ಹಿಂದು ಪುರಾಣ + ಅತ್ಯಾಚಾರದ ಬಗ್ಗೆ ಬೋಧನೆ; ಉಪನ್ಯಾಸಕ ಅಮಾನತು!
ಅಲಿಘರ್, ಏಪ್ರಿಲ್ 6: ಉತ್ತರ ಪ್ರದೇಶದಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಅಲಿಘರ್ ವಿಶ್ವವಿದ್ಯಾಲಯದ ಉಪನ್ಯಾಸಕರೊಬ್ಬರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ವಿಧಿವಿಜ್ಞಾನ ಶಾಸ್ತ್ರದ ಕುರಿತು ಬೋಧನೆ ಮಾಡುತ್ತಿರುವ ಸಂದರ್ಭದಲ್ಲಿ ಜವಾಹರಲಾಲ್ ನೆಹರೂ ವೈದ್ಯಕೀಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಜೀತೇಂದ್ರ ಕುಮಾರ್ ಅತ್ಯಾಚಾರಕ್ಕೆ ಸಂಬಂಧಿಸಿದ ವಿಷಯವನ್ನು ಪ್ರಸ್ತಾಪಿಸಿದ್ದರು. ಹಿಂದು ಪುರಾಣಗಳಲ್ಲಿನ ಅತ್ಯಾಚಾರದ ಕುರಿತು ಉದಾಹರಣೆಗಳನ್ನು ನೀಡಿದ್ದರು ಎಂದು ಅಲಿಘರ್ ವಿಶ್ವವಿದ್ಯಾಲಯದ ಅಧಿಕಾರಿಗಳು ಹೇಳಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ಜಾರಿಗೊಳಿಸುತ್ತಿದ್ದಂತೆ ಕ್ಷಮೆಯಾಚಿಸಿರುವ ಉಪನ್ಯಾಸಕ ಡಾ. ಜೀತೇಂದ್ರ ಕುಮಾರ್, ಅಲಿಘರ್ ವಿವಿ ಉಪ ಕುಲಪತಿ ತಾರಿಕ್ ಮನ್ಸೂರ್ ಅವರಿಗೆ ಬುಧವಾರ ಪತ್ರವೊಂದನ್ನು ಬರೆದಿದ್ದಾರೆ. ''ನಮ್ಮ ಸಮಾಜದಲ್ಲಿ ಅತ್ಯಾಚಾರ ಪ್ರಕರಣಗಳು ಬಹಳ ಹಿಂದಿನಿಂದಲೂ ನಡೆಯುತ್ತಿದ್ದವು ಎಂಬುದನ್ನು ಉಲ್ಲೇಖಿಸುವುದಷ್ಟೇ ನನ್ನ ಉದ್ದೇಶವಾಗಿತ್ತೇ ವಿನಃ, ಯಾವುದೇ ಧರ್ಮದವರಿಗೆ ನೋವುಂಟು ಮಾಡುವುದು ಆಗಿರಲಿಲ್ಲ. ಇದು ಉದ್ದೇಶಪೂರ್ವಕವಾಗಿ ಮಾಡಿರುವ ತಪ್ಪಲ್ಲ. ಭವಿಷ್ಯದಲ್ಲಿ ಮತ್ತೊಮ್ಮೆ ಇಂಥ ತಪ್ಪನ್ನು ಮಾಡುವುದಿಲ್ಲ," ಎಂದು ಉಪನ್ಯಾಸಕ ಜೀತೇಂದ್ರ ಕುಮಾರ್ ಹೇಳಿದ್ದಾರೆ.

ಉಪನ್ಯಾಸಕರ ವಿರುದ್ಧ ತನಿಖೆಗೆ ಸಮಿತಿ ರಚನೆ:
ಅತ್ಯಾಚಾರದ ಬಗ್ಗೆ ವಿವರಿಸುವುದಕ್ಕೆ ಹಿಂದೂ ಪುರಾಣವನ್ನು ಉಲ್ಲೇಖಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಮಾನತುಗೊಂಡಿರುವ ಉಪನ್ಯಾಸಕ ಡಾ. ಜೀತೇಂದ್ರ ಕುಮಾರ್ ವಿರುದ್ಧ ತನಿಖೆ ನಡೆಸುವುದಕ್ಕೆ ಅಲಿಘರ್ ವಿಶ್ವವಿದ್ಯಾಲಯವೇ ಇಬ್ಬರು ಸದಸ್ಯರನ್ನೊಳಗೊಂಡ ಸಮಿತಿಯೊಂದನ್ನು ರಚಿಸಿದೆ. ಇಡೀ ಪ್ರಕರಣದ ಗಂಭೀರತೆ ಮತ್ತು ಪ್ರಾಥಮಿಕ ಸಾಕ್ಷ್ಯಗಳನ್ನು ಆಧಾರವಾಗಿಟ್ಟುಕೊಂಡು ಜೀತೇಂದ್ರ ಕುಮಾರ್ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗಿದೆ. ಅವರ ವಿಚಾರಣೆಗೂ ಮೊದಲೇ ಅಮಾನತುಗೊಳಿಸಲಾಗಿದೆ ಎಂದು ವಿವಿ ಅಧಿಕಾರಿಗಳು ತಿಳಿಸಿದ್ದಾರೆ.
ವಿವಾದ ಹುಟ್ಟಿಕೊಂಡಿದ್ದು ಹೇಗೆ?:
ಉಪನ್ಯಾಸಕ ಜೀತೇಂದ್ರ ಕುಮಾರ್ ಬೋಧನೆ ಮಾಡುತ್ತಿರುವ ಸಂದರ್ಭದಲ್ಲಿ ಪುರಾಣ ಹಾಗೂ ಅತ್ಯಾಚಾರದ ಬಗ್ಗೆ ಉಲ್ಲೇಖಿಸಿದ್ದು, ಸ್ಲೈಡ್ ಶೋ ಅನ್ನು ತೋರಿಸಿದ್ದಾರೆ. ಹೀಗೆ ಉಪನ್ಯಾಸಕರು ಮಾಡುತ್ತಿದ್ದ ಬೋಧನೆಯ ವಿಡಿಯೋವನ್ನು ಮಾಡಿಕೊಂಡಿರುವ ಕೆಲವು ವಿದ್ಯಾರ್ಥಿಗಳು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟಿದ್ದಾರೆ. ಇದರಿಂದ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂಬುದು ತೀವ್ರ ವಿವಾದಕ್ಕೆ ಕಾರಣವಾಯಿತು.
ಶೋಕಾಸ್ ನೋಟಿಸ್ ನಲ್ಲಿ ಇರುವುದೇನು?:
ಅಲಿಘರ್ ವಿಶ್ವವಿದ್ಯಾಲಯದ ವೈದ್ಯಕೀಯ ವಿಭಾಗದ ಡೀನ್ ಆಗಿರುವ ರಾಕೇಶ್ ಭಾರ್ಗವ್ ಸೂಚನೆ ಮೇರೆಗೆ ಸಹಾಯಕ ಉಪನ್ಯಾಸಕ ಜೀತೇಂದ್ರ ಕುಮಾರ್ ವಿರುದ್ಧ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ. "ತರಗತಿಯಲ್ಲಿ ದುರುದ್ದೇಶವನ್ನು ಇಟ್ಟುಕೊಂಡೇ ಉದ್ದೇಶಪೂರ್ವಕವಾಗಿ ಪಿಪಿಟಿ ಮೂಲಕ ಬೋಧನೆ ಮಾಡಲಾಗಿದೆ. ಈ ವೇಳೆಯಲ್ಲಿ ಒಂದು ಸಮುದಾಯದ ಧಾರ್ಮಿಕ ನಂಬಿಕೆಗಳಿಗೆ ನೋವುಂಟು ಮಾಡಿದ್ದೀರಿ. ಹೀಗಾಗಿ ಶಿಸ್ತುಕ್ರಮ ಜರುಗಿಸಲಾಗುವುದು," ಎಂದು ವಿವಿ ಕುಲಸಚಿವ ಅಬ್ದುಲ್ ಹಮೀದ್ ನೀಡಿರುವ ನೋಟಿಸ್ನಲ್ಲಿ ಹೇಳಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications