ಇನ್ಮುಂದೆ ಭಕ್ತ ಮನೆ ಬಾಗಿಲಿಗೇ ಬರಲಿದೆ ಕಾಶಿ ವಿಶ್ವನಾಥನ ಪ್ರಸಾದ
ವಾರಾಣಸಿ, ಜುಲೈ 6: ಕಾಶಿ ವಿಶ್ವನಾಥನ ದರ್ಶನ ಭಾಗ್ಯವಿಲ್ಲವೆಂದು ಯಾರೂ ಕೂಡ ಕೊರಗುವುದು ಬೇಡ, ಪ್ರಸಾದ ಭಕ್ತರ ಮನೆ ಬಾಗಿಲಿಗೆ ಬರಲಿದೆ.
Recommended Video
ಅಂಚೆ ಇಲಾಖೆ ಮತ್ತು ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್ ಶ್ರಾವಣ ಮಾಸದಲ್ಲಿ ಪ್ರಸಾದವನ್ನು ತಲುಪಿಸಲು ಒಪ್ಪಂದ ಮಾಡಿಕೊಂಡಿದೆ. 'ಪ್ರಸಾದವನ್ನು ಸ್ಪೀಡ್ ಪೋಸ್ಟ್ ಮೂಲಕ ತಲುಪಿಸಲಾಗುವುದು ಎಂದು ಲಕ್ನೋ ವೃತ್ತದ ಅಂಚೆ ವಿಭಾಗದ ನಿರ್ದೇಶಕ ಕೃಷ್ಣ ಕುಮಾರ್ ಯಾದವ್ ತಿಳಿಸಿದ್ದಾರೆ.
ಪವಿತ್ರ ಶ್ರಾವಣ ಮಾಸದಲ್ಲಿ ಲಕ್ಷಾಂತರ ಶಿವಭಕ್ತರು ಕಾಶಿಯಾತ್ರೆ ಮಾಡಿ ವಿಶ್ವನಾಥನ ದರ್ಶನ ಪಡೆಯಲು ಬಯಸುತ್ತಾರೆ. ಆದರೆ ಈ ಬಾರಿ ದೇಶಾದ್ಯಂತ ಕೊರೊನಾ ಹಾವಳಿ ಇರುವ ಕಾರಣ ಅಂತಹಾ ಯಾತ್ರೆಗೆ ಅವಕಾಶವಿರುವುದಿಲ್ಲ.

ವಿಶ್ವನಾಥನ ಪ್ರಸಾದಕ್ಕಾಗಿ ಯಾವುದೇ ಅಂಚೆ ಕಚೇರಿಯಿಂದ 251 ರೂ.ಗಳ ಎಲೆಕ್ಟ್ರಾನಿಕ್ ಮನಿ ಆರ್ಡರ್ ಅನ್ನು ವಾರಣಾಸಿ ಪೂರ್ವ ವಿಭಾಗದ ಸೂಪರಿಂಟೆಂಡೆಂಟ್ ಅಂಚೆ ಕಚೇರಿಗಳಿಗೆ ಕಳುಹಿಸಬೇಕು ಮತ್ತು ಮೂರನೇ ದಿನ ಕಾಶಿ ವಿಶ್ವನಾಥ ದೇವಸ್ಥಾನದಿಂದ 'ಪ್ರಸಾದ' ವನ್ನು ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಲಾಗುತ್ತದೆ.
ಈ ಪಾರ್ಸೆಲ್ನಲ್ಲಿ ಕಾಶಿ ವಿಶ್ವನಾಥ ದೇವಾಲಯದ ಜ್ಯೋತಿರ್ಲಿಂಗ, ಮಹಾ ಮೃತುಂಜಯ ಮಹಾ ಯಂತ್ರ, ಶಿವ ಚಾಲೀಸಾ, ರುದ್ರಾಕ್ಷಿ, ಡ್ರೈ ಫ್ರೂಟ್ಸ್, ವಿಭೂತಿ ಮತ್ತು ಒಂದು ಪ್ಯಾಕೆಟ್ ಸಿಹಿತಿಂಡಿ ಹಾಗೂ ದೇವರ ಫೋಟೋಗಳಿರಲಿದೆ ಎಂದು ಯಾದವ್ ಹೇಳಿದ್ದಾರೆ.
ಯಾರೂ ನಿರಾಶರಾಗಬೇಕಾಗಿಲ್ಲ. ಭಕ್ತರಿಗೆ ವಾರಣಾಸಿಯ ಪ್ರಸಿದ್ಧ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಲು ಸಾಧ್ಯವಾಗದಿದ್ದರೂ, ಸೋಮವಾರದಿಂದ ಪ್ರಾರಂಭವಾಗುವ ಹಿಂದೂ ಕ್ಯಾಲೆಂಡರ್ ನ ಶ್ರಾವಣ ಮಾಸದಲ್ಲಿ ವಿಶ್ವನಾಥನ ಪ್ರಸಾದವನ್ನು ನಿಮ್ಮ ನಿಮ್ಮ ಮನೆಗೇ ತರಿಸಿಕೊಳ್ಳಬಹುದು. ಇದಕ್ಕಾಗಿ ವಿಶ್ವನಾಥ ದೇವಾಲಯ ಹಾಗೂ ಅಂಚೆ ಇಲಾಖೆ ಒಪ್ಪಂದ ಮಾಡಿಕೊಂಡಿವೆ.
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications