ಅತ್ಯಾಚಾರ ಸಂತ್ರಸ್ತೆ ಬಗ್ಗೆ ಮಹಿಳಾ ಆಯೋಗ ಸದಸ್ಯೆಯಿಂದ ವಿವಾದಾತ್ಮಕ ಹೇಳಿಕೆ
ಲಖನೌ,ಜನವರಿ 08: ಅತ್ಯಾಚಾರ ಸಂತ್ರಸ್ತೆ ಬಗ್ಗೆ ಮಹಿಳಾ ಆಯೋಗದ ಸದಸ್ಯೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇತ್ತೀಚೆಗಷ್ಟೇ ಉತ್ತರ ಪ್ರದೇಶದ ಬದೌನ್ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಹತ್ಯೆ ಮಾಡಲಾಗಿತ್ತು, ಅವರ ಮನೆಗೆ ಭೇಟಿ ನೀಡಿದ್ದಾರೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಚಂದ್ರಕುಮಾರಿ ದೇವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಅತ್ಯಾಚಾರಕ್ಕೊಳಗಾದ ಮಹಿಳೆ ಸಂಜೆಯ ನಂತರ ಮನೆಯಿಂದ ಹೊರಗೆ ಹೋಗದೇ ಇದ್ದಿದ್ದರೆ ಅತ್ಯಾಚಾರ ನಡೆಯುತ್ತಿರಲಿಲ್ಲ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.

ಗ್ಯಾಂಗ್ ರೇಪ್ ಸಂತ್ರಸ್ತೆಯ ಕುಟುಂಬ ಸದಸ್ಯರೊಂದಿಗೆ ಮಾತನಾಡುವುದಕ್ಕೆ ರಾಷ್ಟ್ರೀಯ ಮಹಿಳಾ ಆಯೋಗ ಚಂದ್ರ ಕುಮಾರಿ ದೇವಿ ಅವರನ್ನು ಬದೌನ್ ಗೆ ಕಳಿಸಿತ್ತು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಿಳೆಯರು ಸಮಯದ ಬಗ್ಗೆ ಯಾವಗಾಲೂ ಗಮನ ಹೊಂದಬೇಕು, ಯಾರ ಒತ್ತಡ ಬಂದರೂ ತಡವಾದ ನಂತರ ಹೊರ ಹೋಗಬಾರದು, ಅತ್ಯಾಚಾರ ಸಂತ್ರಸ್ತೆ ಮನೆಯಿಂದ ಒಬ್ಬಂಟಿಯಾಗಿ ಸಂಜೆ ನಂತರ ಹೋಗದೇ ಇದ್ದಿದ್ದರೆ ಅಥವಾ ಕುಟುಂಬ ಸದಸ್ಯರ ಜೊತೆ ಹೋಗಿದ್ದಿದ್ದರೆ ಆಕೆಯನ್ನು ರಕ್ಷಿಸಬಹುದಾಗಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
50 ವರ್ಷದ ಅಂಗನವಾಡಿ ಕಾರ್ಯಕರ್ತೆ ಸಂಜೆ 6 ಕ್ಕೆ ದೇವಾಲಯಕ್ಕೆ ತೆರಳಿದ್ದರು. ಆಕೆ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಅಪಹರಿಸಿ ಗ್ಯಾಂಗ್ ರೇಪ್ ಮಾಡಿ ಆಕೆಯನ್ನು ಅರೆನಗ್ನಾವಸ್ಥೆಯಲ್ಲಿ ಎಸೆದು ಹೋಗಿದ್ದರು.
ರಾತ್ರಿ 11: 30 ರ ವೇಳೆಗೆ ತೀವ್ರ ರಕ್ತಸ್ರಾವ ಹಾಗೂ ಅರೆನಗ್ನಾವಸ್ಥೆಯಲ್ಲಿದ್ದ ಆಕೆ ಸಾವನ್ನಪ್ಪಿದ್ದಾರೆ. 5 ಮಕ್ಕಳ ತಾಯಿಯಾಗಿದ್ದ ಆಕೆ ಕುಟುಂಬದಲ್ಲಿ ದುಡಿಯುತ್ತಿದ್ದ ಏಕೈಕ ವ್ಯಕ್ತಿಯಾಗಿದ್ದರು.
ಆಯೋಗದ ಸದಸ್ಯೆ ಚಂದ್ರಕುಮಾರಿ ದೇವಿ ಅವರ ಹೇಳಿಕೆಯಿಂದ ರಾಷ್ಟ್ರೀಯ ಮಹಿಳಾ ಆಯೋಗದ ಮುಖ್ಯಸ್ಥರಾದ ರೇಖಾ ಶರ್ಮಾ ಅವರು ಅಂತರ ಕಾಯ್ದುಕೊಂಡಿದ್ದು, ಎನ್ ಡಬ್ಲ್ಯುಸಿ ಸದಸ್ಯರು ಈ ರೀತಿ ಏಕೆ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ ಎಂದಷ್ಟೇ ಟ್ವೀಟ್ ಮಾಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications