ಲಕ್ನೋ ಏರ್ಪೋರ್ಟ್ನಲ್ಲಿ ಪ್ರಧಾನಿ ಸಹೋದರ ಪ್ರಹ್ಲಾದ್ ಮೋದಿ ಧರಣಿ
ಲಕ್ನೋ,ಫೆಬ್ರವರಿ 03: ಪ್ರಧಾನಿ ನರೇಂದ್ರ ಮೋದಿ ಸಹೋದರ ಪ್ರಹ್ಲಾದ್ ಮೋದಿ ಲಕ್ನೋ ಏರ್ಪೋರ್ಟ್ನಲ್ಲಿ ಧರಣಿ ಕುಳಿತಿರುವ ಘಟನೆ ಇಂದು ನಡೆದಿದೆ.
ಪ್ರಹ್ಲಾದ್ ಮೋದಿಯವರು ಸುಮಾರು 4 ಗಂಟೆಗೆ ಇಂಡಿಗೋ ವಿಮಾನದಲ್ಲಿ ಬಂದಿದ್ದರು. ಈ ಸಂದರ್ಭದಲ್ಲಿ ಬೆಂಬಲಿಗರು ಅವರತ್ತ ಬರುವುದನ್ನು ತಡೆದ ಪೊಲೀಸರ ಕ್ರಮದ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪೊಲೀಸರ ವಿರುದ್ಧ ವಿಮಾನ ನಿಲ್ದಾಣ ಆವರಣದಲ್ಲಿಯೇ ಧರಣಿ ನಡೆಸಿದ್ದರು ಎಂಬುದಾಗಿ ಲಕ್ನೋ ಚೌಧರಿ ಚರಣ್ಸಿಂಗ್ ವಿಮಾನ ನಿಲ್ದಾಣದ ಅಡಿಷನಲ್ ಜನರಲ್ ಮ್ಯಾನೇಜರ್ ಭೂಪೇಂದ್ರ ಸಿಂಗ್ ತಿಳಿಸಿದ್ದಾರೆ.

ವ್ಯವಸ್ಥೆಯ ವಿರುದ್ಧ ಸಾರ್ವಜನಿಕರು ಪ್ರತಿಭಟನೆ ಮಾಡುವುದು ಸಾಮಾನ್ಯ, ಅಸಮಾಧಾನ ಹೊರಹಾಕುವುದು ಕೂಡ ಅಸಹಜವೇನಲ್ಲ ಆದರೆ ದೇಶದ ಪ್ರಧಾನಿ ಸಹೋದರನೇ ವ್ಯವಸ್ಥೆ ವಿರುದ್ಧ ಮಾತನಾಡಿರುವುದು ಕುತೂಹಲಕ್ಕೆ ಕಾರಣವಾಗಿತ್ತು.
ಉತ್ತರ ಪ್ರದೇಶದ ಸುಲ್ತಾನ್ಪುರದಲ್ಲಿ ನಡೆಯುತ್ತಿದ್ದ ಸಾಮಾಜಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅವರು ತೆರಳುತ್ತಿದ್ದರು. ಇಲ್ಲಿಗೆ ಬಂದು ನೋಡಿದ್ದಾಗ ನನ್ನನ್ನು ಕರೆದೊಯ್ಯಬೇಕಿದ್ದ ಬೆಂಬಲಿಗರನ್ನು ಪೊಲೀಸರು ತಡೆದಿದ್ದು ತಿಳಿದುಬಂದಿತ್ತು. ಅವರನ್ನು ಪೊಲೀಸ್ ಠಾಣೆಯಲ್ಲಿ ಕೂರಿಸಿದ್ದರು.
ಯಾಕಾಗಿ ಬೆಂಬಲಿಗರನ್ನು ಬಂಧಿಸಲಾಗಿದೆ ಎನ್ನುವ ವರದಿಯನ್ನು ನೀಡದಿದ್ದರೆ ಸುಪ್ರೀಂಕೋರ್ಟ್ಗೆ ತೆರಳುವುದಾಗಿ ತಿಳಿಸಿದ್ದಾರೆ.ಆದರೆ ಪೊಲೀಸ್ ಅಧಿಕಾರಿಗಳು ಅದನ್ನು ಅಲ್ಲಗಳೆದಿದ್ದು ಯಾರನ್ನೂ ಬಂಧಿಸಿಲ್ಲ ಎಂದು ಹೇಳಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications