"ಕಾಶ್ಮೀರದ ಚೆಂದದ ಹುಡ್ಗಿ ಮದ್ವೆಯಾಗಿ": ಬಿಜೆಪಿ ಶಾಸಕನ ಕರೆ
ಲಕ್ನೋ, ಆಗಸ್ಟ್ 07: ಉತ್ತರಪ್ರದೇಶದ ಮುಜಾಫರ್ ನಗರ ಜಿಲ್ಲೆಯ ಬಿಜೆಪಿ ಶಾಸಕ ವಿಕ್ರಮ್ ಸೈನಿ ಅವರು ಪಕ್ಷದ ಕಾರ್ಯಕರ್ತರಿಗೆ ಕಾರ್ಯಕ್ರಮವೊಂದರಲ್ಲಿ ನೀಡಿರುವ ಕರೆಗೆ ಆಕ್ಷೇಪ ಕೇಳಿ ಬಂದಿದೆ. ಕಾಯಕರ್ತರನ್ನು ಉದ್ದೇಶಿಸಿ, 'ನೀವೀಗ ಕಾಶ್ಮೀರದ ಚೆಂದದ ಹುಡುಗಿಯರನ್ನು ವರಿಸಬಹುದು' ಎಂದಿದ್ದಾರೆ.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ, ಆಸ್ತಿ ಹಕ್ಕು ನೀಡುವ ಸಂವಿಧಾನದ 370ನೇ ವಿಧಿಯನ್ನು ಕೇಂದ್ರ ಸರ್ಕಾರ ರದ್ದುಪಡಿಸಿರುವುದನ್ನು ಹೊಗಳುವ ಭರದಲ್ಲಿ ಶಾಸಕ ವಿಕ್ರಮ್ ಈ ರೀತಿ ಹೇಳಿಕೆ ನೀಡಿದ್ದಾರೆ. ವಿಕ್ರಮ್ ಭಾಷಣದ ತುಣುಕು ಇರುವ ವಿಡಿಯೋ ಸದ್ಯ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದೆ.
ವಿಡಿಯೋದಲ್ಲಿ ಶಾಸಕ ಮಾತನಾಡುತ್ತಾ, "ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಬಿಜೆಪಿ ಕಾರ್ಯಕರ್ತರು ಕಾಶ್ಮೀರದಲ್ಲಿ ಜಮೀನನ್ನು ಖರೀದಿಸಬಹುದು, ಅಲ್ಲಿನ ಸುಂದರ ಮಹಿಳೆಯರನ್ನೂ ಮದುವೆ ಆಗಬಹುದಾಗಿದೆ" ಎಂದಿದ್ದಾರೆ.

ಕಾಶ್ಮೀರ ಪುನರ್ ರಚನೆ ವಿಧೇಯಕಕ್ಕೆ ಅಂಗೀಕಾರ ಸಿಕ್ಕ ಸಂಭ್ರಮಾಚರಣೆ ಸಂದರ್ಭದಲ್ಲಿ ಶಾಸಕರು ಮಾತನಾಡಿ, " ಬಿಜೆಪಿ ಕಾರ್ಯಕರ್ತರು ಈಗ ತುಂಬಾ ಉತ್ಸಾಹದಿದ್ದಾರೆ. ಅವಿವಾಹಿತರು ಕಾಶ್ಮೀರ ಯುವತಿಯರನ್ನು ವರಿಸಬಹುದು. ಈಗ ಯಾವುದೇ ಸಮಸ್ಯೆ ಇಲ್ಲ. ಈ ಮುನ್ನ ಅಲ್ಲಿ ಮಹಿಳೆಯರ ಮೇಲೆ ಸಾಕಷ್ಟು ದೌರ್ಜನ್ಯ ಪ್ರಕರಣಗಳು ಕಂಡು ಬಂದಿತ್ತು, ಕಾಶ್ಮೀರ ಮಹಿಳೆ ಉತ್ತರಪ್ರದೇಶ ಮೂಲದ ವ್ಯಕ್ತಿಯನ್ನು ಮದುವೆಯಾದರೆ, ಆಕೆಯ ಪೌರತ್ವವನ್ನು ರದ್ದು ಮಾಡಲಾಗುತ್ತಿತ್ತು, ಆಸ್ತಿ ಹಕ್ಕು ಸಿಗುತ್ತಿರಲಿಲ್ಲ" ಎಂದು ಹೇಳಿದರು
Muzaffarnagar BJP MLA Vikram Saini on abrogation of Article 370.
— Piyush Rai (@Benarasiyaa) August 6, 2019
"Muslim karyakartas sitting here should be celebrating. Marry "gori ladki" from Kashmir now" pic.twitter.com/tRhZXy8IZq
"ಕಾಶ್ಮೀರದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ತೆಗೆದುಕೊಂಡ ಈ ಕ್ರಮಕ್ಕೆ ಮುಸ್ಲಿಂ ಕಾರ್ಯಕರ್ತರು ಖಂಡಿತವಾಗಿ ಸಂಭ್ರಮಿಸಬೇಕು. ಹಿಂದು ಅಥವಾ ಮುಸ್ಲಿಮರು ಎಲ್ಲರೂ ಸಂಭ್ರಮಾಚರಣೆ ಮಾಡಬೇಕು" ಎಂದು ಹೇಳಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications