ಇನ್ಮುಂದೆ ಭಕ್ತ ಮನೆ ಬಾಗಿಲಿಗೇ ಬರಲಿದೆ ಕಾಶಿ ವಿಶ್ವನಾಥನ ಪ್ರಸಾದ
ವಾರಾಣಸಿ, ಜುಲೈ 6: ಕಾಶಿ ವಿಶ್ವನಾಥನ ದರ್ಶನ ಭಾಗ್ಯವಿಲ್ಲವೆಂದು ಯಾರೂ ಕೂಡ ಕೊರಗುವುದು ಬೇಡ, ಪ್ರಸಾದ ಭಕ್ತರ ಮನೆ ಬಾಗಿಲಿಗೆ ಬರಲಿದೆ.
Recommended Video
ಅಂಚೆ ಇಲಾಖೆ ಮತ್ತು ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್ ಶ್ರಾವಣ ಮಾಸದಲ್ಲಿ ಪ್ರಸಾದವನ್ನು ತಲುಪಿಸಲು ಒಪ್ಪಂದ ಮಾಡಿಕೊಂಡಿದೆ. 'ಪ್ರಸಾದವನ್ನು ಸ್ಪೀಡ್ ಪೋಸ್ಟ್ ಮೂಲಕ ತಲುಪಿಸಲಾಗುವುದು ಎಂದು ಲಕ್ನೋ ವೃತ್ತದ ಅಂಚೆ ವಿಭಾಗದ ನಿರ್ದೇಶಕ ಕೃಷ್ಣ ಕುಮಾರ್ ಯಾದವ್ ತಿಳಿಸಿದ್ದಾರೆ.
ಪವಿತ್ರ ಶ್ರಾವಣ ಮಾಸದಲ್ಲಿ ಲಕ್ಷಾಂತರ ಶಿವಭಕ್ತರು ಕಾಶಿಯಾತ್ರೆ ಮಾಡಿ ವಿಶ್ವನಾಥನ ದರ್ಶನ ಪಡೆಯಲು ಬಯಸುತ್ತಾರೆ. ಆದರೆ ಈ ಬಾರಿ ದೇಶಾದ್ಯಂತ ಕೊರೊನಾ ಹಾವಳಿ ಇರುವ ಕಾರಣ ಅಂತಹಾ ಯಾತ್ರೆಗೆ ಅವಕಾಶವಿರುವುದಿಲ್ಲ.

ವಿಶ್ವನಾಥನ ಪ್ರಸಾದಕ್ಕಾಗಿ ಯಾವುದೇ ಅಂಚೆ ಕಚೇರಿಯಿಂದ 251 ರೂ.ಗಳ ಎಲೆಕ್ಟ್ರಾನಿಕ್ ಮನಿ ಆರ್ಡರ್ ಅನ್ನು ವಾರಣಾಸಿ ಪೂರ್ವ ವಿಭಾಗದ ಸೂಪರಿಂಟೆಂಡೆಂಟ್ ಅಂಚೆ ಕಚೇರಿಗಳಿಗೆ ಕಳುಹಿಸಬೇಕು ಮತ್ತು ಮೂರನೇ ದಿನ ಕಾಶಿ ವಿಶ್ವನಾಥ ದೇವಸ್ಥಾನದಿಂದ 'ಪ್ರಸಾದ' ವನ್ನು ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಲಾಗುತ್ತದೆ.
ಈ ಪಾರ್ಸೆಲ್ನಲ್ಲಿ ಕಾಶಿ ವಿಶ್ವನಾಥ ದೇವಾಲಯದ ಜ್ಯೋತಿರ್ಲಿಂಗ, ಮಹಾ ಮೃತುಂಜಯ ಮಹಾ ಯಂತ್ರ, ಶಿವ ಚಾಲೀಸಾ, ರುದ್ರಾಕ್ಷಿ, ಡ್ರೈ ಫ್ರೂಟ್ಸ್, ವಿಭೂತಿ ಮತ್ತು ಒಂದು ಪ್ಯಾಕೆಟ್ ಸಿಹಿತಿಂಡಿ ಹಾಗೂ ದೇವರ ಫೋಟೋಗಳಿರಲಿದೆ ಎಂದು ಯಾದವ್ ಹೇಳಿದ್ದಾರೆ.
ಯಾರೂ ನಿರಾಶರಾಗಬೇಕಾಗಿಲ್ಲ. ಭಕ್ತರಿಗೆ ವಾರಣಾಸಿಯ ಪ್ರಸಿದ್ಧ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಲು ಸಾಧ್ಯವಾಗದಿದ್ದರೂ, ಸೋಮವಾರದಿಂದ ಪ್ರಾರಂಭವಾಗುವ ಹಿಂದೂ ಕ್ಯಾಲೆಂಡರ್ ನ ಶ್ರಾವಣ ಮಾಸದಲ್ಲಿ ವಿಶ್ವನಾಥನ ಪ್ರಸಾದವನ್ನು ನಿಮ್ಮ ನಿಮ್ಮ ಮನೆಗೇ ತರಿಸಿಕೊಳ್ಳಬಹುದು. ಇದಕ್ಕಾಗಿ ವಿಶ್ವನಾಥ ದೇವಾಲಯ ಹಾಗೂ ಅಂಚೆ ಇಲಾಖೆ ಒಪ್ಪಂದ ಮಾಡಿಕೊಂಡಿವೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications