ರಾಮ ಮಂದಿರ ನಿರ್ಮಾಣ ಟ್ರಸ್ಟ್ ಗೆ ಅಧ್ಯಕ್ಷ-ಕಾರ್ಯದರ್ಶಿ ನೇಮಕ
ಲಕ್ನೋ, ಫೆಬ್ರವರಿ.19: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಚುರುಕುಗೊಂಡಿದೆ. ರಾಮ ಮಂದಿರ ಟ್ರಸ್ಟ್ ಅಧ್ಯಕ್ಷರಾಗಿ ಮಹಾಂತ್ ಗೋಪಾಲ್ ದಾಸ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಚಂಪತ್ ರೈರನ್ನು ಆಯ್ಕೆ ಮಾಡಲಾಗಿದೆ.
ನವದಹೆಲಿಯಲ್ಲಿ ಹಿರಿಯ ವಕೀಲ ಕೆ. ಪರಸಾನ್ ನಿವಾಸದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಶ್ರೀರಾಮ ಮಂದಿರ ಟ್ರಸ್ಟ್ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಯನ್ನು ಆಯ್ಕೆ ಮಾಡಲಾಯಿತು. ಇದರ ಜೊತೆಗೆ ಈ ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರಟರಿ ಆಗಿದ್ದ ನೃಪೇಂದ್ರ ಮಿಶ್ರಾರನ್ನು ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಮುಖ್ಯಸ್ಥರಾಗಿ ನೇಮಿಸಲಾಯಿತು.
ರಾಮ ಮಂದಿರ ನಿರ್ಮಾಣ ಕಾರ್ಯವನ್ನು ವೇಗದ ಗತಿಯಲ್ಲಿ ನಡೆಸುವ ಉದ್ದೇಶದಿಂದ ಸಮಿತಿಯನ್ನು ರಚಿಸಲಾಗಿದ್ದು, ಈ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನಲ್ಲಿ ಏಳು ಸದಸ್ಯರು, ಐವರು ನಾಮನಿರ್ದೇಶನ ಸದಸ್ಯರು ಹಾಗೂ ಮೂವರು ಟ್ರಸ್ಟಿಗಳು ಇರಲಿದ್ದಾರೆ.

ಫೆಬ್ರವರಿ.05ರಂದು ಸಮಿತಿ ರಚನೆ ಬಗ್ಗೆ ಪ್ರಧಾನಿ ಮಾತು:
ಕಳೆದ ಫೆಬ್ರವರಿ.05ರಂದು ಸಂಸತ್ ನಲ್ಲಿ ರಾಮ ಮಂದಿರ ನಿರ್ಮಾಣದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತನಾಡಿದ್ದರು. ಅಂದು ರಾಮ ಮಂದಿರ ನಿರ್ಮಾಣಕ್ಕಾಗಿ 15 ಮಂದಿ ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚನೆ ಮಾಡಲಾಗುತ್ತದೆ. ಈ ಸಮಿತಿಗೆ ರಾಮ ಮಂದಿರ ನಿರ್ಮಾಣದ ಜವಾಬ್ದಾರಿಯನ್ನು ವಹಿಸಲಾಗುತ್ತದೆ ಎಂದು ಹೇಳಿದ್ದರು.
ಇನ್ನು, ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಗ್ಯಾನೇಶ್ ಕುಮಾರ್ ಮತ್ತು ಉತ್ತರ ಪ್ರದೇಶ ಸರ್ಕಾರದ ಪ್ರತಿನಿಧಿಯಾಗಿ ಅವಿನಾಶ್ ಅವಾಸ್ತಿ ಹಾಗೂ ಅಯೋಧ್ಯೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಅನುಜ್ ಕುಮಾರ್ ಝಾ ಹಾಜರಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications