ವೈರಲ್ ವಿಡಿಯೋ: ಗಂಗಾ ನದಿಯ ಮಧ್ಯೆ ದೋಣಿಯಲ್ಲಿ ಕುಳಿತು ಚಿಕನ್, ಹುಕ್ಕಾ ಪಾರ್ಟಿ!
ಪ್ರಯಾಗರಾಜ್, ಆಗಸ್ಟ್ 30: ಸಂಗಮನಗರಿ ಪ್ರಯಾಗ್ರಾಜ್ನಲ್ಲಿ ತೀರ್ಥಯಾತ್ರೆ ಮಾಡಲು ದೇಶ ಮಾತ್ರವಲ್ಲದೆ ವಿದೇಶಗಳಿಂದಲೂ ಜನರು ಬರುತ್ತಾರೆ. ಗಂಗಾನದಿಯಲ್ಲಿ ಸ್ನಾನ ಮಾಡುವುದರಿಂದ ತಮ್ಮನ್ನು ತಾವು ಧನ್ಯರು ಎಂದು ಭಾವಿಸುತ್ತಾರೆ. ಗಂಗೆ ದೇವಿ ಸ್ವರೂಪಿ ಎಂದು ಪೂಜೆ ಕೂಡ ಮಾಡಲಾಗುತ್ತದೆ. ಈ ಗಂಗಾನದಿಯ ಮಧ್ಯದಲ್ಲಿ ದೋಣಿಯೊಂದರಲ್ಲಿ ಕುಳಿತು ಮಾಂಸ ಹಾಗೂ ಹುಕ್ಕಾ ಸೇದುತ್ತಿರುವ ವಿಡಿಯೋವೊಂದು ಹೊರಬಿದ್ದಿದೆ. ಕೆಲ ಯುವಕರು ಗಂಗಾನದಿಯಲ್ಲಿ ಬೋಟ್ ಮೇಲೆ ಕುಳಿತು ಕೋಳಿ ಮಾಂಸ ತಯಾರಿಸಿದ್ದಲ್ಲದೇ ಹುಕ್ಕಾ ಪಫ್ ಗಳನ್ನೂ ಬಳಸುತ್ತಿರುವ ವಿಡಿಯೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ನಂತರ ಕೆಲವರಿಂದ ವಿರೋಧ ವ್ಯಕ್ತವಾಗಿದೆ. ವಿಡಿಯೋವನ್ನು ಗಮನದಲ್ಲಿಟ್ಟುಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪ್ರಯಾಗರಾಜ್ ಪೊಲೀಸರು ತಿಳಿಸಿದ್ದಾರೆ. ಆ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಪ್ರಯಾಗ್ರಾಜ್ನ ಗಂಗಾ ನದಿಯಲ್ಲಿ ದೋಣಿಯಲ್ಲಿ ಚಿಕನ್ ಮತ್ತು ಹುಕ್ಕಾ ಪಾರ್ಟಿ ಮಾಡುತ್ತಿರುವ ವಿಡಿಯೊವೊಂದು ವೈರಲ್ ಆಗಿದೆ. ದೋಣಿಯಲ್ಲಿ 4-5 ಯುವಕರು ಕುಳಿತಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು. ಒಂದು ಕಡೆ ಕಲ್ಲಿದ್ದಲಿನ ಬೆಂಕಿಯಲ್ಲಿ ಕೋಳಿ ಬೇಯಿಸಲಾಗುತ್ತಿದೆ. ಇನ್ನೊಂದು ಕಡೆ ಹುಕ್ಕಾ ಇಡಲಾಗಿದೆ. ಯುವಕನೊಬ್ಬ ಹುಕ್ಕಾ ಸೇದುತ್ತಿದ್ದಾನೆ. ವೈರಲ್ ವಿಡಿಯೊ ಎಷ್ಟು ಹಳೆಯದು ಮತ್ತು ಎಲ್ಲಿಂದ ಬಂದಿದೆ ಎಂದು ಇನ್ನೂ ದೃಢೀಕರಿಸಲ್ಪಟ್ಟಿಲ್ಲ. ಸಾಮಾಜಿಕ ಮಾಧ್ಯಮಗಳ ಪ್ರಕಾರ, ಈ ವಿಡಿಯೊ ಪ್ರಯಾಗರಾಜ್ನ ದಾರಗಂಜ್ ಪ್ರವಾಹ ಪ್ರದೇಶದಲ್ಲಿ ತೆಗೆಯಲಾಗಿದೆ.
गंगा में नाव पर हुक्का और चिकन पकाने का वीडियो वायरल है। #ViralVideo प्रयागराज में संगम का बताया जा रहा है। @Uppolice pic.twitter.com/4toOWTK6PD
— Vinay Saxena (@vinaysaxenaj) August 30, 2022
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಅತ್ಯಂತ ನಾಚಿಕೆಗೇಡಿನ ಕೃತ್ಯ ಎಂದು ಜನರು ಹೇಳುತ್ತಿದ್ದಾರೆ. ವಿಡಿಯೊವನ್ನು ಹಂಚಿಕೊಳ್ಳುವಾಗ ಬಳಕೆದಾರರು ಹೀಗೆ ಬರೆದಿದ್ದಾರೆ, "ಗಂಗಾ ಕೊಳಕು ಆಗುತ್ತಿದೆ, ಒಂದು ಕಡೆ ಜನರು ಪ್ರವಾಹದಿಂದ ಬಳಲುತ್ತಿದ್ದಾರೆ, ಮತ್ತೊಂದೆಡೆ ಕೆಲವರು ದೋಣಿಯಲ್ಲಿ ಕುಳಿತು ಹುಕ್ಕಾ-ಮಾಂಸ ಇತ್ಯಾದಿಗಳನ್ನು ಸೇವಿಸುತ್ತಿದ್ದಾರೆ'' ಎಂದು ಆಕ್ರೋಶಗೊಂಡಿದ್ದಾರೆ.

ವಿಚಾರಣೆ ಮತ್ತು ತನಿಖೆ
ವೈರಲ್ ವಿಡಿಯೊಗೆ ಸಂಬಂಧಿಸಿದಂತೆ, ವಿಡಿಯೊದ ತಕ್ಷಣದ ಮಾಹಿತಿ ತೆಗೆದುಕೊಳ್ಳಲಾಗಿದೆ ಎಂದು ಪ್ರಯಾಗರಾಜ್ ಪೊಲೀಸರು ಹೇಳಿದ್ದಾರೆ. ಶಂಕಿತರ ವಿಚಾರಣೆ ಮತ್ತು ತನಿಖೆ ನಡೆಯುತ್ತಿದೆ. ಮುಂದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications