ಮೋಸ್ಟ್ ವಾಂಟೆಡ್ ಕ್ರಿಮಿನಲ್ ವಿಕಾಸ್ ದುಬೆಯ ರಾಜಕೀಯ ಗುರುವಿನ ಹೆಸರು ಬಹಿರಂಗ
ಲಕ್ನೋ, ಜುಲೈ 6: ಎಂಟು ಪೊಲೀಸರ ಹತ್ಯೆ ನಡೆಸಿ ತಲೆ ಮರೆಸಿಕೊಂಡಿರುವ ಮೋಸ್ಟ್ ವಾಂಟೆಡ್ ಕ್ರಿಮಿನಲ್ ವಿಕಾಸ್ ದುಬೆಯನ್ನು ಬಂಧಿಸಲು 25 ತಂಡಗಳನ್ನು ರಚನೆ ಮಾಡಲಾಗಿದೆ. ಕಾನ್ಪುರದ ಐಜಿ ಮೋಹಿತ್ ಅಗರ್ವಾಲ್ ಸೋಮವಾರ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
Recommended Video
ಉತ್ತರ ಪ್ರದೇಶದ ಪೊಲೀಸ್ ಇಲಾಖೆ, ವಿಜಯ್ ದುಬೆ ಬಗ್ಗೆ ಸುಳಿವು ಕೊಟ್ಟವರಿಗೆ 2.5 ಲಕ್ಷ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ. ಈ ನಡುವೆ, ವಿಕಾಸ್ ದುಬೆಯ ಸಂದರ್ಶನದ ವಿಡಿಯೋವೊಂದು ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಈ ಸಂದರ್ಶನ ಯಾವತ್ತು ನಡೆದದ್ದು ಎನ್ನುವುದರ ಬಗ್ಗೆ ಮಾಹಿತಿಯಿಲ್ಲದಿದ್ದರೂ, ತನ್ನ ರಾಜಕೀಯ ಗುರು ಯಾರು ಎನ್ನುವುದನ್ನು ವಿಕಾಸ್ ದುಬೆ ಸಂದರ್ಶನದಲ್ಲಿ ಬಾಯಿಬಿಟ್ಟಿದ್ದಾನೆ.

"ತಾನು ರಾಜಕೀಯಕ್ಕೆ ಪ್ರವೇಶಿಸಲು, ಉತ್ತರ ಪ್ರದೇಶದ ಮಾಜಿ ಸ್ಪೀಕರ್, ಸಮಾಜವಾದಿ ಪಕ್ಷದ ಮುಖಂಡ ಹರಿಕೃಷ್ಣ ಶ್ರೀವಾಸ್ತವ ಕಾರಣ. ಇವರೇ ನನ್ನ ರಾಜಕೀಯ ಗುರು"ಎಂದು ವಿಕಾಸ್ ದುಬೆ ಹೇಳಿದ್ದಾನೆ. ದಿ.ಹರಿಕೃಷ್ಣ ಶ್ರೀವಾಸ್ತವ, ಮುಲಾಯಂ ಸಿಂಗ್ ಸರಕಾರದ ಅವಧಿಯಲ್ಲಿ ಸ್ಪೀಕರ್ ಆಗಿದ್ದರು ಮತ್ತು ಹಲವು ಖಾತೆಯನ್ನೂ ನಿಭಾಯಿಸಿದ್ದವರು.
"I am politician Not a criminal" Statement of "Terrorist" #VikashDubey year- 2006.
— Brajesh Misra (@brajeshlive) July 5, 2020
Where is this Terrorist ? Demolition of his house is not solution. It's frustration. Catch him if you can @Uppolice @kanpurnagarpol pic.twitter.com/1pMGfb8i4S
"ನನ್ನನ್ನು ರಾಜಕೀಯಕ್ಕೆ ಕರೆತಂದವರು ಹರಿಕೃಷ್ಣ ಶ್ರೀವಾಸ್ತವ. ನನಗೆ ಅಪರಾಧಿಗಳು ಮತ್ತು ಅಪರಾಧದ ಜಗತ್ತಿನ ನಡುವೆ ನೇರ ಸಂಬಂಧವಿಲ್ಲ. ರಾಜಕೀಯದಲ್ಲಿ ನನ್ನ ಬೆಳವಣಿಗೆ ಕಂಡು, ಹೊಟ್ಟೆಕಿಚ್ಚು ಪಟ್ಟವರೇ ಹೆಚ್ಚು. ಹಾಗಾಗಿಯೇ ನನ್ನ ವಿರುದ್ದ ಪ್ರಕರಣಗಳು ದಾಖಲಾಗಿವೆ"ಎಂದು ವಿಕಾಸ್ ದುಬೆ ಸಂದರ್ಶನದಲ್ಲಿ ಹೇಳಿದ್ದಾನೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications