'ಇದು ಸಹಜ ಅಪಘಾತವಲ್ಲ ನಮ್ಮನ್ನು ಮುಗಿಸಲು ವ್ಯವಸ್ಥಿತ ಪಿತೂರಿ'
ನವದೆಹಲಿ, ಜುಲೈ 29: 'ಇದು ಸಹಜವಾಗಿ ಸಂಭವಿಸಿದ ಅಪಘಾತವಲ್ಲ, ನಮ್ಮನ್ನು ಮುಗಿಸಲು ಮಾಡಿದ್ದ ವ್ಯವಸ್ಥಿತ ಪಿತೂರಿ' ಎಂದು ಉನ್ನಾವೋ ಸಂತ್ರಸ್ತೆಯ ತಾಯಿ ಆರೋಪಿಸಿದ್ದಾರೆ.
ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಗಾರ್ ಪ್ರಮುಖ ಆರೋಪಿಯಾಗಿರುವ ಉನ್ನವೋ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಭಾರೀ ತಿರುವು ಪಡೆದುಕೊಂಡಿದ್ದು ಇಂದು ಸಂಭವಿಸಿದ ಭೀಕರ ಅಪಘಾತ ಅತ್ಯಾಚಾರ ಸಂತ್ರಸ್ತೆ ಗಂಭೀರ ಗಾಯಗೊಂಡಿದ್ದು, ಆಕೆಯ ವಕೀಲೆ ಮತ್ತು ಪ್ರಮುಖ ಸಾಕ್ಷಿ ಮೃತಪಟ್ಟಿದ್ದಾರೆ.
ಉತ್ತರ ಪ್ರದೇಶದ ಉನ್ನಾವೋ ಮತ್ತು ಲಾಲ್ ಗಂಜ್ ವಿಭಾಗದಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿ 232ರಲ್ಲಿ ಅಪಘಾತ ಸಂಭವಿಸಿದ್ದು ಅತ್ಯಾಚಾರ ಸಂತ್ರಸ್ತೆ, ಆಕೆಯ ವಕೀಲೆ ಮತ್ತು ಪ್ರಮುಖ ಸಾಕ್ಷಿ ತೆರಳುತ್ತಿದ್ದ ಕಾರಿಗೆ ಟ್ರಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿತ್ತು.

ಸಂತ್ರಸ್ತೆ ಮತ್ತು ಆಕೆಯ ತಾಯಿಗೆ ಗಂಭೀರ ಗಾಯವಾಗಿದ್ದು ತಾಯಿಯನ್ನು ಲಖನೌದ ಟ್ರಾಮ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು ಸಂತ್ರಸ್ತೆ ಆಸ್ಪತ್ರೆಗೆ ದಾಖಲಾಗಿಲ್ಲ ಎಂದು ತಿಳಿಸಿದ್ದಾರೆ.
ಉನ್ನಾವೋ ಸಂತ್ರಸ್ತೆ ತಾಯಿ ಮಾಧ್ಯಮದವರಿಗೆ ಮಾಹಿತಿ ನೀಡಿದ್ದು, ಇದು ಸಹಜ ಅಪಘಾತವಲ್ಲ, ನಮ್ಮನ್ನು ಕೊಲ್ಲುವುದೇ ಉದ್ದೇಶವಾಗಿತ್ತು.ಅದೃಷ್ಟ ವಶಾತ್ ನಾವು ಬದುಕುಳಿದಿದ್ದೇವೆ ಎಂದು ಆರೋಪಿಸಿದ್ದಾರೆ.
ಕಾರಿಗೆ ಗುದ್ದಿದ್ದ ಟ್ರಕ್ನ ನಂಬರ್ ಪ್ಲೇಟ್ಗೆ ಕಪ್ಪು ಮಸಿ ಬಳಿಯಲಾಗಿತ್ತು.ಆರೋಪಿಯೇ ಜೈಲಿನಲ್ಲಿದ್ದುಕೊಂಡೇ ಈ ಕೆಲಸ ಮಾಡಿಸಿದ್ದಾನೆ ಎಂದಿದ್ದಾರೆ. ಟ್ರಕ್ ಡ್ರೈವರ್ ಹಾಗೂ ಮಾಲೀಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಳೆದ ವರ್ಷದಿಂದ ಬಿಜೆಪಿ ಶಾಸಕ ಕುಲ್ ದೀಪ್ ಸೆಂಗರ್ ಮತ್ತು ಸೋದರ ಅತುಲ್ ಸಿಂಗ್ ಜೈಲಿನಲ್ಲೇ ಇದ್ದಾರೆ. ಸಂತ್ರಸ್ತೆಯ ಅತ್ತೆಯ ಗಂಡ ರಾಯ್ ಬರೇಲಿ ಜೈಲಿನಲ್ಲಿದ್ದು ಅವರನ್ನು ಭೇಟಿಯಾಗಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ.
ಅಪಘಾತದ ಬಳಿಕ ಸಂತ್ರಸ್ತೆಯ ಅತ್ತೆ ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲೇ ಮೃತಪಟ್ಟರೆ, ತಾಯಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಇನ್ನು ಕಾರನ್ನು ಚಲಾಯಿಸುತ್ತಿದ್ದ ನ್ಯಾಯವಾದಿ ಮಹೇಂದ್ರ ಸಿಂಗ್ ಮತ್ತು ಸಂತ್ರಸ್ತೆ ಗಂಭೀರವಾಗಿ ಗಾಯಗೊಂಡು ಲಕ್ನೋ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications