ಉತ್ತರ ಪ್ರದೇಶದಲ್ಲಿ ಬಿಜೆಪಿಯವರಿಗೆ 'ನೊ ಎಂಟ್ರಿ' ಬೋರ್ಡ್ ನ ಸ್ವಾಗತ!
Recommended Video

ಲಕ್ನೋ, ಅಕ್ಟೋಬರ್ 11: ಉತ್ತರ ಪ್ರದೇಶದಲ್ಲಿ ಹಲವೆಡೆ ಬಿಜೆಪಿ ಮುಖಂಡರನ್ನು 'ನೋ ಎಂಟ್ರಿ' ಬೋರ್ಡ್ ಸ್ವಾಗತಿಸುತ್ತಿರುವುದು, ಪಕ್ಷದ ಮುಖಂಡರಿಗೆ ದೊಡ್ಡ ತಲೆನೋವೆನ್ನಿಸಿದೆ!
ಹಲವು ಕಾರಣಗಳಿಂದ ಬಿಜೆಪಿ ಮುಖಂಡರಿಗೆ ಊರೊಳಗೆ ಬರಲು ಜನರು ಬಿಡುತ್ತಿಲ್ಲ. ಬಿಜೆಪಿ ಮುಖಂಡರು ಯಾವುದಾದರೂ ಕಾರ್ಯಕ್ರಮಕ್ಕೆ ತೆರಳಿದರೆ ಅಲ್ಲಿ 'ನೋ ಎಂಟ್ರಿ' ಬೋರ್ಡ್ ಹಾಕಿ ಅವರನ್ನು ವಾಪಸ್ ಕಳಿಸಲಾಗುತ್ತಿದೆ.
ಬಿಜೆಪಿಯನ್ನು ತಳಮಟ್ಟದಿಂದ ಮೇಲೆತ್ತುವ ಉದ್ದೇಶ ಹೊತ್ತು ಊರಿಂದೂರಿಗೆ ತೆರಳುತ್ತಿರುವ ಬಿಜೆಪಿ ಮುಖಂಡರಿಗೆ ಇದರಿಂದ ಇರಿಸುಮುರಿಸುಂಟಾಗಿದೆ.

ಬಿಜೆಪಿ ರಾಷ್ಟ್ರೀಯ ನಾಯಕರು ಮತ್ತು ಪಕ್ಷದ ವರಿಷ್ಟರು, ಬಿಜೆಪಿ ಶಾಸಕ, ಸಂಸದರಿಗೆ ತಮ್ಮ ತಮ್ಮ ಕ್ಷೇತ್ರಗಳಲ್ಲೇ ಇದ್ದು, ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯನ್ನು ಮನಸ್ಸಿನಲ್ಲಿಟ್ಟುಕೊಂಡು ಕೆಲಸ ಮಾಡುವಂತೆ ಹೇಳಿದ್ದಾರೆ. 80 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿ ನಾಯಕರ ಮೇಲೆ ಮತದಾರರು ಮುನಿಸಿಕೊಂಡಿರುವುದು ಬಿಜೆಪಿಗೆ ದೊಡ್ಡ ತಲೆನೋವಾಗಿದೆ.
ಹಿಂದುಳಿದ ವರ್ಗ ಮತ್ತು ಮುಸ್ಲಿಂ ಮತೀಯರು ಬಿಜೆಪಿ ಮೇಲೆ ಮುನಿಸಿಕೊಂಡಿದ್ದು, ಅವರ ಕೋಪ ತಣ್ಣಗಾಗುವವರೆಗೂ ನಾವು ನಮ್ಮ ಕ್ಷೇತ್ರಗಳಿಗೆ ತೆರಳದಿರುವುದೇ ಲೇಸು ಎಂದು ಬಿಜೆಪಿ ಶಾಸಕರೊಬ್ಬರು ಹೇಳಿದ್ದಾರೆ.












Click it and Unblock the Notifications