ಉತ್ತರ ಪ್ರದೇಶ ಸಚಿವೆ ವಿರುದ್ಧ ಜಾಮೀನು ರಹಿತ ವಾರೆಂಟ್
ಲಕ್ನೋ, ಅಕ್ಟೋಬರ್ 10: ಉತ್ತರ ಪ್ರದೇಶದ ಪ್ರವಾಸೋದ್ಯಮ ಖಾತೆ ಸಚಿವೆ ರೀಟಾ ಬಹುಗುಣ ಜೋಶಿ ವಿರುದ್ಧ ಅಲಹಾಬಾದ್ನ ವಿಶೇಷ ನ್ಯಾಯಾಲಯವೊಂದು ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದೆ. ಅಕ್ಟೋಬರ್ 31ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಸೂಚಿಸಿದೆ.
2010ರಲ್ಲಿ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣ ಈಗ ಸಚಿವೆ ರೀಟಾರನ್ನು ಕಾಡುತ್ತಿದೆ. ವಿಧಾನ ಸಭೆಯೊಳಗೆ ನಿಯಮಬಾಹಿರ ಪ್ರವೇಶ ಪಡೆದಿದ್ದರು. ಸಂಸದರು, ಶಾಸಕರ ವಿರುದ್ಧದ ಕ್ರಿಮಿನಲ್ ಕೇಸ್ ಗಳ ವಿಚಾರಣೆಗಳನ್ನು ತ್ವರಿತಗತಿಯಲ್ಲಿ ಕೈಗೆತ್ತಿಕೊಳ್ಳಲು ವಿಶೇಷ ನ್ಯಾಯಾಲಯವು ಮುಂದಾಗಿದೆ.
ಕೇಂದ್ರ ಸರ್ಕಾರವು 11 ರಾಜ್ಯಗಳಲ್ಲಿ 12 ವಿಶೇಷ ನ್ಯಾಯಲಯಗಳನ್ನು ಸ್ಥಾಪಿಸಿದ್ದು, ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಸಲಾಗುತ್ತದೆ.

ಉತ್ತರಪ್ರದೇಶ ಕಾಂಗ್ರೆಸ್ ನ ಮುಖ್ಯಸ್ಥೆಯಾಗಿದ್ದ ರೀಟಾ ಅವರು ಸಿ ಆರ್ ಪಿಸಿ 144 ಸೆಕ್ಷನ್ ಉಲ್ಲಂಘಿಸಿ, ಸಾರ್ವಜನಿಕ ಸಭೆ ನಡೆಸಿದ್ದಲ್ಲದೆ, ಪ್ರಚೋದನಕಾರಿ ಭಾಷಣದ ಮೂಲಕ ಕಾರ್ಯಕರ್ತರು ರೊಚ್ಚಿಗೆದ್ದು, ವಿಧಾನಸಭೆಗೆ ಮುತ್ತಿಗೆ ಹಾಕಲು ಪ್ರೇರಿಸಿದರು ಎಂಬ ಆರೋಪವಿದೆ.
ಜೋಶಿ ಅವರು ನಂತರ ಕಾಂಗ್ರೆಸ್ ತೊರೆದು, ಬಿಜೆಪಿ ಸೇರಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಕೋರ್ಟಿನಿಂದ ಸಮನ್ಸ್ ಜಾರಿಯಾಗಿದ್ದರೂ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ, ಜಡ್ಜ್ ಪವನ್ ತಿವಾರಿ ಅವರು ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications