ಗಂಗಾ ನದಿ ದಡದಲ್ಲಿ ಭೂ ಸವೆತ: ದಫನ್ ಮಾಡಿದ ದೇಹಗಳು ಕೊಚ್ಚಿ ಹೋಗುವ ಭೀತಿ
ಪ್ರಯಾಗರಾಜ್, ಜೂ. 18: ಈ ವರ್ಷ ಮುಂಗಾರು ಅವಧಿಗೂ ಮುನ್ನ ಆರಂಭವಾದ ಹಿನ್ನೆಲೆ ಗಂಗಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಲಿದೆ. ಈ ನೀರು ಗಂಗಾ ನದಿಯ ದಡದಲ್ಲಿ ಸವೆತಕ್ಕೆ ಕಾರಣವಾಗಿದೆ. ಈವರೆಗೆ ಗಂಗಾ ನದಿ ತೀರದಲ್ಲೇ ಹೆಚ್ಚಿನ ಸಂಖ್ಯೆಯ ಮೃತ ದೇಹಗಳ ಅಂತ್ಯ ಸಂಸ್ಕಾರ (ದಫನ್) ಮಾಡಲಾಗುತ್ತಿತ್ತು. ಆದರೆ ಈಗ ಈ ಸವೆತದಿಂದಾಗಿ ಫಫಾಮೌ ಘಾಟ್ನಲ್ಲಿ ಮೃತದೇಹಗಳು ಕೊಚ್ಚಿ ಹೋಗುವ ಭೀತಿ ಉಂಟಾಗಿದೆ.
ಈ ಪರಿಸ್ಥಿತಿಯ ಹಿನ್ನೆಲೆ ಈ ದೇಹಗಳನ್ನು ದಹನ ಮಾಡುವ ಜವಾಬ್ದಾರಿಯನ್ನು ಪ್ರಯಾಗರಾಜ್ ಮುನ್ಸಿಪಲ್ ಕಾರ್ಪೊರೇಷನ್ (ಪಿಎಂಸಿ) ವಹಿಸಿಕೊಂಡಿದೆ. ಇಲ್ಲಿಯವರೆಗೆ, ಫಫಾಮೌ ಘಾಟ್ನ ವಲಯ ಅಧಿಕಾರಿ ನೀರಜ್ ಸಿಂಗ್ ಎರಡು ಡಜನ್ಗೂ ಹೆಚ್ಚು ಶವಗಳನ್ನು ಅಂತ್ಯಸಂಸ್ಕಾರ ಮಾಡಿದ್ದು, ಈ ಪೈಕಿ 11 ಶವಗಳನ್ನು ಕಳೆದ ವಾರವಷ್ಟೇ ಅಂತ್ಯಕ್ರಿಯೆ ಮಾಡಲಾಗಿದೆ. ಮಂಗಳವಾರ ಏಳು ಶವಗಳನ್ನು ಮತ್ತು ಬುಧವಾರ ಬೆಳಿಗ್ಗೆ ಮೂರು ಶವಸಂಸ್ಕಾರ ಮಾಡಲಾಗಿದೆ.
ಪ್ರಸ್ತುತ, ನದಿಯ ಬಲವಾದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿರುವ ಹಿನ್ನೆಲೆ ತೀವ್ರ ಸವೆತ ಉಂಟಾಗಿದ್ದು ಈ ಹಿನ್ನೆಲೆ ಸುಮಾರು 70 ದೇಹಗಳು ಈ ಘಾಟ್ನಲ್ಲಿ ಕೊಚ್ಚಿ ಹೋಗುವ ಅಥವಾ ಮಣ್ಣಿನಿಂದ ಮೇಲಕ್ಕೆ ಬರುವ ಸಾಧ್ಯತೆಯಿದೆ.

ಪ್ರತಿದಿನ, ಅಧಿಕಾರಿ ಸಿಂಗ್ ಮತ್ತು ತಂಡವು ಗಂಗಾ ದಡದಲ್ಲಿ ಹೂತಿರುವ ಶವಗಳನ್ನು ಪರಿಶೀಲಿಸುತ್ತಿದೆ. ಯಾವುದೇ ಮೃತ ದೇಹ ಮಣ್ಣಿನಿಂದ ಹೊರಕ್ಕೆ ಬರುವ ಸಾಧ್ಯತೆಗಳು ಕಂಡು ಬಂದರೆ, ಆ ಮೃತದೇಹವನ್ನು ಹೊರತೆಗೆದು ಎಲ್ಲಾ ವಿಧಿ ವಿಧಾನದೊಂದಿಗೆ ದಹನ ಮಾಡುವ ನಿರ್ಧಾರವನ್ನು ಆಡಳಿತ ಕೈಗೊಂಡಿದೆ.
ಈ ಬಗ್ಗೆ ಮಾಹಿತಿ ನೀಡಿದ ಫಫಾಮೌ ಘಾಟ್ನ ವಲಯ ಅಧಿಕಾರಿ ನೀರಜ್ ಸಿಂಗ್, "ನಾವು ಶವಸಂಸ್ಕಾರ ಮಾಡುವ ಯಾರ ಬಗ್ಗೆಯೂ ನನಗೆ ತಿಳಿದಿಲ್ಲ. ಆದರೆ ಅಗತ್ಯವಿರುವ ಎಲ್ಲ ಆಚರಣೆಗಳನ್ನು ಧಾರ್ಮಿಕವಾಗಿ ಅನುಸರಿಸುವುದು ನನ್ನ ಜವಾಬ್ದಾರಿಯಾಗಿದೆ ಎಂದು ನಾನು ಭಾವಿಸುತ್ತೇನೆ. ಮೃತರನ್ನು ನನ್ನ ಸ್ವಂತ ಕುಟುಂಬವೆಂದು ಪರಿಗಣಿಸಿವೇದ ಮಂತ್ರಗಳ ಪಠಣದ ಮಧ್ಯೆ ನಾನು ಮೃತದೇಹಕ್ಕೆ ಬೆಂಕಿ ಇಡುತ್ತೇನೆ," ಎಂದು ತಿಳಿಸಿದ್ದಾರೆ.
ಗಂಗಾ ತೀರದಲ್ಲಿ ಸಮಾಧಿ ಮಾಡಿದ ಶವಗಳನ್ನು ದಹನ ಮಾಡುವ ಕಾರ್ಯವು ಜೂನ್ 4 ರಂದು ಪ್ರಾರಂಭವಾಗಿದೆ. ಅಂದಿನಿಂದ, ಈ ವಲಯ ಅಧಿಕಾರಿ ಧಾರ್ಮಿಕ ವಿಧಿ ವಿಧಾನ ಪ್ರಕಾರ ಅಂತ್ಯ ಸಂಸ್ಕಾರ ಮಾಡುವ ಕಾರ್ಯ ಮಾಡುತ್ತಿದ್ದಾರೆ. ಬುಧವಾರದವರೆಗೆ, ಅವರು 24 ದೇಹಗಳ ದಹನ ಕಾರ್ಯ ಮಾಡಿದ್ದಾರೆ.
ಪ್ರತಿ ದೇಹವನ್ನು ದಹನ ಮಾಡಲು ಪಿಎಂಸಿ ಸುಮಾರು 3,000 ರೂ. ಹಾಗೂ ತನ್ನದೇ ಆದ ಸಂಪನ್ಮೂಲಗಳನ್ನು ವ್ಯವಸ್ಥೆಗಾಗಿ ಬಳಸುತ್ತಿದೆ. ದಡದಲ್ಲಿ ನಿರಂತರ ಸವೆತ ಹಿನ್ನೆಲೆ ಅಧಿಕ ದೇಹಗಳು ಕೊಚ್ಚಿ ಹೋಗುವ ಭಯದಿಂದ ಈ ದಹನ ಕಾರ್ಯ ಮುಂದುವರಿಯಲಿದೆ ಎಂದು ಮೂಲಗಳು ತಿಳಿಸಿವೆ.
"ನನ್ನ ಉನ್ನತ ಅಧಿಕಾರಿಗಳಿಂದ ಅನೌಪಚಾರಿಕ ಅನುಮೋದನೆ ಪಡೆದ ನಂತರ, ನನ್ನ ತಂಡವು ಸಮಾಧಿ ಮಾಡಿದ ದೇಹಗಳನ್ನು ಪತ್ತೆ ಮಾಡುತ್ತಿದ್ದು, ಆ ದೇಹಗಳ ನಾವು ಅಂತ್ಯಸಂಸ್ಕಾರ ಮಾಡುತ್ತಿದ್ದೇವೆ. ಬೇರೆ ಯಾರೂ ಶವವನ್ನು ಹೂತು ಹೋಗದಂತೆ ತಡೆಯುತ್ತೇವೆ. ಈ ದಡ ಸವೆತದಿಂದಾಗಿ ದೇಹವು ಮಣ್ಣಿನಿಂದ ಹೊರಕ್ಕೆ ಬರಬಹುದು ಅಥವಾ ನದಿಗೆ ಬೀಳಬಹುದು ಎಂಬುದು ನಮ್ಮ ಗಮನಕ್ಕೆ ಬಂದಿದೆ. ಆದ್ದರಿಂದ ದೇಹವನ್ನು ಅಗೆದು ತೆಗೆದು ದಹನ ಕಾರ್ಯ ಮಾಡುತ್ತಿದ್ದೇವೆ," ಎಂದು ಪಿಎಂಸಿಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಪಿಕೆ ಮಿಶ್ರಾ ಹೇಳಿದರು.
(ಒನ್ಇಂಡಿಯಾ ಸುದ್ದಿ)
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications