ಈ ಚುನಾವಣೆ ನಂತರ ಎಸ್ಪಿ- ಬಿಎಸ್ಪಿ ಅಂತ್ಯ: ಪ್ರಧಾನಿ ನರೇಂದ್ರ ಮೋದಿ
ಅಲೀಗಢ (ಉತ್ತರಪ್ರದೇಶ), ಏಪ್ರಿಲ್ 14: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಹಾಗೂ ಬಹುಜನ ಸಮಾಜ ಪಕ್ಷ ಎರಡೂ ಮುಗಿದು ಹೋಗುತ್ತದೆ. ಅದರ ಜತೆಗೆ ಆ ಮಾದರಿಯ ರಾಜಕಾರಣವೂ ಕೊನೆ ಆಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ವಾಗ್ದಾಳಿ ನಡೆಸಿದ್ದಾರೆ.
ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲೇ ಜನರು ತಮಗೆ ಜಾತಿ ಆಧಾರಿತ ರಾಜಕಾರಣ ಇಷ್ಟವಿಲ್ಲ ಎಂದಿದ್ದಾರೆ. ಜನರಿಗೆ ಅಭಿವೃದ್ಧಿ ಬೇಕಿದೆ. ಎರಡು ವರ್ಷದ ಹಿಂದೆ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ನೀಡಿದ ಸಂದೇಶವೇ ಅದು. ಆದರೆ ಅವರಿಗೆ ಸತ್ಯ ಒಪ್ಪಿಕೊಳ್ಳುವುದು ಬೇಕಿಲ್ಲ. ಇದೀಗ ಅವರ ಅಂಗಡಿ ಬಲವಂತವಾಗಿ ಮುಚ್ಚಲು ಅಲೀಗಢದಿಂದ ಬೀಗ ಖರೀದಿಸಬೇಕಿದೆ ಎಂದು ವ್ಯಂಗ್ಯವಾಡಿದ್ದಾರೆ.
ಇದಕ್ಕೂ ಮುನ್ನ ಉತ್ತರಪ್ರದೇಶದ ಪಶ್ಚಿಮ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಲು ಆ ಎರಡು ಪಕ್ಷಗಳೇ ಕಾರಣ ಎಂದು ಆರೋಪಿಸಿದ ಮೋದಿ, ಆ ಭಾಗ ಹೊತ್ತಿ ಉರಿಯುತ್ತಿತ್ತು. ಅಪರಾಧಿಗಳಿಗೆ ಅಮಾಯಕರೇ ಗುರಿಯಾಗಿದ್ದರು. ಮುಜಾಫರ್ ನಗರ್ ಹಿಂಸಾಚಾರದಲ್ಲಿ ಅಪರಾಧಿಗಳನ್ನು ರಕ್ಷಿಸಿದವರು ಯಾರು? ಉತ್ತರಪ್ರದೇಶದ ಪಶ್ಚಿಮ ಭಾಗದ ಮತದಾರರು ಅರ್ಥ ಮಾಡಿಕೊಂಡಿದ್ದಾರೆ: ಆ ರಾಜಕಾರಣಿಗಳು ಸತ್ಯವಂತರಲ್ಲ ಎಂದು ಮೋದಿ ಹೇಳಿದ್ದಾರೆ.

ಮೊದಲ ಹಂತದ ಮತದಾನದ ನಂತರ 'ಬೆರಕೆ ಗುಂಪು' ಮೋದಿಯನ್ನು ಬಯ್ಯಲು ಆರಂಭಿಸಿದೆ. ಏಕೆಂದರೆ ತಾವು ಸೋಲುತ್ತಿದ್ದೇವೆ ಎಂಬುದು ಅವರಿಗೆ ಗೊತ್ತಾಗಿದೆ. ಇನ್ನು ಇದೇ ವೇಳೆ ಅಂಬೇಡ್ಕರ್ ಅವರಿಗೆ ಏನು ಮಾಡಲಾಯಿತು ಎಂಬುದನ್ನು ನಾವು ಮರೆಯಬಾರದು. ಅಂಬೇಡ್ಕರ್ ರನ್ನು ಕಾಂಗ್ರೆಸ್ ಎಂದೂ ಸಹಿಸಲಿಲ್ಲ ಎಂದು ಮೋದಿ ಆರೋಪಿಸಿದರು.
ಉತ್ತರಪ್ರದೇಶವನ್ನು ಕಾಂಗ್ರೆಸ್ ಹಾಳುಗೆಡವಿದೆ. ಯಾರು ಪ್ರಧಾನಿ ಆಗುವ ಕನಸು ಕಾಣುತ್ತಿದ್ದಾರೋ ಅದು ಹಗಲು ಕನಸು ಎಂದು ನರೇಂದ್ರ ಮೋದಿ ವ್ಯಂಗ್ಯವಾಡಿದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications