ಓವೈಸಿ ಕಾರಿನ ಮೇಲೆ ದಾಳಿ: ಕಾರಣ ಬಹಿರಂಗಪಡಿಸಿದ ಆರೋಪಿ
ಮೀರತ್ ಫೆಬ್ರವರಿ 03: ಚುನಾವಣಾ ಪ್ರಚಾರನಿರತ ಅಸಾದುದ್ದೀನ್ ಓವೈಸಿ ಕಾರ್ ಮೇಲಿನ ದಾಳಿಗೆ ಸಂಬಂಧಿಸಿದಂತೆ, ದಾಳಿಕೋರರಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಗುರುವಾರದಂದು ನಡೆದ ಘಟನೆಗೆ ಸಂಬಂಧಿಸಿದಂತೆ ಮತ್ತೋರ್ವನನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು ವಿಚಾರಣೆ ನಡೆಯುತ್ತಿದೆ ಎಂದು ಉತ್ತರ ಪ್ರದೇಶ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಹಿಂದೂ ವಿರೋಧಿ ಹೇಳಿಕೆಗಳಿಂದ ಮನನೊಂದ ಅಸಾದುದ್ದೀನ್ ಓವೈಸಿ ಮೇಲೆ ಹಲ್ಲೆ ನಡೆಸಿರುವುದಾಗಿ ವಿಚಾರಣೆ ವೇಳೆ ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ.
ಮೀರತ್ನಲ್ಲಿ ಚುನಾವಣಾ ಕಾರ್ಯಕ್ರಮದ ನಂತರ ದೆಹಲಿಗೆ ಹೋಗುತ್ತಿದ್ದಾಗ ಅವರ ಕಾರಿನ ಮೇಲೆ ಗುಂಡು ಹಾರಿಸಲಾಗಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ತಿಳಿಸಿದ್ದರು. ಓವೈಸಿ ಪ್ರಕಾರ, ಒಟ್ಟು 3 ರಿಂದ 4 ಜನರಿದ್ದರು. ಅದರಲ್ಲಿ 2 ಜನರು ಗುಂಡಿನ ದಾಳಿ ನಡೆಸಿದರು. ವಾಹನದ ಟೈರ್ ಪಂಕ್ಚರ್ ಆದ ಕಾರಣ ಓವೈಸಿ ಬೇರೆ ವಾಹನದಲ್ಲಿ ಹೋಗಬೇಕಾಯಿತು. ಇದಲ್ಲದೇ, ಯುಪಿಯಲ್ಲಿ ತಮ್ಮ ಬೆಂಗಾವಲು ಪಡೆಯ ಮೇಲೆ ನಡೆದ ದಾಳಿಯನ್ನು 'ಯೋಜಿತ' ಎಂದು ವಿವರಿಸಿರುವ ಓವೈಸಿ ತನಿಖೆಗೆ ಒತ್ತಾಯಿಸಿದರು.
ನಿನ್ನೆ ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರಕ್ಕೆಂದು ತೆರಳಿದಾಗ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಾರಿನ ಮೇಲೆ ಗಂಡಿನ ದಾಳಿ ನಡೆದಿದೆ. ಛಿಜರ್ಸಿ ಟೋಲ್ ಗೇಟ್ ಬಳಿ ತಮ್ಮ ಕಾರಿನ ಮೇಲೆ ಕೆಲ ಹೊತ್ತಿನ ಮುಂಚೆ ಗುಂಡಿನ ದಾಳಿ ನಡೆಸಲಾಗಿದೆ. ನಾಲ್ಕು ಸುತ್ತು ಗುಂಡು ಹಾರಿಸಲಾಗಿದೆ. ಮೂರ್ನಾಲ್ಕು ಮಂದಿ ಗುಂಡು ಹಾರಿಸಿ, ಪರಾರಿಯಾದರು. ನನ್ನ ಕಾರು ಪಂಕ್ಚರ್ ಆಯಿತು. ಆದರೆ, ಮತ್ತೊಂದು ಕಾರಿಗೆ ಸ್ಥಳಾಂತರವಾಗಿ ಅಲ್ಲಿಂದ ನಿರ್ಗಮಿಸಿದ್ದೇನೆ. ನಾವೆಲ್ಲರೂ ಸುರಕ್ಷಿತರಾಗಿದ್ದೇವೆ ಎಂದು ಅಸಾದುದ್ದೀನ್ ಓವೈಸಿ ಟ್ವೀಟ್ ಮಾಡಿದ್ದರು.

ಹಪೂರ್ ಜಿಲ್ಲೆಯಿಂದ ದೆಹಲಿಗೆ ಹಿಂತಿರುಗುತ್ತಿದ್ದಾಗ ತಮ್ಮ ಕಾರಿನ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿರುವುದಾಗಿ ಓವೈಸಿ ಆರೋಪಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 24ರಲ್ಲಿನ ಹಪೂರ್- ಗಾಜಿಯಾಬಾದ್ ಮಾರ್ಗದ ಛಿಜರ್ಸಿ ಟೋಲ್ ಪ್ಲಾಜಾ ಬಳಿ ಇಂದು ಸಂಜೆ 6 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿರುವುದಾಗಿ ಅವರು ಹೇಳಿದ್ದಾರೆ.
ಉತ್ತರಪ್ರದೇಶದ ಮೀರತ್ನಲ್ಲಿ ಚುನಾವಣಾ ಪ್ರಚಾರ ಮುಗಿಸಿ ದೆಹಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಓವೈಸಿ ವಾಹನದ ಮೇಲೆ 3-4 ಸುತ್ತು ಗುಂಡು ಹಾರಿಸಲಾಗಿದೆ. ಈ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ಬಳಿಕ ಓರ್ವನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಓವೈಸಿ, ಎಲ್ಲರೂ ಸುರಕ್ಷಿತವಾಗಿರುವುದಾಗಿ ಮಾಹಿತಿ ನೀಡಿದ್ದಾರೆ. ಅಲ್ಲದೆ ಗುಂಡು ಹಾರಿಸಿದ ವ್ಯಕ್ತಿ ಆಯುಧಗಳನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿರುವುದಾಗಿ ತಿಳಿಸಿದ್ದಾರೆ. ಓವೈಸಿ, ಪೊಲೀಸರು ಶೂಟರ್ಗಳಲ್ಲಿ ಒಬ್ಬನನ್ನು ಬಂಧಿಸಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
"ನಮ್ಮ ಮೇಲೆ ದಾಳಿ ಮಾಡುವವರು ಪ್ರತಿದಿನ ನಮ್ಮನ್ನು ಹಿಂಬಾಲಿಸುತ್ತಿದ್ದಾರೆ ಎಂದು ಭಾವಿಸುತ್ತೇನೆ. ಪೊಲೀಸರು ಒಬ್ಬನನ್ನು ಬಂಧಿಸಿದ್ದು, ಶಸ್ತಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಸುವಂತೆ ಚುನಾವಣಾ ಆಯೋಗವನ್ನು ಕೋರುತ್ತೇನೆ. ಈ ಬಗ್ಗೆ ಸೂಕ್ತ ತನಿಖೆ ನಡೆಸುವುದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜವಾಬ್ದಾರಿಯಾಗಿದೆ"ಎಂದು ಪ್ರತಿಕ್ರಿಯಿಸಿದ್ದಾರೆ.
ಸಂಸದರು ಮತ್ತೊಂದು ಕಾರಿನಲ್ಲಿ ಸ್ಥಳದಿಂದ ತೆರಳಿದರು. ಫೆಬ್ರವರಿ 10 ರಿಂದ ಪ್ರಾರಂಭವಾಗುವ ಉತ್ತರ ಪ್ರದೇಶ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಎಐಎಂಐಎಂ ನಾಯಕ ಮೀರತ್ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು.

ಭಾರತದ ರಾಜಕಾರಣದ ದಿಕ್ಕನ್ನು ಬದಲಿಸುವ ದೇಶದ ಅತೀದೊಡ್ಡ ರಾಜ್ಯ ಉತ್ತರ ಪ್ರದೇಶಕ್ಕೆ ಏಳು ಹಂತದಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತದ ಮತದಾನ ಫೆಬ್ರವರಿ 10 ರಂದು ನಡೆಯಲಿದೆ. ಫೋಟೋ ಸಮೇತ ಓವೈಸಿ ಟ್ವೀಟ್ ಮಾಡಿದ್ದು, ಫೋಟೋದಲ್ಲಿ ಓವೈಸಿ ಇದ್ದ ಕಾರಿಗೆ ಗುಂಡು ತಾಗಿರುವುದನ್ನು ಹಾಗೂ ಟೈಯರ್ಗಳು ಪಂಕ್ಚರ್ ಆಗಿರುವುದನ್ನು ಕಾಣಬಹುದಾಗಿದೆ.
ಘಟನೆ ನಡೆದ ಬಳಿಕ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ನಾನು ಮೀರತ್ನಿಂದ ದೆಹಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಟೋಲ್ ಬಳಿ ಇಬ್ಬರು ದುಷ್ಕರ್ಮಿಗಳು ನನ್ನ ವಾಹನದ ಮೇಲೆ 4 ಸುತ್ತು ಗುಂಡು ಹಾರಿಸಿದ್ದಾರೆ. ಇವರ ಜೊತೆ ಇನ್ನೂ 3-4 ಮಂದಿ ಇದ್ದರು. ಗುಂಡು ಹಾರಿಸಿದ ಪರಿಣಾಮ ನನ್ನ ವಾಹನ ಪಂಕ್ಚರ್ ಆಯಿತು. ಹೀಗಾಗಿ ನಾನು ಬೇರೆ ವಾಹನದಲ್ಲಿ ಅಲ್ಲಿಂದ ತೆರಳಿದೆ ಎಂದು ಓವೈಸಿ ತಮ್ಮ ಟ್ವೀಟ್ನಲ್ಲಿ ವಿವರಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications