೆಗೊಂಡಿದ್ದರು.

ಸಮಾಜವಾದಿ ಪಕ್ಷದ ಕಿರಿಯ ಸೊಸೆ ಅಪರ್ಣಾ ಯಾದವ್ ಅವರು ಯಾವಾಗಲೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಪ್ರಧಾನಿ ಮೋದಿಯನ್ನು ಹೊಗಳುತ್ತಾರೆ. ರಾಮ ಮಂದಿರಕ್ಕೆ 11 ಲಕ್ಷ 11 ಸಾವಿರ ದೇಣಿಗೆ ಕೂಡ ನೀಡಿದ್ದಾರೆ. ಇದರೊಂದಿಗೆ ದತ್ತಾತ್ರೇಯ ಹೊಸಬಾಳೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘವು ಸರ್ಕಾರಿ ಸಂಸ್ಥೆಯಾದಾಗ ಅವರೊಂದಿಗೆ ತಮ್ಮ ಫೋಟೋವನ್ನು ಸಹ ಹಂಚಿಕೊಂಡಿದ್ದರು.

ಅಪರ್ಣಾ ಯಾದವ್ ಅವರು ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುತ್ತಾರೆ ಎಂಬ ಭರವಸೆಯ ಮೇರೆಗೆ ಬಿಜೆಪಿಗೆ ಸೇರುತ್ತಾರೆ ಎಂದು ನಂಬಲಾಗಿದೆ. ಆದರೂ ಬಿಜೆಪಿ ಈ ಬಾರಿ ಅವರನ್ನು ಬೇರೆ ಕ್ಷೇತ್ರದಿಂದ ಕಣಕ್ಕಿಳಿಸಲು ಉತ್ಸುಕವಾಗಿದೆ ಎಂದು ಮೂಲಗಳು ತಿಳಿಸಿವೆ.

- ಎರಡನೇ ಹಂತದಲ್ಲಿ ಫೆಬ್ರವರಿ 14ರಂದು ಮತದಾನ

- ಮೂರನೇ ಹಂತದಲ್ಲಿ ಫೆಬ್ರವರಿ 20ರಂದು ಮತದಾನ

- ನಾಲ್ಕನೇ ಹಂತದಲ್ಲಿ ಫೆಬ್ರವರಿ 23ರಂದು ಮತದಾನ

- ಐದನೇ ಹಂತದಲ್ಲಿ ಫೆಬ್ರವರಿ 27ರಂದು ಮತದಾನ

- ಆರನೇ ಹಂತದಲ್ಲಿ ಮಾರ್ಚ್ 3ರಂದು ಮತದಾನ

- ಏಳನೇ ಹಂತದಲ್ಲಿ ಮಾರ್ಚ್ 7ರಂದು ಮತದಾನ

ಉತ್ತರ ಪ್ರದೇಶ ಗದ್ದುಗೆ ಹಿಡಿಯಲು ಪೈಪೋಟಿ:
ದೇಶದಲ್ಲಿ ಅತಿಹೆಚ್ಚು ವಿಧಾನಸಭೆ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಅಧಿಕಾರದ ಗದ್ದುಗೆ ಹಿಡಿಯುವುದಕ್ಕೆ ಬಿಜೆಪಿ, ಸಮಾಜವಾದಿ ಮತ್ತು ಬಹುಜನ ಸಮಾಜವಾದಿ ಸೇರಿದಂತೆ ಪ್ರಾದೇಶಿಕ ಪಕ್ಷಗಳ ನಡುವೆ ಪೈಪೋಟಿ ನಡೆಯುತ್ತಿದೆ. ಅತಿಹೆಚ್ಚು ಕ್ಷೇತ್ರಗಳನ್ನು ಹೊಂದಿರುವ ರಾಜ್ಯದ ಮತದಾರರ ಮನ ಗೆಲ್ಲುವುದಕ್ಕಾಗಿ ಇತ್ತೀಚಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಲವು ಬಾರಿ ರಾಜ್ಯಕ್ಕೆ ಭೇಟಿ ನೀಡಿ ಸಾಕಷ್ಟು ಯೋಜನೆಗಳಿಗೆ ಚಾಲನೆ ನೀಡಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+