ಶ್ರೀಕೃಷ್ಣ ಜನ್ಮಸ್ಥಳ ವಿವಾದ: ಮಸೀದಿ ತೆರವುಗೊಳಿಸಲು ನ್ಯಾಯಾಲಯಕ್ಕೆ ಅರ್ಜಿ
ಮಥುರಾ, ಸೆಪ್ಟೆಂಬರ್ 28: ಶ್ರೀರಾಮ ಮತ್ತು ಶ್ರೀಕೃಷ್ಣನ ಜನ್ಮಸ್ಥಾನಕ್ಕೆ ಸಂಬಂಧಿಸಿದ ಎರಡು ಪ್ರತ್ಯೇಕ ಅರ್ಜಿಗಳನ್ನು ಉತ್ತರ ಪ್ರದೇಶದ ಎರಡು ನ್ಯಾಯಾಲಯಗಳು ಸೆ. 30ರಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಿವೆ.
28 ವರ್ಷದ ಹಿಂದೆ ದ್ವಂಸಗೊಳಿಸಲಾದ ರಾಮ ಜನ್ಮಭೂಮಿಯ ವಿವಾದಾತ್ಮಕ ಸಂರಚನೆಯ ಕುರಿತು ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಲಕ್ನೋದ ನ್ಯಾಯಾಲಯವೊಂದು ನಡೆಸಲಿದೆ.
ಶ್ರೀಕೃಷ್ಣನ ಜನ್ಮಸ್ಥಾನದ ಭೂಮಿಯನ್ನು ಮರಳಿ ಪಡೆಯುವುದರ ವಿಚಾರವಾಗಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಮಥುರಾದ ಸಿವಿಲ್ ನ್ಯಾಯಾಲಯವೊಂದು ನಡೆಸಲಿದೆ. ಇದರ ಸಂಕ್ಷಿಪ್ತ ವಿಚಾರಣೆ ಸೆ. 28ರಂದು ನಡೆದಿದ್ದು, ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಛಾಯಾ ಶರ್ಮಾ ಅರ್ಜಿ ವಿಚಾರಣೆಗೆ ಅಂಗೀಕರಿಸಿದರು. ಅರ್ಜಿಯ ಕುರಿತಾದ ಎರಡೂ ಕಡೆಯ ವಾದ ವಿವಾದ ಸೆ. 30ರಿಂದ ನಡೆಯಲಿದೆ.
ಮಥುರಾದ ಕಾತ್ರಾ ಕೇಶವ ದೇವ ದೇವಸ್ಥಾನದ 13.37 ಎಕರೆ ಆವರಣದೊಳಗಿನ ಶ್ರೀಕೃಷ್ಣ ಜನ್ಮಸ್ಥಳ ಎನ್ನಲಾದ ಪ್ರದೇಶದಲ್ಲಿಯೇ 1669-70ರಲ್ಲಿ ಮೊಘಲ್ ದೊರೆ ಔರಂಗಜೇಬನ ಆದೇಶದಂತೆ ನಿರ್ಮಿಸಲಾದ ಮಸೀದಿಯನ್ನು ತೆರವುಗೊಳಿಸುವಂತೆ ಹಿಂದೂ ಭಕ್ತರ ಗುಂಪೊಂದು ನ್ಯಾಯಾಲಯದ ಮೆಟ್ಟಿಲೇರಿದೆ. ಮುಂದೆ ಓದಿ...

1968ರ ಒಪ್ಪಂದ ರದ್ದುಗೊಳಿಸಿ
ದೇವಸ್ಥಾನದ ಆವರಣದೊಳಗೇ ಮಸೀದಿ ಅಸ್ತಿತ್ವವನ್ನು ಮುಂದುವರಿಸುವಂತೆ 1968ರಲ್ಲಿ ಮಥುರಾದ ನ್ಯಾಯಾಲಯವೊಂದು ಶ್ರೀಕೃಷ್ಣ ಜನ್ಮಸ್ಥಳ ಸೇವಾ ಸಂಸ್ಥಾನ ಮತ್ತು ಶಾಹಿ ಈದ್ಗಾ ನಿರ್ವಹಣಾ ಸಮಿತಿ ನಡುವೆ ಮಾಡಿಸಿದ್ದ ಭೂ ಒಪ್ಪಂದವನ್ನು ರದ್ದುಗೊಳಿಸುವಂತೆ ಕೂಡ ಈ ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.

ಹೊರಗಿನವರ ಪ್ರಯತ್ನ
ಆದರೆ ಈ ಅರ್ಜಿಯನ್ನು ಅಖಿಲ ಭಾರತೀಯ ತೀರ್ಥ ಪುರೋಹಿತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಮಹೇಶ್ ಪಾಠಕ್ ವಿರೋಧಿಸಿದ್ದಾರೆ. ದೇವಸ್ಥಾನ-ಮಸೀದಿ ವಿಚಾರದಲ್ಲಿ ವಿವಾದ ಕೆದಕುವ ಮೂಲಕ ಶಾಂತಿ ಹಾಗೂ ಸೌಹಾರ್ದತೆಯನ್ನು ಕದಡಲು ಕೆಲವು ಹೊರಗಿನವರು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ವಿವಾದವೇ ಇಲ್ಲ
20ನೇ ಶತಮಾನದಲ್ಲಿ ಎರಡೂ ಗುಂಪುಗಳ ನಡುವೆ ರಾಜಿ ಒಪ್ಪಂದ ನಡೆದ ಬಳಿಕ ಮಥುರಾದ ಶ್ರೀಕೃಷ್ಣ ಜನ್ಮಸ್ಥಾನದಲ್ಲಿ ಯಾವುದೇ ಮಂದಿರ-ಮಸೀದಿ ವಿವಾದ ಉಳಿದಿಲ್ಲ. ಇಲ್ಲಿ ದೇವಸ್ಥಾನ ಹಾಗೂ ಮಸೀದಿಗಳು ಎರಡೂ ಜತೆಯಾಗಿ ಇರುವುದು ಭಾವನಾತ್ಮಕ ಸಮಗ್ರತೆಯ ಧ್ಯೋತಕವಾಗಿದ್ದು, ಹಿಂದೂ ಹಾಗೂ ಮುಸ್ಲಿಂ ಸಮುದಾಯಗಳ ಮಧ್ಯೆ ಸಂಪೂರ್ಣ ಸೌಹಾರ್ದತೆ ಇದೆ ಎಂದು ತಿಳಿಸಿದ್ದಾರೆ.

ಅರ್ಜಿದಾರರು ಯಾರು
ಲಕ್ನೋ ನಿವಾಸಿ ರಂಜನಾ ಅಗ್ನಿಹೋತ್ರಿ, ಶಿವಾಜಿ ಸಿಂಗ್, ತ್ರಿಪುರಾರಿ ತಿವಾರಿ, ಬಸ್ತಿಯ ಕರುಣೇಶ್ ಕುಮಾರ್ ಶುಕ್ಲಾ, ಸಿದ್ಧಾರ್ಥ ನಗರದ ರಾಜೇಶ್ ಮಣಿ ತ್ರಿಪಾಠಿ ಹಾಗೂ ದೆಹಲಿ ನಿವಾಸಿ ಪರ್ವೇಶ್ ಕುಮಾರ್ ಎಂಬುವವರು ಶ್ರೀಕೃಷ್ಣ ಜನ್ಮಸ್ಥಾನಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications