ಉತ್ತರ ಪ್ರದೇಶದ : ಪ್ರತಿಭಟನೆ ವೇಳೆ ಹಿಂಸಾಚಾರ, ಪೊಲೀಸ್ ಸಾವು
ಲಕ್ನೋ, ಡಿಸೆಂಬರ್ 03 : ಉತ್ತರ ಪ್ರದೇಶದ ಬುಲಂದರ್ಶೆಹರ್ನಲ್ಲಿ ಹಿಂಸಾಚಾರ ನಡೆದಿದ್ದು ಒಬ್ಬರು ಪೊಲೀಸ್ ಅಧಿಕಾರಿ ಮೃತಪಟ್ಟಿದ್ದಾರೆ. ಗಲಭೆಯಲ್ಲಿ ಅನೇಕ ಮಂದಿ ಗಾಯಗೊಂಡಿದ್ದು, ಒಬ್ಬ ಯುವಕನ ಸ್ಥಿತಿ ಗಂಭೀರವಾಗಿದೆ.
ಅಕ್ರಮ ಕಸಾಯಿ ಖಾನೆಗಳ ವಿರುದ್ಧ ಸೋಮವಾರ ಪ್ರತಿಭಟನೆ ನಡೆಯುತ್ತಿತ್ತು. ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾನಿರತರು ಪೊಲೀಸ್ ವಾಹನ ಮತ್ತು ಠಾಣೆಗೆ ಬೆಂಕಿ ಹಚ್ಚಿದರು.
ಕುಡಿದು ಗಲಾಟೆ ಮಾಡಿದ್ದವನ ಪೊಲೀಸ್ ವ್ಯಾನ್ ನಿಂದ ಹೊರಗೆಳೆದು ಕೊಂದರು
ಈ ಹಿಂಸಾಚಾರದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಸುಭೋದ್ ಕುಮಾರ್ ಸಿಂಗ್ ಎನ್ನುವವರು ಮೃತಪಟ್ಟಿದ್ದಾರೆ. ಬುಲಂದರ್ಶೆಹರ್ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಪೊಲೀಸ್ ವಶದಲ್ಲಿದ್ದ ಮಗ ತಾಯಿಯ ಎದುರೇ ಸಾವು: ಠಾಣೆಯ ವಿರುದ್ಧ ದೂರು
ಮಿರತ್ ಎಡಿಜಿ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಸ್ಥಿತಿಯನ್ನು ಖುದ್ದಾಗಿ ಅವಲೋಕಿಸಿದ್ದಾರೆ. ಯಾವ-ಯಾವ ಪ್ರದೇಶದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.
ಪೊಲೀಸ್ ವಶದಲ್ಲಿದ್ದ ಮಗ ತಾಯಿಯ ಎದುರೇ ಸಾವು : ಠಾಣೆಯ ವಿರುದ್ಧ ದೂರು
ಪ್ರತಿಭಟನೆ ವೇಳೆ ಜನರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಇದೇ ಹಿಂಸಾಚಾರಕ್ಕೆ ಕಾರಣವಾಯಿತೇ? ಎಂಬುದು ಇನ್ನೂ ತಿಳಿದಿಲ್ಲ. ಹಿಂಸಾಚಾರದಲ್ಲಿ ಹಲವರು ಗಾಯಗೊಂಡಿದ್ದು, ಯುವಕನ ಸ್ಥಿತಿ ಗಂಭೀರವಾಗಿದೆ.