Get Updates
Get notified of breaking news, exclusive insights, and must-see stories!

ವಿಎಚ್‌ಪಿ ಸಭೆ: ಅಯೋಧ್ಯೆ ತೊರೆಯಲು ಮುಸ್ಲಿಂ ಅರ್ಜಿದಾರನ ಚಿಂತನೆ

ಲಕ್ನೋ, ನವೆಂಬರ್ 15: ಅಯೋಧ್ಯಾದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಬೃಹತ್ Rally ನಡೆಸಲು ತೀರ್ಮಾನಿಸಿದ್ದು, ಮೆರವಣಿಗೆ ನಡೆಸುವ ಉದ್ದೇಶದಲ್ಲಿ ಯಾವುದೇ ಬೇರೆ ಸಮಸ್ಯೆ ಕಾಣಿಸುತ್ತಿಲ್ಲ ಎಂದು ಸರ್ಕಾರ ಹೇಳಿದೆ. ಆದರೆ, ಅಯೋಧ್ಯಾ ವಿವಾದದಲ್ಲಿ ಪ್ರಮುಖ ಅರ್ಜಿದಾರನಾಗಿರುವ ಮುಸ್ಲಿಂ ವ್ಯಕ್ತಿ ತಾವು ಪಟ್ಟಣವನ್ನು ತೊರೆಯಲು ಸಿದ್ಧರಾಗಿರುವುದಾಗಿ ಹೇಳಿದ್ದಾರೆ.

ವಿಎಚ್‌ಪಿಯ ಧರ್ಮ ಸಭಾ ಕಾರ್ಯಕ್ರಮ ನವೆಂಬರ್ 25ರಂದು ಆಯೋಜನೆಯಾಗಿದೆ. ಲಕ್ಷಾಂತರ 'ರಾಮ ಭಕ್ತರು' ಇದರಲ್ಲಿ ಪಾಲ್ಗೊಳ್ಳಲಿದ್ದು, ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಚರ್ಚಿಸಲಿದ್ದಾರೆ ಎಂದು ಸಂಘಟನೆ ತಿಳಿಸಿದೆ.

ಜನವರಿಯಲ್ಲಿ ಈ ವಿವಾದದ ಸಂಬಂಧ ಸುಪ್ರೀಂಕೋರ್ಟ್ ವಿಚಾರಣೆ ಆರಂಭವಾಗಲಿದೆ. ವಿಚಾರನೆ ಬಾಕಿ ಇರುವಾಗಲೇ ಸರ್ಕಾರವು ರಾಮ ಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಚಾಲನೆ ನೀಡಬಹುದು ಎಂಬ ಆಗ್ರಹಗಳು ಕೇಳಿಬಂದಿವೆ.

muslim petitioner ready to leave ayodhya after VHP rally plans

ಉತ್ತರ ಪ್ರದೇಶ ಸರ್ಕಾರ ಮತ್ತು ವಿವಿಧ ಸಂಘಟನೆಗಳ ನಡೆ ಅಯೋಧ್ಯಾದ ಮುಸ್ಲಿಂ ನಿವಾಸಿಗಳನ್ನು ಚಿಂತೆಗೀಡು ಮಾಡಿದೆ.

'ಬಾಬ್ರಿ ಮಸೀದಿಯ ನಾಶದ ಸಂದರ್ಭದಲ್ಲಿ 1992ರಲ್ಲಿ ನಮ್ಮ ಮನೆಗಳನ್ನು ಸುಟ್ಟುಹಾಕಲಾಯಿತು' ಎಂದು ಅಯೋಧ್ಯಾ ಭೂಮಿ ವಿವಾದದ ಪ್ರಮುಖ ಅರ್ಜಿದಾರ ಇಕ್ಬಾಲ್ ಅನ್ಸಾರಿ ಹೇಳಿದ್ದಾರೆ.

1992ರಂತೆಯೇ ಬೃಹತ್ ಗುಂಪು ಇಲ್ಲಿ ಸೇರಿಕೊಂಡರೆ ಅಯೋಧ್ಯಾದಲ್ಲಿರುವ ಮುಸ್ಲಿಮರಿಗೆ ಮತ್ತು ನನಗೆ ರಕ್ಷಣೆ ನೀಡಬೇಕಾಗುತ್ತದೆ. ನನಗೆ ಭದ್ರತೆ ನೀಡದೆ ಇದ್ದರೆ ನಾನು ನವೆಂಬರ್ 25ಕ್ಕೂ ಮುನ್ನ ಬೇರೆ ಎಲ್ಲಿಗಾದರೂ ಹೋಗಬೇಕಾಗುತ್ತದೆ ಎಂದು ಅನ್ಸಾರಿ ಕಳವಳ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಪೊಲೀಸ್ ಭದ್ರತೆ ಹೊಂದಿರುವ ಅನ್ಸಾರಿ, ನಗರದಲ್ಲಿರುವ ಹಿಂದೂ ಮತ್ತು ಮುಸ್ಲಿಮರಿಬ್ಬರಿಗೂ ಹೆಚ್ಚುವರಿ ಭದ್ರತೆಗಾಗಿ ಕೋರಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+