ರಾಜಕೀಯ ಪ್ರಾಮುಖ್ಯಕ್ಕಾಗಿ ಗೋತ್ರ, ಜನಿವಾರ ತೋರಿಸ್ತಿದ್ದಾರೆ: ಯೋಗಿ ಟಾಂಗ್
ಲಖನೌ, ಡಿಸೆಂಬರ್ 16: ದೇಶದ ರಾಜಕಾರಣದಲ್ಲಿ ಪ್ರಾಮುಖ್ಯ ಪಡೆಯುವ ಸಲುವಾಗಿ ತಮ್ಮ ಗೋತ್ರದ ಬಗ್ಗೆ ಹೇಳಿಕೊಳ್ಳುವುದಕ್ಕೆ ಹಾಗೂ ಜನಿವಾರ ತೋರಿಸುವುದಕ್ಕೆ ಶುರು ಮಾಡಿದ್ದಾರೆ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಲೇವಡಿ ಮಾಡಿದ್ದಾರೆ.
ಹಿಂದೂ ಆಗಿದ್ದು ತಮ್ಮ ಆಯ್ಕೆಯಿಂದಲ್ಲ ಎನ್ನುತ್ತಿದ್ದವರೇ ಈಗ ನಿಜವಾದ ಅರ್ಥದಲ್ಲಿ ಹಿಂದೂಗಳು ಎನ್ನುತ್ತಿದ್ದಾರೆ. ಸನಾತನ ಧರ್ಮಕ್ಕೆ ಸಿಕ್ಕ ಜಯ ಇದು ಎಂದು ಹೇಳಿದ್ದಾರೆ.
ರಾಮಾಯಣದ ಮುಂದೆ ಗೂಗಲ್ ಕೂಡ ವಿಫಲವಾಗಿದೆ. ರಾಮಾಯಣವನ್ನು ಬರೆದವರು ಋಷಿ ವಾಲ್ಮೀಕಿ, ಆಧ್ಯಾತ್ಮಿಕ ಪುಸ್ತಕದಲ್ಲಿ ಅವರು ಸೇರಿಸಿದ ಜ್ಞಾನ ಸರಿಯಾಗಿಯೇ ಇದೆ. ಗೂಗಲ್ ಎಂಜಿನ್ ತೋರಿಸುವ ಮಾಹಿತಿಗಿಂತ ವಾಲ್ಮೀಕಿ ಬರೆದ ಮಾಹಿತಿ ನಿಖರವಾಗಿದೆ ಎಂದಿದ್ದಾರೆ.

ದೇಶದ ರಾಜಕಾರಣದಲ್ಲಿ ಪ್ರಾಮುಖ್ಯ ಪಡೆಯಲು ಗೋತ್ರ ಹಾಗೂ ಜನಿವಾರ ತೋರಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೆಸರನ್ನು ಹೇಳದೆ ಆದಿತ್ಯನಾಥ್ ಲೇವಡಿ ಮಾಡಿದ್ದಾರೆ. ಶಬರಿಮಲೆ ದೇವಸ್ಥಾನದಲ್ಲಿನ ಸಂಪ್ರದಾಯ ಗೊತ್ತಿದ್ದರೂ ಹಿಂದೂ ಧರ್ಮಕ್ಕೆ ಅವಮಾನ ಮಾಡುವ ಸಲುವಾಗಿ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ದೇವಸ್ಥಾನಕ್ಕೇ ಹೋಗದವರು ಈಗ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕುಂಭ ಮೇಳವನ್ನು ದಲಿತ ವಿರೋಧಿ ಸಮಾವೇಶ ಎಂಬಂತೆ ಬಿಂಬಿಸುತ್ತಿದ್ದಾರೆ. ಎಲ್ಲ ಜಾತಿಯವರು ಕುಂಭ ಮೇಳದಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಾಕಷ್ಟು ವೇದ ಮಂತ್ರಗಳನ್ನು ರಚಿಸಿರುವುದು ದಲಿತ ಸಂತರು. ರಾಮನ ಸಂದರ್ಶಿಸಿದವನು ಋಷಿ ವಾಲ್ಮೀಕಿ. ಆದರೆ ಆ ಸಮುದಾಯದ ಜನರ ಮೇಲೆ ಶೋಷಣೆ ಆಗಿದೆ ಎಂದಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications