ಕೊಹ್ಲಿ ದೇಶಭಕ್ತರಾಗಿದ್ರೆ ಅನುಷ್ಕಾಗೆ ವಿಚ್ಛೇದನ ನೀಡಲಿ: ಬಿಜೆಪಿ ಶಾಸಕ
ನವದೆಹಲಿ, ಮೇ 27: ಬೆಂಗಳೂರು ಮೂಲದ ಬಾಲಿವುಡ್ ನಟಿ, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮ ವಿವಾದದಲ್ಲಿ ಸಿಲುಕಿದ್ದಾರೆ. ಅನುಷ್ಕಾ ಶರ್ಮಾ ನಿರ್ಮಾಣ ಮಾಡಿರುವ ಮೊದಲ ವೆಬ್ ಸೀರಿಸ್ ಪಾತಾಳ್ ಲೋಕ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ಜಾತಿನಿಂದನೆ ದೂರು ನೀಡಲಾಗಿದೆ.
Recommended Video
ಇಷ್ಟೇ ಅಲ್ಲದೆ, ವಿರಾಟ್ ಕೊಹ್ಲಿ ದೇಶಭಕ್ತರಾಗಿದ್ರೆ ಅನುಷ್ಕಾಗೆ ವಿವಾಹ ವಿಚ್ಛೇದನ ನೀಡಲಿ ಎಂದು ದೂರು ನೀಡಿರುವ ಉತ್ತರಪ್ರದೇಶದ ಲೋನಿ ಕ್ಷೇತ್ರದ ಬಿಜೆಪಿ ಶಾಸಕ ನಂದಕಿಶೋರ್ ಗುರ್ಜಲ್ ಹೇಳಿದ್ದಾರೆ.
ಪಾತಾಳ ಲೋಕ ಟ್ರೈಲರ್ ನೋಡಿ, ಇದು ಅಮೆಜಾನ್ ಪ್ರೈಮ್ ಕ್ರೈಂ ಥ್ರಿಲ್ಲರ್
ಅನುಷ್ಕಾ ಶರ್ಮಾ ನಿರ್ಮಾಣ ಮಾಡಿರುವ ಮೊದಲ ವೆಬ್ ಸೀರಿಸ್ ಪಾತಾಳ್ ಲೋಕ್ ನಲ್ಲಿ ಜಾತಿ ನಿಂದನೆ ಮತ್ತು ನೇಪಾಳಿ ಸಮುದಾಯಕ್ಕೆ ಅಪಮಾನ, ಪಾಕಿಸ್ತಾನ ಐಎಸ್ಐಗೆ ಕ್ಲೀನ್ ಚಿಟ್ ನೀಡಲಾಗಿದೆ, ಸನಾತನ ಧರ್ಮಕ್ಕೆ ಅಪಮಾನ ಮಾಡಲಾಗಿದೆ ಎಂದು ಶಾಸಕ ನಂದಕಿಶೋರ್ ಗುರ್ಜಲ್ ಈಗಾಗಲೇ ದೂರು ನೀಡಿದ್ದಾರೆ. ಈ ಕುರಿತಂತೆ ಅನುಷ್ಕಾಗೆ ನೋಟಿಸ್ ಕೂಡಾ ಜಾರಿಯಾಗಿದೆ.
ಸುದೀಪ್ ಶರ್ಮ ರಚನೆಯ ಪಾತಾಲ್ ಲೋಕ್ನಲ್ಲಿ ಜೈದೀಪ್ ಅಹ್ಲವತ್, ನೀರಜ್ ಕಬಿ, ಗುಲ್ ಪನಾಗ್, ಮತ್ತು ಅಭಿಷೇಕ್ ಬ್ಯಾನರ್ಜಿ ಮುಂತಾದವರು ನಟಿಸಿದ್ದಾರೆ. ಅವಿನಾಶ್ ಅರುಣ್ ನಿರ್ದೇಶಿಸಿ ಕ್ಲೀನ್ ಸ್ಲೇಟ್ ಫಿಲ್ಮ್ಝ್ ತಯಾರಿಕೆಯ ಈ 9-ಭಾಗಗಳ ಅಮೆಜಾನ್ ಒರಿಜಿನಲ್ ಸೀರೀಸನ್ನು ಅನುಷ್ಕಾ ಶರ್ಮ ನಿರ್ಮಿಸಿದ್ದಾರೆ

ವೆಬ್ ಸಿರೀಸ್ ಪಾತಾಳ್ ಲೋಕ್ ನಲ್ಲಿ ಏನಿದೆ?
ಇದರ ಜೊತೆಗೆ ವೆಬ್ ಸಿರೀಸ್ ಪಾತಾಳ್ ಲೋಕ್ ನಲ್ಲಿ ನಂದಕಿಶೋರ್ ಗುರ್ಜರ್ ಅವರ ಮಾರ್ಫ್ ಮಾಡಿದ ಫೋಟೋವನ್ನು ಬಳಸಲಾಗಿದೆ. ಸರಣಿ ಹತ್ಯೆ ಮಾಡುತ್ತಿದ್ದ ಹತೋಡಾ ತ್ಯಾಗಿಯ ಪಿಟಿ ಮಾಸ್ಟರ್ ಪಾತ್ರಧಾರಿಯ ಮುಖವನ್ನು ನಂದಕಿಶೋರ್ ಗೆ ಸೇರಿಸಿ ಬಳಸಲಾಗಿದೆ. ಈ ಬಗ್ಗೆ ಕೂಡಾ ನಂದಕಿಶೋರ್ ದೂರು ನೀಡಿದ್ದಾರೆ.

ವೆಬ್ ಸರಣಿಯನ್ನು ಬ್ಯಾನ್ ಮಾಡಬೇಕು
ಈ ವೆಬ್ ಸರಣಿಯನ್ನು ಬ್ಯಾನ್ ಮಾಡಬೇಕು ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಅವರಿಗೆ ಪತ್ರ ಬರೆದಿದ್ದಾರೆ. ಅಭಿನೇತ್ರಿ ಅನುಷ್ಕಾ ಶರ್ಮ ಅವರು ಇಂಥ ದೊಡ್ಡ ರಾಷ್ಟ್ರದ್ರೋಹದ ಕೆಲಸ ಮಾಡಿದ್ದಾರೆ.

ಜಾತಿ ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಂತಾಗಿದೆ
ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಶಾಸಕ ನಂದಕಿಶೋರ್, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಜೊತೆಗಿರುವ ಕಾರ್ಯಕ್ರಮ ಚಿತ್ರವನ್ನು ಬಳಸಲಾಗಿದೆ. ಇದರಿಂದ ಜಾತಿ ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಂತಾಗಿದೆ. ತ್ಯಾಗಿ ಸಮುದಾಯದವನು ಎಂದು ಹತ್ಯೆಕೋರನ ಪಾತ್ರ ಸೃಷ್ಟಿಸಲಾಗಿದೆ.

ದೇಶಭಕ್ತರಾಗಿದ್ದರೆ ವಿಚ್ಛೇದನ ನೀಡಬೇಕು
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ದೇಶಕ್ಕಾಗಿ ಆಡುವ ದೇಶಭಕ್ತರಾಗಿದ್ದರೆ, ಅನುಷ್ಕಾ ಶರ್ಮಾಗೆ ತಕ್ಷಣವೇ ವಿಚ್ಛೇದನ ನೀಡಬೇಕು ಎಂದು ಸಲಹೆ ನೀಡುತ್ತೇನೆ ಎಂದು ಆಗ್ರಹಿಸುತ್ತೇನೆ. ಪಾಕಿಸ್ತಾನಕ್ಕೆ ಕ್ಲೀನ್ ಚಿಟ್ ನೀಡಿರುವುದು ಬಹುದೊಡ್ಡ ತಪ್ಪು ಈ ಬಗ್ಗೆ ನಾನು ಪ್ರಧಾನಿ ಮೋದಿ ಅವರಿಗೂ ಪತ್ರ ಬರೆಯುತ್ತೇನೆ, ಪಾತಾಳ್ ಲೋಕ್ ಸಂಬಂಧಿಸಿದ ಎಲ್ಲರಿಗೂ ಶಿಕ್ಷೆಯಾಗಬೇಕಿದೆ ಎಂದರು.
|
ಜಾತಿ ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಂತಾಗಿದೆ
''ಸ್ವರ್ಗ ಲೋಕ, ಭೂ ಲೋಕ ಹಾಗೂ ಪಾತಾಳ ಲೋಕ ಎಂಬ ಪುರಾಣದ ಕಲ್ಪನೆಯನ್ನು ಪ್ರಜಾಪ್ರಭುತ್ವದ ನಾಲ್ಕು ಅಂಗಗಳ ಮೂಲಕ ತೋರಿಸುವ ಪ್ರಯತ್ನ ಇದಾಗಿದೆ. ಕ್ರೈಂ ಡ್ರಾಮಾಗೆ ಸುದೀಪ್ ಶರ್ಮ ಕಥೆ ಒದಗಿಸಿದ್ದಾರೆ. ಈ ಸರಣಿ ನೋಡಿದ ಮೇಲೆ ನಿಮ್ಮ ಜಗತ್ತನ್ನು ನೋಡುವ ರೀತಿ ಬದಲಾಗಲಿದೆ, 200 ದೇಶಗಳು ಹಾಗು ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಭ್ಯವಾಗಲಿರುವ ಪಾತಾಳ್ ಲೋಕ್, ಪ್ರೈಮ್ ಸದಸ್ಯರಿಗೆ ಮೇ 15ರಿಂದ ಸ್ಟ್ರೀಮಿಂಗ್ಗೆ ಲಭ್ಯವಾಗಿದೆ" ಎಂದು ನಿರ್ಮಾಪಕಿ ನಟಿ ಅನುಷ್ಕಾ ಹೇಳಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications