ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಪ್ರದೇಶದ : ಪ್ರತಿಭಟನೆ ವೇಳೆ ಹಿಂಸಾಚಾರ, ಪೊಲೀಸ್ ಸಾವು

|
Google Oneindia Kannada News

ಲಕ್ನೋ, ಡಿಸೆಂಬರ್ 03 : ಉತ್ತರ ಪ್ರದೇಶದ ಬುಲಂದರ್‌ಶೆಹರ್‌ನಲ್ಲಿ ಹಿಂಸಾಚಾರ ನಡೆದಿದ್ದು ಒಬ್ಬರು ಪೊಲೀಸ್ ಅಧಿಕಾರಿ ಮೃತಪಟ್ಟಿದ್ದಾರೆ. ಗಲಭೆಯಲ್ಲಿ ಅನೇಕ ಮಂದಿ ಗಾಯಗೊಂಡಿದ್ದು, ಒಬ್ಬ ಯುವಕನ ಸ್ಥಿತಿ ಗಂಭೀರವಾಗಿದೆ.

ಅಕ್ರಮ ಕಸಾಯಿ ಖಾನೆಗಳ ವಿರುದ್ಧ ಸೋಮವಾರ ಪ್ರತಿಭಟನೆ ನಡೆಯುತ್ತಿತ್ತು. ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾನಿರತರು ಪೊಲೀಸ್ ವಾಹನ ಮತ್ತು ಠಾಣೆಗೆ ಬೆಂಕಿ ಹಚ್ಚಿದರು.

ಕುಡಿದು ಗಲಾಟೆ ಮಾಡಿದ್ದವನ ಪೊಲೀಸ್ ವ್ಯಾನ್ ನಿಂದ ಹೊರಗೆಳೆದು ಕೊಂದರುಕುಡಿದು ಗಲಾಟೆ ಮಾಡಿದ್ದವನ ಪೊಲೀಸ್ ವ್ಯಾನ್ ನಿಂದ ಹೊರಗೆಳೆದು ಕೊಂದರು

ಈ ಹಿಂಸಾಚಾರದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಸುಭೋದ್ ಕುಮಾರ್ ಸಿಂಗ್ ಎನ್ನುವವರು ಮೃತಪಟ್ಟಿದ್ದಾರೆ. ಬುಲಂದರ್‌ಶೆಹರ್‌ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಪೊಲೀಸ್ ವಶದಲ್ಲಿದ್ದ ಮಗ ತಾಯಿಯ ಎದುರೇ ಸಾವು: ಠಾಣೆಯ ವಿರುದ್ಧ ದೂರುಪೊಲೀಸ್ ವಶದಲ್ಲಿದ್ದ ಮಗ ತಾಯಿಯ ಎದುರೇ ಸಾವು: ಠಾಣೆಯ ವಿರುದ್ಧ ದೂರು

Police inspector killed during protest in Bulandshahr

ಮಿರತ್ ಎಡಿಜಿ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಸ್ಥಿತಿಯನ್ನು ಖುದ್ದಾಗಿ ಅವಲೋಕಿಸಿದ್ದಾರೆ. ಯಾವ-ಯಾವ ಪ್ರದೇಶದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.

ಪೊಲೀಸ್ ವಶದಲ್ಲಿದ್ದ ಮಗ ತಾಯಿಯ ಎದುರೇ ಸಾವು : ಠಾಣೆಯ ವಿರುದ್ಧ ದೂರುಪೊಲೀಸ್ ವಶದಲ್ಲಿದ್ದ ಮಗ ತಾಯಿಯ ಎದುರೇ ಸಾವು : ಠಾಣೆಯ ವಿರುದ್ಧ ದೂರು

ಪ್ರತಿಭಟನೆ ವೇಳೆ ಜನರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಇದೇ ಹಿಂಸಾಚಾರಕ್ಕೆ ಕಾರಣವಾಯಿತೇ? ಎಂಬುದು ಇನ್ನೂ ತಿಳಿದಿಲ್ಲ. ಹಿಂಸಾಚಾರದಲ್ಲಿ ಹಲವರು ಗಾಯಗೊಂಡಿದ್ದು, ಯುವಕನ ಸ್ಥಿತಿ ಗಂಭೀರವಾಗಿದೆ.

English summary
One police inspector dead during a clash with people protesting against illegal slaughterhouses in Bulandshahr, Uttar Pradesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X